ಬೆಂಗಳೂರಲ್ಲಿ ಚಂದ್ರಗ್ರಹಣ ಕಾರಣ ಹೆರಿಗೆಗೇ ಅರ್ಧಚಂದ್ರ
Recommended Video

ಬೆಂಗಳೂರು, ಜು.27: ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆ ಗರ್ಭಿಣಿಯರು ಹೆರಿಗೆ ನಿಗದಿ ದಿನಾಂಕವನ್ನು ಮೂರು ದಿನ ಮುಂದಕ್ಕೆ ಹಾಕಲು ವೈದ್ಯರನ್ನು ಒತ್ತಾಯಿಸುತ್ತಿದ್ದಾರೆ. ಶುಭ ಅಶುಭ ಫಲ ಏನೇ ಇರಲಿ ಗ್ರಹಣದ ದಿನ ಹುಟ್ಟಿದ ಮಗು ಎಂಬ ಮಾತು ಬರಬಾರದು ಎಂಬ ಹಿನ್ನೆಲೆಯಲ್ಲಿ ಹರಿಗೆಯನ್ನು ಮುಂದೂಡಲು ಒತ್ತಾಯಿಸುತ್ತಿದ್ದಾರೆ.
ನಗರದ ಪೋರ್ಟಿಸ್ ಆಸ್ಪತ್ರೆಸೇರಿ ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಇದು ತಲೆನೋವಾಗಿದೆ. ಗ್ರಹಣದ ದಿನ ಹೆರಿಗೆಯಾದರೆ ಏನು ಅಡ್ಡ ಪರಿಣಾಮ ಉಂಟಾಗಬಹುದು ಎಂದು ವೈದ್ಯರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಗ್ರಹಣ ದಿನ ಹೆರಿಗೆಯಾಗುತ್ತೆ ಎಂದು ಹೇಳಿದ್ದಾರೆ ಅದನ್ನು ಮುಂದೂಡಲು ಸಾಧ್ಯವೇ ಎಂದು ಜ್ಯೋತಿಷಿಗಳ ಮೊರೆ ಹೋಗಿದ್ದಾರೆ.
ಗ್ರಹಣಕ್ಕೂ ಹೆರಿಗೆಗೂ ಯಾವುದೇ ರೀತಿಯ ಸಂಬಂಧವಿಲ್ಲ, ಹುಟ್ಟುವ ಮಗುವಿಗೆ ಗ್ರಹಣದಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ವೈದ್ಯರು ಮನವರಿಕೆ ಮಾಡಲು ಎಷ್ಟೇ ಪ್ರಯತ್ನಿಸಿದರೂ ಕೇಳುವ ಪರಿಸ್ಥಿತಿಯಲ್ಲಿ ಅವರಿಲ್ಲ, ಮಧ್ಯಮ ವರ್ಗದವರು ಹೆಚ್ಚು ಸಂಖ್ಯೆಯಲ್ಲಿ ಈ ರೀತಿಯ ವಿಚಾರಣೆಗೆ ಬರುತ್ತಿದ್ದಾರೆ.

ಸಂಪ್ರದಾಯಸ್ಥ ಕುಟುಂಬಗಳಂತೂ ಗ್ರಹಣ ಗ್ರಹಚಾರವೆಂದೇ ಭಾವಿಸಿದ್ದಾರೆ. ಹಿರಿಯ ಒತ್ತಡಕ್ಕೆ ಒಳಗಾಗಿ ಬಲವಂತದ ಹೆರಿಗೆಗೆ ಬೇಡಿಕೆ ಇಡುತ್ತಿದ್ದಾರೆ ಇನ್ನು ಶ್ರೀಮಂತ ಕುಟುಂಬಗಳು ಗ್ರಹಣದಿಂದ ಯಾವುದೇ ತೊಂದರೆಯಾಗಬಾರದು ಎಂದು ಮನೆಯಲ್ಲಿಯೇ ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಹೂಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಣ್ಣು ಮಗು ಹುಟ್ಟಿದರೆ 5,500 ರೂಪಾಯಿ ಠೇವಣಿ -
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications