ಬಿಎಂಟಿಸಿಗೆ ಬಿಳಿಯಾನೆಯಾದ ವೋಲ್ವೊ ಬಸ್, ನಷ್ಟವೇ ಹೆಚ್ಚು!
ಬೆಂಗಳೂರು, ಜೂನ್ 06 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಕೆಂಪು ವೋಲ್ವೊ ಬಸ್ಗಳು ಬಿಳಿಯಾನೆಯಾಗಿವೆ. ಈ ಬಸ್ಗಳಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾದ ಕಾರಣ ಕೆಎಸ್ಆರ್ಸಿಗೆ ಕೆಲವು ಬಸ್ಗಳನ್ನು ಹಸ್ತಾಂತರ ಮಾಡುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.
ಕೆಲವು ವರ್ಷಗಳ ಹಿಂದೆ ಬಿಎಂಟಿಸಿಗೆ ಸಾಲು-ಸಾಲು ವೋಲ್ವೊ ಬಸ್ ಖರೀದಿ ಮಾಡಲಾಯಿತು. ಆದರೆ, ಇವುಗಳ ದರ ಹೆಚ್ಚು ಎಂಬ ಕಾರಣಕ್ಕೆ ಜನರು ಹವಾನಿಯಂತ್ರಿತ ಬಸ್ಗಳಿಂದ ದೂರವಾದರು. ಆದರೆ, ವಿಮಾನ ನಿಲ್ದಾಣಕ್ಕೆ ವೋಲ್ವೊ ಬಸ್ಗಳನ್ನು ಬಿಎಂಟಿಸಿ ಓಡಿಸುತ್ತಿದೆ.
ಈ ಬಸ್ಗಳ ಖರೀದಿ ಬಳಿಕ ಸಂಸ್ಥೆಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ. ಆದ್ದರಿಂದ, ಕೆಲವು ಬಸ್ಗಳನ್ನು ಕೆಎಸ್ಆರ್ಟಿಸಿಗೆ ನೀಡಿ, ಮೈಸೂರು, ತುಮಕೂರು, ಕೋಲಾರ ಮುಂತಾದ ನಗರಗಳಲ್ಲಿ ಓಡಿಸಲು ಬಿಎಂಟಿಸಿ ಚಿಂತನೆ ನಡೆಸಿದೆ.
ಈ ಬಸ್ಗಳನ್ನು ಕೆಎಸ್ಆರ್ಟಿಸಿಗೆ ನೀಡಿದರೆ ಅದನ್ನು ಸ್ವೀಕಾರ ಮಾಡಲಾಗುತ್ತದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಟಿದೆ. ಈ ಬಸ್ಗಳ ನಿರ್ವಹಣಾ ವೆಚ್ಚವೇ ಅಧಿಕವಾಗಿದೆ. ಆದ್ದರಿಂದ, ಕೆಎಸ್ಆರ್ಟಿಸಿ ಈ ಬಸ್ ಓಡಿಸಿ ಹೇಗೆ ಲಾಭ ಗಳಿಸಲಿದೆ? ಎಂಬುದು ಸದ್ಯದ ಪ್ರಶ್ನೆ.....

600 ಬಸ್ ಹಸ್ತಾಂತರ
ಬೆಂಗಳೂರು ನಗರದಲ್ಲಿ ಬಿಎಂಟಿಸಿಯ 825 ವೋಲ್ವೊ ಬಸ್ ಕಾರ್ಯಚರಣೆ ನಡೆಸುತ್ತಿವೆ. ಇವುಗಳಲ್ಲಿ 600 ಬಸ್ಗಳನ್ನು ಕೆಎಸ್ಆರ್ಟಿಸಿಗೆ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈ ಬಸ್ಗಳ ಕಾರ್ಯಾಚರಣೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ. ಆದ್ದರಿಂದ, ಬಸ್ಗಳನ್ನು ಕೆಎಸ್ಆರ್ಸಿಗೆ ನೀಡಲು ಚಿಂತನೆ ನಡೆದಿದೆ.

70 ರೂ. ಆದಾಯ, 85 ರೂ. ಖರ್ಚು
ಬಿಎಂಟಿಸಿಯ ಕೆಂಪು ವೋಲ್ವೊ ಬಸ್ ಸಂಚಾರದಿಂದ 70 ರೂ. ಆದಾಯ ಬರುತ್ತದೆ. ಆದರೆ, ಖರ್ಚು 85 ರೂ. ಆಗಲಿದೆ. ವೋಲ್ವೊ ಬಸ್ಗಳ ಕಾರ್ಯಾಚರಣೆಯಿಂದಾಗಿ ಬಿಎಂಟಿಸಿಗೆ ಸತತವಾಗಿ ನಷ್ಟ ಉಂಟಾಗುತ್ತಿದೆ. ಈ ಬಸ್ಗಳ ನಿರ್ವಹಣಾ ವೆಚ್ಚವೇ ಅಧಿಕವಾಗಿದ್ದು, ನಷ್ಟಕ್ಕೆ ಪ್ರಮುಖ ಕಾರಣವಾಗಿದೆ.

ಆಯ್ದ ಮಾರ್ಗಗಳಲ್ಲಿ ಮಾತ್ರ ಸಂಚಾರ
ಬಿಎಂಟಿಸಿಯು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಾಯು ವಜ್ರ ವೋಲ್ವೊ ಬಸ್ ಓಡಿಸುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಕಡೆ ಸಂಚರಿಸುವ ಬಸ್ಗಳು ಲಾಭದಾಯಕವಾಗಿವೆ. ಉಳಿ ಮಾರ್ಗದಲ್ಲಿ ಸಂಚಾರ ನಡೆಸುವ ಬಸ್ಗಳಿಂದ ನಷ್ಟವೇ ಹೆಚ್ಚಾಗಿದೆ. ಪ್ರಸ್ತುತ ಆಯ್ದ ಮಾರ್ಗಗಳಲ್ಲಿ ಮಾತ್ರ ಬಸ್ಗಳ ಸಂಚಾರವನ್ನು ನಡೆಸಲಾಗುತ್ತಿದೆ.

ಜಿಲ್ಲಾ ಕೇಂದ್ರಗಳಲ್ಲಿ ಸಂಚಾರ
ಕೆಎಸ್ಆರ್ಟಿಸಿಗೆ ಬಸ್ಗಳನ್ನು ನೀಡಿದರೆ ನಗರ ಸಾರಿಗೆಯಾಗಿ ಅವರು ಬಳಕೆ ಮಾಡಲಿದ್ದಾರೆ. ಮೈಸೂರು, ತುಮಕೂರು, ಕೋಲಾರ ಮುಂತಾದ ಜಿಲ್ಲೆಗಳಲ್ಲಿ ವೋಲ್ವೊ ಬಸ್ ಸಂಚಾರವನ್ನು ನಡೆಸಬಹುದಾಗಿದೆ. ಆದರೆ, ವೋಲ್ವೊ ಬಸ್ಗಳನ್ನು ತೆಗೆದುಕೊಳ್ಳಲು ಕೆಎಸ್ಆರ್ಟಿಸಿ ಒಪ್ಪಿಗೆ ನೀಡಲಿದೆಯೇ?.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications