ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ವಾಪಸ್ ಕೊಟ್ಟ ಜೆಡಿಎಸ್
Recommended Video

ಬೆಂಗಳೂರು, ಮಾರ್ಚ್ 25: ಮುಂಬರುವ ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಹೇಳಿದ್ದ ಜೆಡಿಎಸ್ ಇದೀಗ ವರಸೆ ಬದಲಿಸಿದೆ.
ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ವಾಪಸ್ ನೀಡುವ ಮೂಲಕ ಅಚ್ಚರಿಯ ನಡೆ ಇಟ್ಟಿದೆ.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ಹಾಸನ ಕ್ಷೇತ್ರದಿಂದ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರು ಕಣಕ್ಕಿಳಿಯುತ್ತಾರೆ ಎಂದು ಘೋಷಣೆಯಾಗುತ್ತಿದ್ದಂತೆಯೇ ಮಾಜಿ ಪ್ರಧಾನಿ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸಬಹುದು ಎನ್ನಲಾಗಿತ್ತು.

ಆದರೆ ಇದೀಗ ಜೆಡಿಎಸ್ ಆ ಕ್ಷೇತ್ರವನ್ನುಕಾಂಗ್ರೆಸ್ಸಿಗೆ ಬಿಟ್ಟುಕೊಡುವ ಮೂಲಕ ದೋಸ್ತಿ ಸರ್ಕಾರದ ನಡುವೆ ಈ ಕ್ಷೇತ್ರಕ್ಕಾಗಿ ಇದ್ದ ಭಿನ್ನಾಭಿಪ್ರಾಯಕ್ಕೆ ತಿಲಾಂಜಲಿ ಹಾಡಿದೆ.
"ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ವಾಪಸ್ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ಧನ್ಯವಾದಗಳು. ಕಾಂಗ್ರೆಸ್ ಮತ್ತು ಜೆಡಿಎಸ್ ನ ಒಟ್ಟಾಗಿ ಪ್ರಜಾಪ್ರಭುತ್ವವನ್ನು ನೆಲೆಗೊಳಿಸಲಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ..












Click it and Unblock the Notifications