ಬಿಎಂಟಿಸಿಗೆ ಬಿಳಿಯಾನೆಯಾದ ವೋಲ್ವೊ ಬಸ್, ನಷ್ಟವೇ ಹೆಚ್ಚು!
ಬೆಂಗಳೂರು, ಜೂನ್ 06 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಕೆಂಪು ವೋಲ್ವೊ ಬಸ್ಗಳು ಬಿಳಿಯಾನೆಯಾಗಿವೆ. ಈ ಬಸ್ಗಳಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾದ ಕಾರಣ ಕೆಎಸ್ಆರ್ಸಿಗೆ ಕೆಲವು ಬಸ್ಗಳನ್ನು ಹಸ್ತಾಂತರ ಮಾಡುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.
ಕೆಲವು ವರ್ಷಗಳ ಹಿಂದೆ ಬಿಎಂಟಿಸಿಗೆ ಸಾಲು-ಸಾಲು ವೋಲ್ವೊ ಬಸ್ ಖರೀದಿ ಮಾಡಲಾಯಿತು. ಆದರೆ, ಇವುಗಳ ದರ ಹೆಚ್ಚು ಎಂಬ ಕಾರಣಕ್ಕೆ ಜನರು ಹವಾನಿಯಂತ್ರಿತ ಬಸ್ಗಳಿಂದ ದೂರವಾದರು. ಆದರೆ, ವಿಮಾನ ನಿಲ್ದಾಣಕ್ಕೆ ವೋಲ್ವೊ ಬಸ್ಗಳನ್ನು ಬಿಎಂಟಿಸಿ ಓಡಿಸುತ್ತಿದೆ.
ಈ ಬಸ್ಗಳ ಖರೀದಿ ಬಳಿಕ ಸಂಸ್ಥೆಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ. ಆದ್ದರಿಂದ, ಕೆಲವು ಬಸ್ಗಳನ್ನು ಕೆಎಸ್ಆರ್ಟಿಸಿಗೆ ನೀಡಿ, ಮೈಸೂರು, ತುಮಕೂರು, ಕೋಲಾರ ಮುಂತಾದ ನಗರಗಳಲ್ಲಿ ಓಡಿಸಲು ಬಿಎಂಟಿಸಿ ಚಿಂತನೆ ನಡೆಸಿದೆ.
ಈ ಬಸ್ಗಳನ್ನು ಕೆಎಸ್ಆರ್ಟಿಸಿಗೆ ನೀಡಿದರೆ ಅದನ್ನು ಸ್ವೀಕಾರ ಮಾಡಲಾಗುತ್ತದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಟಿದೆ. ಈ ಬಸ್ಗಳ ನಿರ್ವಹಣಾ ವೆಚ್ಚವೇ ಅಧಿಕವಾಗಿದೆ. ಆದ್ದರಿಂದ, ಕೆಎಸ್ಆರ್ಟಿಸಿ ಈ ಬಸ್ ಓಡಿಸಿ ಹೇಗೆ ಲಾಭ ಗಳಿಸಲಿದೆ? ಎಂಬುದು ಸದ್ಯದ ಪ್ರಶ್ನೆ.....

600 ಬಸ್ ಹಸ್ತಾಂತರ
ಬೆಂಗಳೂರು ನಗರದಲ್ಲಿ ಬಿಎಂಟಿಸಿಯ 825 ವೋಲ್ವೊ ಬಸ್ ಕಾರ್ಯಚರಣೆ ನಡೆಸುತ್ತಿವೆ. ಇವುಗಳಲ್ಲಿ 600 ಬಸ್ಗಳನ್ನು ಕೆಎಸ್ಆರ್ಟಿಸಿಗೆ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈ ಬಸ್ಗಳ ಕಾರ್ಯಾಚರಣೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ. ಆದ್ದರಿಂದ, ಬಸ್ಗಳನ್ನು ಕೆಎಸ್ಆರ್ಸಿಗೆ ನೀಡಲು ಚಿಂತನೆ ನಡೆದಿದೆ.

70 ರೂ. ಆದಾಯ, 85 ರೂ. ಖರ್ಚು
ಬಿಎಂಟಿಸಿಯ ಕೆಂಪು ವೋಲ್ವೊ ಬಸ್ ಸಂಚಾರದಿಂದ 70 ರೂ. ಆದಾಯ ಬರುತ್ತದೆ. ಆದರೆ, ಖರ್ಚು 85 ರೂ. ಆಗಲಿದೆ. ವೋಲ್ವೊ ಬಸ್ಗಳ ಕಾರ್ಯಾಚರಣೆಯಿಂದಾಗಿ ಬಿಎಂಟಿಸಿಗೆ ಸತತವಾಗಿ ನಷ್ಟ ಉಂಟಾಗುತ್ತಿದೆ. ಈ ಬಸ್ಗಳ ನಿರ್ವಹಣಾ ವೆಚ್ಚವೇ ಅಧಿಕವಾಗಿದ್ದು, ನಷ್ಟಕ್ಕೆ ಪ್ರಮುಖ ಕಾರಣವಾಗಿದೆ.

ಆಯ್ದ ಮಾರ್ಗಗಳಲ್ಲಿ ಮಾತ್ರ ಸಂಚಾರ
ಬಿಎಂಟಿಸಿಯು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಾಯು ವಜ್ರ ವೋಲ್ವೊ ಬಸ್ ಓಡಿಸುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಕಡೆ ಸಂಚರಿಸುವ ಬಸ್ಗಳು ಲಾಭದಾಯಕವಾಗಿವೆ. ಉಳಿ ಮಾರ್ಗದಲ್ಲಿ ಸಂಚಾರ ನಡೆಸುವ ಬಸ್ಗಳಿಂದ ನಷ್ಟವೇ ಹೆಚ್ಚಾಗಿದೆ. ಪ್ರಸ್ತುತ ಆಯ್ದ ಮಾರ್ಗಗಳಲ್ಲಿ ಮಾತ್ರ ಬಸ್ಗಳ ಸಂಚಾರವನ್ನು ನಡೆಸಲಾಗುತ್ತಿದೆ.

ಜಿಲ್ಲಾ ಕೇಂದ್ರಗಳಲ್ಲಿ ಸಂಚಾರ
ಕೆಎಸ್ಆರ್ಟಿಸಿಗೆ ಬಸ್ಗಳನ್ನು ನೀಡಿದರೆ ನಗರ ಸಾರಿಗೆಯಾಗಿ ಅವರು ಬಳಕೆ ಮಾಡಲಿದ್ದಾರೆ. ಮೈಸೂರು, ತುಮಕೂರು, ಕೋಲಾರ ಮುಂತಾದ ಜಿಲ್ಲೆಗಳಲ್ಲಿ ವೋಲ್ವೊ ಬಸ್ ಸಂಚಾರವನ್ನು ನಡೆಸಬಹುದಾಗಿದೆ. ಆದರೆ, ವೋಲ್ವೊ ಬಸ್ಗಳನ್ನು ತೆಗೆದುಕೊಳ್ಳಲು ಕೆಎಸ್ಆರ್ಟಿಸಿ ಒಪ್ಪಿಗೆ ನೀಡಲಿದೆಯೇ?.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications