ಸರ್ಕಾರದ ಉಡುಗೊರೆಯನ್ನೇ ನಿರಾಕರಿಸಿದ್ದ ಪ್ರಾಮಾಣಿಕ ಮಧುಕರ್ ಶೆಟ್ಟಿ
ಬೆಂಗಳೂರು, ಡಿಸೆಂಬರ್, 29: ಸರ್ಕಾರ ಉಡುಗೊರೆಯಾಗಿ ಬಿಡಿಎ ನಿವೇಶನವನ್ನು ನೀಡಲು ಮುಂದಾಗಿದ್ದನ್ನೇ ನಿರಾಕರಿಸಿದ್ದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ.
ಅಧಿಕಾರಿಗಳ ಪ್ರಾಮಾಣಿಕತೆ ಹಾಗೂ ಧಕ್ಷತೆ ಕುರಿತು ಸಾಕಷ್ಟು ಓದಿರುತ್ತೀರಿ, ಆದರೆ ಹಲವಾರು ಜನ ಮೇಲ್ನೋಟಕ್ಕೆ ಮಾತ್ರ ಎರಡೂ ಅಂಶಗಳನ್ನು ಹೊಂದಿರುತ್ತಾರೆ, ಮಧುಕರ್ ಶೆಟ್ಟಿ ಅವರಿಗೆ ಸಂಬಂಧಿಸಿದಂತೆ ಧಕ್ಷತೆ ಹಾಗೂ ಪ್ರಾಮಾಣೀಕತೆ ಅಕ್ಷರಶಃ ಹೊಂದುವಂತದ್ದಾಗಿತ್ತು.
ತಮ್ಮ ಸೇವಾ ಅವಧಿಯಲ್ಲಿನ ಧಕ್ಷ ಹಾಗೂ ಪ್ರಾಮಾಣಿಕ ನಿಲುವುಗಳಿಂದ ಸಾಕಷ್ಟು ಭ್ರಷ್ಟರಿಗೆ ಕಂಟಕಪ್ರಾಯರಾಗಿದ್ದರು. ಯಾವ ಸರ್ಕಾರ ಸಚಿವರು ಅಥವಾ ಯಾರ ಮುಲಾಜಿಗೂ ಸಿಲುಕದೆ ಕೆಲಸ ಮಾಡುವುದು ಅವರ ಕಾರ್ಯಪ್ರವೃತ್ತಿಯಾಗಿತ್ತು. ಇದಕ್ಕೆ ಪೂರಕವಾಗಿ ಒಂದು ಉದಾಹರಣೆಯನ್ನು ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಸಂತೋಷ್ ಹೆಗ್ಡೆ ನೀಡಿದ್ದಾರೆ.

''ಲೋಕಾಯುಕ್ತ ಎಸ್ಪಿಯಾಗಿದ್ದಾಗ ಇವರ ಧಕ್ಷ ಸೇವೆ ಹಾಗೂ ತನಿಖಾ ವೈಖರಿಗಳನ್ನು ಮೆಚ್ಚಿ ರಾಜ್ಯ ಸರ್ಕಾರವು ಬಿಡಿಎನಲ್ಲಿ ನಿವೇಶನ ನೀಡಲು ಮುಂದಾಗಿತ್ತು, ಬೆಂಗಳೂರಿನಲ್ಲಿ ನಿವೇಶನಕ್ಕೆ ಚಿನ್ನದಂತಹ ಬೆಲೆ ಇದೆ. ಆದರೆ ಸರ್ಕಾರದ ಈ ಉಡುಗೊರೆಯನ್ನು ಮಧುಕರ್ ಶೆಟ್ಟಿ ನಯವಾಗಿ ತಿರಸ್ಕರಿಸಿದ್ದರು.
ಒಬ್ಬ ಐಪಿಎಸ್ ಅಧಿಕಾರಿಯಾಗಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ ಇದು ಸರ್ಕಾರ ನನಗೆ ಕೊಡುವ ಸಂಬಳಕ್ಕೆ ಮಾಡುವ ಕೆಲಸ ಈ ಕೆಲಸಕ್ಕಾಗಿ ನನಗೆ ನಿವೇಶನದ ಉಡುಗೊರೆ ಅಥವಾ ಇನ್ಯಾವುದೇ ರೀತಿಯ ಉಡುಗೊರೆಯ ಅಗತ್ಯವಿಲ್ಲ ಎನ್ನುವುದನ್ನು ಸರ್ಕಾರಕ್ಕೆ ತಿಳಿಸಿದ್ದರು'' ಎಂದು ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.
ನಾನು ಲೋಕಾಯುಕ್ತನಾಗಿದ್ದಾಗ ಅವರನ್ನು ಹತ್ತಿರದಿಂದ ನೋಡಿದ್ದೇನೆ, ಹೆಚ್ಚು ಮೃದು ಭಾಷಿಯಾಗಿದ್ದ ಇವರು ಯಾವ ವಿಚಾರದಲ್ಲಿಯೂ ರಾಜಿಯಾದವರಲ್ಲ, ಒಬ್ಬ ಸಚಿವ ಹಾಗೂ ಅವರ ಮಗನ ವಿರುದ್ಧ ಭೂಕಬಳಿಕೆ ಆರೋಪ ಬಂದಾಗ ಅದನ್ನು ದಿಟ್ಟವಾಗಿ ತನಿಖೆ ನಡೆಸಿ ಜೈಲಿಗೆ ಹಾಕುವುದರಲ್ಲಿ ಯಶಸ್ವಿಯಾಗಿದ್ದರು. ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿದ್ದರು. ಇಂತಹ ಐಪಿಎಸ್ ಅಧಿಕಾರಿ ಸಿಗುವುದು ವಿರಳ ಎಂದು ಸಂತೋಷ್ ಹೆಗ್ಡೆ ಅಭಿಪ್ರಾಯ ಪಡುತ್ತಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications