ಅಗಸರು, ಕ್ಷೌರಿಕರ ಪರ್ಯಾಯ ವೃತ್ತಿಗೆ ವಿಶೇಷ ಸಾಲ
ಬೆಂಗಳೂರು, ಜೂ.20: ಮಡಿವಾಳ ಮತ್ತು ಸವಿತಾ ಸಮಾಜದವರು ವಂಶಪಾರಂಪರ್ಯವಾಗಿ ಬಂದಿರುವ ತಮ್ಮ ಕುಲಕಸುಬು ಬಿಟ್ಟು ಬೇರೆ ವೃತ್ತಿಯನ್ನು ಕೈಗೊಳ್ಳಲು ಬಯಸಿದರೆ ಅಂತಹವರಿಗೆ ಆರ್ಥಿಕ ನೆರವು ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರು ತಿಳಿಸಿದ್ದಾರೆ.
ಏನಪ್ಪಾ ಇದು ಯೋಜನೆ ಅಂದರೆ ಮಡಿವಾಳ (ಅಗಸರು) ಮತ್ತು ಸವಿತಾ (ಕ್ಷೌರಿಕರು) ಸಮಾಜದವರು ಮೂಲ ಕಸುಬನ್ನು ಬಿಟ್ಟು ಪರ್ಯಾಯ ವೃತ್ತಿ ಮಾಡುವುದಾದರೆ ರಾಜ್ಯ ಸರಕಾರವು ಅಂತಹವರಿಗೆ ಶೇ. 4ರಷ್ಟು ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡುವ ಪ್ಯಾಕೇಜ್ ಇದಾಗಿದೆ.

ಜೀವನೋಪಾಯಕ್ಕೆ ಪರ್ಯಾಯ ವೃತ್ತಿ ಕೈಗೊಳ್ಳುವವರಿಗೆ ದೇವರಾಜು ಅರಸು ಅಭಿವೃದ್ಧಿ ನಿಗಮದ ವತಿಯಿಂದ 1 ಲಕ್ಷ ರೂ ನಿಂದ 5 ಲಕ್ಷ ರೂ ವರೆಗೆ ಸಬ್ಸಿಡಿ ಸಹಿತ ಸಾಲ ದೊರೆಯಲಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸವ ಸಲುವಾಗಿ ತಲಾ 5 ಕೋಟಿ ರೂ ಮೀಸಲಿಡಲಾಗಿದೆ. (ಸಾಲ ಪಡೆಯುವುದು ಒಂದು ಅದ್ಭುತ ಕಲೆ)
ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಆಂಜನೇಯ ಅವರು ಮಡಿವಾಳ ಮತ್ತು ಸವಿತಾ ಸಮಾಜದವರು ಕುಲಕಸುವಿಗೆ ಪರ್ಯಾಯವಾಗಿ ಅಂದರೆ ಹೈನುಗಾರಿಕೆ, ವ್ಯಾಪಾರ, ಕಂಒಪ್ಯೂಟರ್, ಜೆರಾಕ್ಸ್ ಮಳಿಗೆ ಮುಂತಾದವನ್ನು ಪ್ರಾರಂಭಿಸಿದರೆ ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡುವ ಪ್ಯಾಕೇಜ್ ರೂಪಿಸಲಾಗಿದೆ ಎಂದು ವಿವರ ನೀಡಿದ್ದಾರೆ.
ಹಾಗೆಯೇ, ಎರಡೂ ಸಮುದಾಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಇಲ್ಲದಿದ್ದರೆ ವಿದ್ಯಾಸಿರಿ ಯೋಜನೆಯಡಿ ಮಾಸಿಕ 1500 ರೂ ಸಹಾಯಧನ ನೀಡಲು ಸರಕಾರ ನಿರ್ಧರಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications