ಹಾಸ್ಯ ಸಾಹಿತಿ ಎಂಎಸ್ ಎನ್ ಅವರ 'ಮದಗಜಗಮನೆ' ಸೆ.2 ಕ್ಕೆ ಲೋಕಾರ್ಪಣೆ
ಬೆಂಗಳೂರು, ಆಗಸ್ಟ್ 30: ಖ್ಯಾತ ಹಾಸ್ಯ ಸಾಹಿತಿ ಎಂ.ಎಸ್.ನರಸಿಂಹಮೂರ್ತಿಯವರ 'ಮದಗಜಗಮನೆ' ಎಂಬ ನಗೆಬರಹದ ಕೃತಿಯು ಸೆಪ್ಟೆಂಬರ್ 2, ಶನಿವಾರ ಲೋಕಾರ್ಪಣೆಗೊಳ್ಳಲಿದೆ.
'ನಾನ್ ಸ್ಟಾಪ್ ಹಾಸ್ಯ ಇರುವ ಈ ಕಾರ್ಯಕ್ರಮಕ್ಕೆ ತಪ್ಪದೇ ಬನ್ನಿ' ಎಂದು ಸ್ವತಃ ಎಂ.ಎಸ್.ಎನ್ ಅವರೇ ಫೇಸ್ ಬುಕ್ ನಲ್ಲಿ ಮನವಿ ಮಾಡಿರುವುದನ್ನು ನೋಡಿದರೆ ಈ ಕಾರ್ಯಕ್ರಮ ಹಾಸ್ಯಾಸಕ್ತರಿಗೆ ರಸದೌತಣ ಎನ್ನುವುದರಲ್ಲಿ ಎರಡು ಮಾತಿಲ್ಲ.

ಬೆಂಗಳೂರಿನ ಬಸವನಗುಡಿಯ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಬೆಳಿಗ್ಗೆ 10:30ಕ್ಕೆ ಸಾಹಿತಿಗಳಾದ ಪ್ರೊ. ಎಂ.ಕೃಷ್ಟೇಗೌಡ, ಎಚ್.ದುಂಡಿರಾಜ್, ವೈ.ವಿ.ಗುಂಡೂರಾವ್ ಅವರ ಸಮ್ಮುಖದಲ್ಲಿ ಕೃತಿ ಬಿಡುಗಡೆಯಾಗಲಿದೆ. ಅಚ್ಯುತರಾವ್ ಪದಕಿ ಅವರು ಅಚ್ಚುಕಟ್ಟಾಗಿ ನಿರೂಪಣಾ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಬೆಳಿಗ್ಗೆ 9:30 ಕ್ಕೆ ಉಪಹಾರ ವ್ಯವಸ್ಥೆಯೂ ಇದೆ.
ವಿಕ್ರಮ್ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕ ಲೋಕಾರ್ಪಣೆಗೆ ಹಾಸ್ಯಾಸಕ್ತರು, ಸಹೃದಯಿಗಳು ಭಾಗವಹಿಸುವಂತೆ ಕೋರಲಾಗಿದೆ.
ಲೇಖಕರ ಬಗ್ಗೆ:
ಎಂ.ಎಸ್.ನರಸಿಂಹಮೂರ್ತಿ ಅವರು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ 1949 ಅಕ್ಟೋಬರ್ 20 ರಂದು ಜನಿಸಿದರು. ತಾಯಿ ಸಾವಿತ್ರಮ್ಮ, ತಂದೆ ಎಂ.ಎ.ಸೂರಪ್ಪ. ಕಾದಂಬರಿ, ಮಕ್ಕಳಸಾಹಿತ್ಯ, ವಿಚಾರ ಸಾಹಿತ್ಯ, ಹಾಸ್ಯ ಸಂಕಲನ ಸೇರಿದಂತೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಛಾಪು ಮೂಡಿಸಿರುವ ಇವರು ಇದುವರೆಗೆ 50 ಪುಸ್ತಕಗಳನ್ನು ಬರೆದಿದ್ದಾರೆ.

ಸ್ವಯಂ ವಧು, ಶ್ರಮದಾನ, ಕಿವುಡು ಸಾರ್ ಕಿವುಡು ಮತ್ತು ಇತರೆ ನಗೆ ನಾಟಕಗಳು, ವರ್ಗಾವರ್ಗಿ ಮುಂತಾದ ಹಾಸ್ಯ ಸಂಕಲನಗಳು, ಮಂದಸ್ಮಿತ ಎಂಬ ಕಾದಂಬರಿ, ಭಾರತದ ರಾಷ್ಟ್ರೀಯತೆ ಎಂಬ ವಿಚಾರ ಸಾಹಿತ್ಯ ಮುಂತಾದವು ಅವರ ಪ್ರಮುಖ ಕೃತಿಗಳು.
ರಾಜ್ಯ ಸಾಹಿತ್ಯ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿರುವ ಎಂಎಸ್ ಎನ್ ಅವರು ಕಿರುತರೆಯ ಕೆಲವು ಹಾಸ್ಯ ಧಾರಾವಾಹಿಗಳಲ್ಲಿ ಸಂಭಾಷಣೆ ಬರೆದ ಕೀರ್ತಿಗೂ ಪಾತ್ರರಾಗಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications