SSLC ಮತ್ತು PUC ಪರೀಕ್ಷೆಗಳಲ್ಲಿ ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ: ಪುರುಷೋತ್ತಮ ಬಿಳಿಮಲೆ
ಬೆಂಗಳೂರು, ನವೆಂಬರ್ 07: SSLC ಮತ್ತು PUC ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಿಷ್ಠ ಅಂಕಗಳನ್ನು 33ಕ್ಕೆ ಇಳಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಕನ್ನಡ ಭಾಷಾ ಕಲಿಕೆಗೆ ಮಾರಕವಾಗಿರುವ ಈ ತೀರ್ಮಾನವನ್ನು ಸರ್ಕಾರ ಕೂಡಲೇ ಮರುಪರಿಶೀಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಒತ್ತಾಯಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೇಮಿಸಲಾಗಿರುವ ಕನ್ನಡ ಜಾಗೃತಿ ಸಮಿತಿ ಸದಸ್ಯರ ಕಮ್ಮಟದ ಅಧ್ಯಕ್ಷತೆಯನ್ನು ವಹಿಸಿ ಶುಕ್ರವಾರ ಮಾತನಾಡಿದರು. ಕೇಂದ್ರ ಪಠ್ಯಕ್ರಮದ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಮಾನ ಭೂಮಿಕೆಯನ್ನು ಹೊಂದಬೇಕೆನ್ನುವ ಪ್ರಮುಖ ಕಾರಣಕ್ಕೆ ಸರ್ಕಾರವು ತೆಗೆದುಕೊಂಡಿರುವ ನಿರ್ಧಾರ ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷೆಗೆ ಮಾರಕವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಭಾಷಾ ಕಲಿಕೆಗೆ ಅವಶ್ಯಕವಿರುವ ಗಂಭೀರತೆಯನ್ನು ಈ ತೀರ್ಮಾನವು ಕಸಿದುಕೊಳ್ಳಲಿದೆ. ಭವಿಷ್ಯದಲ್ಲಿ ಸರ್ಕಾರದ ಈ ನಿರ್ಧಾರ ಶಿಕ್ಷಣದಲ್ಲಿ ಕನ್ನಡ ಕಲಿಕೆಗೆ ಪ್ರತಿಕೂಲವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕಿದೆ ಎಂದು ಪುರುಷೋತ್ತಮ ಬಿಳಿಮಲೆ ಅವರು ಕರೆ ನೀಡಿದರು.
GBA ಮಾದರಿಯಲ್ಲಿ 'ಗ್ರೇಟರ್ ತುಮಕೂರು ಪ್ರಾಧಿಕಾರ': ಜಿಲ್ಲೆಗೆ ಸಿಹಿಸುದ್ದಿ ಕೊಟ್ಟ ಜಿ.ಪರಮೇಶ್ವರ
ಈ ಶತಮಾನವು ಅಪೇಕ್ಷಿಸುತ್ತಿರುವ ಕೌಶಲ್ಯವನ್ನು ಪಡೆಯುವಲ್ಲಿ ನಮ್ಮ ವಿದ್ಯಾರ್ಥಿಗಳು ಈಗಾಗಲೇ ಹಿಂದಿದ್ದಾರೆ. ಸರ್ಕಾರದ ಇಂತಹ ತೀರ್ಮಾನಗಳು ಕೌಶಲ್ಯಯುಕ್ತ ಸಮಾಜವನ್ನು ನಿರ್ಮಿಸುವಲ್ಲಿ ನಕಾರಾತ್ಮಕವಾದ ಪ್ರಭಾವವನ್ನು ಬೀರುತ್ತವೆ50 ವರ್ಷ ಹಿಂದಿರುವ ನಮ್ಮ ಬೋಧನ ಕ್ರಮ ಆಧುನಿಕ ಕಾಲಘಟ್ಟಕ್ಕೆ ಸಂವಾದಿಯಾಗಬೇಕಾದ ತುರ್ತು ಅಗತ್ಯವಿದೆ ಎಂದರು.
ರಾಜ್ಯ ಶಿಕ್ಷಣ ನೀತಿ ಸಾರ್ವಜನಿಕ ಚರ್ಚೆ ಆಗಲಿ
ನಾಡಿನ ಅತ್ಯುತ್ತಮ ಶಿಕ್ಷಣ ತಜ್ಞರುಗಳನ್ನೊಳಗೊಂಡ ಸಮಿತಿಯು ರಾಜ್ಯ ಶಿಕ್ಷಣ ನೀತಿಯನ್ನು ಸರ್ಕಾರಕ್ಕೆ ಸಲ್ಲಿಸಿ ಆರು ತಿಂಗಳು ಕಳೆದರೂ ಇದನ್ನು ಸರ್ಕಾರವು ಸಾರ್ವಜನಿಕ ಚರ್ಚೆಗೆ ಒಳಪಡಿಸಿಲ್ಲ. ಇದು ಖಂಡನೀಯ. ಅತ್ಯಾಧುನಿಕವಾದ ಬೋಧನಾ ಕ್ರಮಗಳನ್ನು ವಿಷದಪಡಿಸಿರುವ ರಾಜ್ಯ ಶಿಕ್ಷಣ ನೀತಿಯನ್ನು ಕೂಡಲೇ ಸರ್ಕಾರವು ಅಳವಡಿಸಿಕೊಳ್ಳುವ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ವೃದ್ಧಿಸುವ ಕೆಲಸ ಮಾಡಿದರೆ ಮಾತ್ರ ಕನ್ನಡಿಗರು ಜಾಗತಿಕ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದ ಅವರು, ರಾಜ್ಯ ಶಿಕ್ಷಣ ನೀತಿಯು ಈ ಎಲ್ಲ ಸವಾಲುಗಳಿಗೆ ಉತ್ತರವಾಗಿದ್ದು, ಇದನ್ನು ಆದಷ್ಟು ಶೀಘ್ರ ಸರ್ಕಾರವು ಪರಿಗಣಿಸುವ ವಾತಾವರಣವನ್ನು ಸೃಷ್ಠಿಸಬೇಕಿದೆ ಎಂದು ತಿಳಿಸಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications