ಬೆಂ ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ನಿಲೇಕಣಿ ಆಸ್ತಿ ಎಷ್ಟು ಗೊತ್ತಾ?
ಬೆಂಗಳೂರು, ಮಾರ್ಚ್ 21: ಬೆಂಗಳೂರು ದಕ್ಷಿಣ ಕ್ಷೇತ್ರದ high-profile ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಅವರ ಆಸ್ತಿ ತುಂಬಾ ತುಂಬಾ ಇದೆ! ಇಂದು ಶುಕ್ರವಾರ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನವೇ ಅವರು ಸಾರ್ವಜನಿಕವಾಗಿ ತಮ್ಮ ಆಸ್ತಿ ವಿವರವನ್ನು ಬಹಿರಂಗಪಡಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿಗೆ ವಿಶೇಷ ಸ್ಥಾನ ಕಲ್ಪಿಸಿದ ಐಟಿ ದೊರೆ ನಂದನ್ ನಿಲೇಕಣಿ ಅವರು ನಾಡಿನ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗುವ ಎಲ್ಲ ಲಕ್ಷಣಗಳೂ ಇವೆ. ಅಂದಹಾಗೆ, ನಿಲೇಕಣಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಬರೋಬ್ಬರಿ 7,700 ಕೋಟಿ ರೂ. ಆಸ್ತಿ ಇದೆ! ಅಷ್ಟೇ ಅಲ್ಲ, ಸಮಾಜ ಸೇವೆಗೆಂದು ವಿವಿಧ ಸಂಘ ಸಂಸ್ಥೆಗಳಿಗೆ 400 ಕೋಟಿ ರೂ. ದಾನ ಮಾಡಿರುವುದಾಗಿಯೂ ನಿಲೇಕಣಿ ಹೇಳಿದ್ದಾರೆ.
ಬೆವರು ಸುರಿಸಿ ಸ್ವಯಂಕೃಷಿಯಿಂದ ಸಂಪಾದಿಸಿದ್ದು:


ಅಂದಹಾಗೆ, ನಿಲೇಕಣಿ ಅವರ ಆಸ್ತಿಯಲ್ಲಿ ಹೆಚ್ಚಿನ ಪಾಲು ಅಂದರೆ ಶೇ. 80ರಷ್ಟು ಇನ್ಫೋಸಿಸ್ ಕಂಪನಿಯ ಷೇರುಗಳ ಮೂಲಕ ಬಂದಿರುವುದಾಗಿದೆ. ನಿಲೇಕಣಿ ಅವರು ಶೇ. 1.45 ರಷ್ಟು ಷೇರು ಹೊಂದಿದ್ದರೆ, ಅವರ ಪತ್ನಿ ರೋಹಿಣಿ ಅವರ ಹೆಸರಲ್ಲಿ ಶೇ. 1.3 ರಷ್ಟು ಷೇರುಗಳಿವೆ (ESOP). 'ತಮ್ಮೀ ಸಂಪಾದನೆ ಅತ್ಯಂತ ಪಾರದರ್ಶಕವಾಗಿದ್ದು, ಕದ್ದುಮುಚ್ಚಿಟ್ಟಿಲ್ಲ. ಯಾವುದೇ ಅಕ್ರಮಗಳಿಂದ ಸಂಪಾದಿಸಿದ್ದೂ ಅಲ್ಲ. ಆದಾಯಕ್ಕೆ ತಕ್ಕ ತೆರಿಗೆಯನ್ನೂ ಪಾವತಿಸುತ್ತಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆ ಇದೆ' ಎಂದು ಅವರು ಹೇಳಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಇನ್ಫೋಸಿಸ್ ಕಂಪನಿ ಸ್ಥಾಪನೆಯಿಂದ ಬಂದ ಈ ಹಣದಿಂದ ನನಗೆ ಆರ್ಥಿಕ ಸ್ವಾತಂತ್ರ್ಯ ದಕ್ಕಿದ ತೃಪ್ತಿಯಿದೆ. ಇನ್ಫೋಸಿಸ್ ಕಂಪನಿಕಯು ಸಾವಿರಾರು ಮಂದಿಗೆ ಸ್ವಯಂಕೃಷಿ ಕೈಗೊಳ್ಳಲು ಉತ್ತೇಜನಕಾರಿಯಾಗಿದೆ. ನಾನು ಈ ಹಣದಿಂದ ಲಕ್ಷಾಂತರ ಮಂದಿಗೆ ಹೆಚ್ಚು ಉದ್ಯೋಗಾವಕಾಶಗಳನ್ನು ನೀಡಬೇಕೆಂದು ಬಯಸಿರುವುದಾಗಿ ಅವರು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications