ಜೀವವೈವಿಧ್ಯ ಉದ್ಯಾನವಾಗಿ ಮಾರ್ಪಾಡಾದ ಮಡಿವಾಳ ಕೆರೆ ಪ್ರದೇಶ
ಬೆಂಗಳೂರು, ಜೂನ್ 25: ನಗರದ ಮಡಿವಾಳ ಕೆರೆ ಪರಿಸರದಲ್ಲಿ ಜೀವವೈವಿದ್ಯ ಉದ್ಯಾನ ನಿರ್ಮಾಣವಾಗಿದ್ದು ಶೀಘ್ರ ಉದ್ಘಾಟನೆಗೊಳ್ಳಲಿದೆ. 2016ರಿಂದ ಮಡಿವಾಳ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ.
ಬಿಟಿಎಂ ಲೇಔಟ್ ನಲ್ಲಿರುವ ಕೆರೆ ಪ್ರದೇಶ 272 ಮಡಿವಾಳ ಕೆರೆ ಪ್ರದೇಶವಿದೆ ಆ ಪ್ರದೇಶದಲ್ಲಿ ಜೀವವೈವಿಧ್ಯ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗಿದೆ.
ಕರ್ನಾಟಕ ಜ್ಞಾನ ಆಯೋಗ ಅಧ್ಯಕ್ಷ ಡಾ. ಕೆ. ಕಸ್ತೂರಿ ರಂಗನ್ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಉದ್ಯಾನದ ಉದ್ಘಾಟನೆಗೆ ಕೇಳಿಕೊಂಡಿದ್ದಾರೆ. ಇದೀಗ ಅರಣ್ಯ ಇಲಾಖೆ ನಿರ್ವಹಿಸುತ್ತಿರುವ ಉದ್ಯಾನದ ಒಂದು ಭಾಗ ಮಾತ್ರ ಸಾರ್ವಜನಿಕರಿಗೆ ಮುಕ್ತವಾಗಿದೆ.
ಅಲ್ಲಿ ಬಟರ್ಫ್ಲೈ ಪಾರ್ಕ್, ಆರ್ಕಿಡ್ ಕಾರ್ನಿವೋರಸ್ ಸಸ್ಯಗಳು, ಮಣ್ಣಿನ ನಡಿಗೆ ಪಥ, ಸೈಕಲ್ ಟ್ರ್ಯಾಕ್, ಚಿಟ್ಟೆಗಳನ್ನು ಆಕರ್ಷಿಸುವ, ವಿದೇಶಗಳಿಂದ ಬರುವ ಪಕ್ಷಿಗಳ ಸಂತಾನೋತ್ಪತ್ತಿಗೆ ಸಹಾಯ ಆಗುವಂತೆ ಪೊದೆ, ಗಿಡಗಳನ್ನು ಬೆಳೆಸಲಾಗುತ್ತದೆ. ಮುಖ್ಯವಾಗಿ ಸ್ಥಳೀಯ ಪ್ರದೇಶಗಳಲ್ಲಿನ ಗಿಡಮರಗಳನ್ನು ಬೆಳೆಸುವ ಯೋಜನೆ ರೂಪಿಸಲಾಗಿದೆ.

ಹೊಂಗೆ, ಬೇವು, ಹಲಸಿನ ಮರಗಳನ್ನು ಈ ಉದ್ಯಾನದಲ್ಲಿ ಬೆಳೆಸುವುದಿಲ್ಲ. ಬದಲಾಗಿ ವಲಸೆ ಪಕ್ಷಿಗಳನ್ನು ಆಕರ್ಷಿಸುವಂತ ಗಿಡ, ಮರಗಳನ್ನು ಆಯ್ಕೆಮಾಡಲಾಗಿದೆ. ನವದೆಹಲಿಯಲ್ಲಿರುವ ಯಮುನಾ ಜೀವವೈವಿಧ್ಯ ಉದ್ಯಾನ ಮಾದರಿಯಲ್ಲಿ ಈ ಉದ್ಯಾನ ನಿರ್ಮಾಣವಾಗುತ್ತಿದ್ದು, ಮಡಿವಾಳ ಕೆರೆ ಪರಿಸರದ 70 ಎಕರೆ ಜಾಗದಲ್ಲಿ 40 ಎಕರೆ ಜಾಗವನ್ನು ಇದಕ್ಕಾಗಿ ಮೀಸಲಿಡಲಾಗಿದೆ. ಒಟ್ಟು 132 ಬಗೆಯ ಸಸ್ಯಗಳನ್ನು ನೆಡಲಾಗಿದೆ. 40 ರೀತಿಯ ಚಿಟ್ಟೆಗಳನ್ನು ಸಂರಕ್ಷಿಸಲಾಗಿದೆ. ಹಣ್ಣು ಬಿಡುವಂತಹ 100 ಗಿಡಗಳನ್ನು ನೆಡಲಾಗಿದೆ.
ಉದ್ಯಾನದ ಮಣ್ಣಿನ ಗುಣಮಟ್ಟಕ್ಕೆ ಹೊಂದುವಂಥ ಮರಗಳನ್ನು ಆಯ್ಕೆ ಮಾಡಲು ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನಗರದಲ್ಲಿ ವಾಯುಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ ಅಮ್ಲಜನಕವನ್ನು ಹೆಚ್ಚು ಬಿಡುಗಡೆ ಮಾಡುವ ಮರಗಳನ್ನು ಆಯ್ಕೆ ಮಾಡಲಾಗಿದೆ.
ಉದ್ಯಾನದ ನಿರ್ವಹಣೆಗಾಗಿ ಪ್ರತ್ಯೇಕ ಮಂಡಳಿಯನ್ನು ರಚನೆ ಮಾಡಬೇಕು ಎಂದು ಜ್ಞಾನ ಆಯೋಗ ಒತ್ತಾಯಿಸಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಬೆಂಗಳೂರಿನ ಸೋಂಪುರ ಕೆರೆ ಉಳಿವಿಗೆ ಜಲಮಂಡಳಿ ಮಾಸ್ಟರ್ ಪ್ಲಾನ್, ಸಂಸ್ಕರಣಾ ಘಟಕಕ್ಕೆ ಕಲುಷಿತ ನೀರು -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications