SSLC ಮತ್ತು PUC ಪರೀಕ್ಷೆಗಳಲ್ಲಿ ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ: ಪುರುಷೋತ್ತಮ ಬಿಳಿಮಲೆ
ಬೆಂಗಳೂರು, ನವೆಂಬರ್ 07: SSLC ಮತ್ತು PUC ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಿಷ್ಠ ಅಂಕಗಳನ್ನು 33ಕ್ಕೆ ಇಳಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಕನ್ನಡ ಭಾಷಾ ಕಲಿಕೆಗೆ ಮಾರಕವಾಗಿರುವ ಈ ತೀರ್ಮಾನವನ್ನು ಸರ್ಕಾರ ಕೂಡಲೇ ಮರುಪರಿಶೀಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಒತ್ತಾಯಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೇಮಿಸಲಾಗಿರುವ ಕನ್ನಡ ಜಾಗೃತಿ ಸಮಿತಿ ಸದಸ್ಯರ ಕಮ್ಮಟದ ಅಧ್ಯಕ್ಷತೆಯನ್ನು ವಹಿಸಿ ಶುಕ್ರವಾರ ಮಾತನಾಡಿದರು. ಕೇಂದ್ರ ಪಠ್ಯಕ್ರಮದ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಮಾನ ಭೂಮಿಕೆಯನ್ನು ಹೊಂದಬೇಕೆನ್ನುವ ಪ್ರಮುಖ ಕಾರಣಕ್ಕೆ ಸರ್ಕಾರವು ತೆಗೆದುಕೊಂಡಿರುವ ನಿರ್ಧಾರ ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷೆಗೆ ಮಾರಕವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಭಾಷಾ ಕಲಿಕೆಗೆ ಅವಶ್ಯಕವಿರುವ ಗಂಭೀರತೆಯನ್ನು ಈ ತೀರ್ಮಾನವು ಕಸಿದುಕೊಳ್ಳಲಿದೆ. ಭವಿಷ್ಯದಲ್ಲಿ ಸರ್ಕಾರದ ಈ ನಿರ್ಧಾರ ಶಿಕ್ಷಣದಲ್ಲಿ ಕನ್ನಡ ಕಲಿಕೆಗೆ ಪ್ರತಿಕೂಲವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕಿದೆ ಎಂದು ಪುರುಷೋತ್ತಮ ಬಿಳಿಮಲೆ ಅವರು ಕರೆ ನೀಡಿದರು.
GBA ಮಾದರಿಯಲ್ಲಿ 'ಗ್ರೇಟರ್ ತುಮಕೂರು ಪ್ರಾಧಿಕಾರ': ಜಿಲ್ಲೆಗೆ ಸಿಹಿಸುದ್ದಿ ಕೊಟ್ಟ ಜಿ.ಪರಮೇಶ್ವರ
ಈ ಶತಮಾನವು ಅಪೇಕ್ಷಿಸುತ್ತಿರುವ ಕೌಶಲ್ಯವನ್ನು ಪಡೆಯುವಲ್ಲಿ ನಮ್ಮ ವಿದ್ಯಾರ್ಥಿಗಳು ಈಗಾಗಲೇ ಹಿಂದಿದ್ದಾರೆ. ಸರ್ಕಾರದ ಇಂತಹ ತೀರ್ಮಾನಗಳು ಕೌಶಲ್ಯಯುಕ್ತ ಸಮಾಜವನ್ನು ನಿರ್ಮಿಸುವಲ್ಲಿ ನಕಾರಾತ್ಮಕವಾದ ಪ್ರಭಾವವನ್ನು ಬೀರುತ್ತವೆ50 ವರ್ಷ ಹಿಂದಿರುವ ನಮ್ಮ ಬೋಧನ ಕ್ರಮ ಆಧುನಿಕ ಕಾಲಘಟ್ಟಕ್ಕೆ ಸಂವಾದಿಯಾಗಬೇಕಾದ ತುರ್ತು ಅಗತ್ಯವಿದೆ ಎಂದರು.
ರಾಜ್ಯ ಶಿಕ್ಷಣ ನೀತಿ ಸಾರ್ವಜನಿಕ ಚರ್ಚೆ ಆಗಲಿ
ನಾಡಿನ ಅತ್ಯುತ್ತಮ ಶಿಕ್ಷಣ ತಜ್ಞರುಗಳನ್ನೊಳಗೊಂಡ ಸಮಿತಿಯು ರಾಜ್ಯ ಶಿಕ್ಷಣ ನೀತಿಯನ್ನು ಸರ್ಕಾರಕ್ಕೆ ಸಲ್ಲಿಸಿ ಆರು ತಿಂಗಳು ಕಳೆದರೂ ಇದನ್ನು ಸರ್ಕಾರವು ಸಾರ್ವಜನಿಕ ಚರ್ಚೆಗೆ ಒಳಪಡಿಸಿಲ್ಲ. ಇದು ಖಂಡನೀಯ. ಅತ್ಯಾಧುನಿಕವಾದ ಬೋಧನಾ ಕ್ರಮಗಳನ್ನು ವಿಷದಪಡಿಸಿರುವ ರಾಜ್ಯ ಶಿಕ್ಷಣ ನೀತಿಯನ್ನು ಕೂಡಲೇ ಸರ್ಕಾರವು ಅಳವಡಿಸಿಕೊಳ್ಳುವ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ವೃದ್ಧಿಸುವ ಕೆಲಸ ಮಾಡಿದರೆ ಮಾತ್ರ ಕನ್ನಡಿಗರು ಜಾಗತಿಕ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದ ಅವರು, ರಾಜ್ಯ ಶಿಕ್ಷಣ ನೀತಿಯು ಈ ಎಲ್ಲ ಸವಾಲುಗಳಿಗೆ ಉತ್ತರವಾಗಿದ್ದು, ಇದನ್ನು ಆದಷ್ಟು ಶೀಘ್ರ ಸರ್ಕಾರವು ಪರಿಗಣಿಸುವ ವಾತಾವರಣವನ್ನು ಸೃಷ್ಠಿಸಬೇಕಿದೆ ಎಂದು ತಿಳಿಸಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
Pizza 4P's ಬೆಂಗಳೂರಲ್ಲಿ ಶಾಂತಿಗಾಗಿ ಪಿಜ್ಜಾ ಎಂದಾಯ್ತು: ಜಪಾನ್ ಪಿಜ್ಜಾ ಸಂಸ್ಥೆ ಹೇಳಿದ್ದೇನು - ಕನ್ನಡಿಗರು ಏನಂದ್ರು -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ -
Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications