ಮಡಿವಾಳ ಪೊಲೀಸರ ಕಾರ್ಯಾಚರಣೆ: 1.85 ಕೋಟಿ ರೂ. ಹ್ಯಾಷ್ ಆಯಿಲ್ ಪತ್ತೆ!
ಬೆಂಗಳೂರು, ಜು. 05: ಕೊರೊನಾ ಲಾಕ್ ಡೌನ್ ಸಡಿಲವಾಗುತ್ತಿದ್ದಂತೆ ಮಾದಕ ವಸ್ತು ಮಾರಾಟ ಜಾಲ ತನ್ನ ಎಡೆ ಬಿಚ್ಚಿದೆ. ಸಂಶಯಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದಾಗ 1.85 ಕೋಟಿ ರೂ. ಮೌಲ್ಯದ ಹ್ಯಾಷ್ ಆಯಿಲ್ ಮತ್ತು ನಾಲ್ಕು ಕೆ.ಜಿ. ಗಾಂಜಾ ಪತ್ತೆಯಾಗಿದೆ. ನಾಲ್ವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬೆಟ್ಟದಾಸನಪುರ ನಿವಾಸಿ ಅನೀಸ್, ಕೋರಮಂಗಲದ ಜಕ್ಕಸಂದ್ರ ನಿವಾಸಿ ಲೋಕೇಶ್, ಮೋಹನ್ ಕುಮಾರ್, ಗುಡ್ಡದಹಳ್ಳಿ ನಿವಾಸಿ ಜಮೀಲ್ ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಹಳೇ ಅಪರಾಧ ಪ್ರಕರಣದ ತನಿಖೆ ನಿಮಿತ್ತ ಮಡಿವಾಳ ಪೊಲೀಸರು ಜೋಗಿ ಕಾಲೋನಿಗೆ ಹೋಗಿದ್ದರು. ಇಲ್ಲಿನ ಸಾರ್ವಜನಿಕ ಪಾರ್ಕ್ ಸಮೀಪ ಆಂಧ್ರ ಪ್ರದೇಶ ನೋಂದಣಿ ವಾಹನ ನಿಂತಿದ್ದು, ಅದರಲ್ಲಿದ್ದ ಐವರು ಯುವಕರು ಅನುಮಾನಸ್ಪದವಾಗಿ ನೋಡುತ್ತಿದ್ದರು. ಇದರಿಂದ ಎಚ್ಚೆತ್ತ ಮಡಿವಾಳ ಪೊಲೀಸರು ಪರಿಶೀಲನೆ ನಡೆಸಿದಾಗ, ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಮಹೀಂದ್ರ ಕಾರಿನಲ್ಲಿ ತರಿಸಿದ್ದಾರೆ. ಇಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ್ದ 1.85 ಕೋಟಿ ರೂ. ಮೌಲ್ಯದ ಹ್ಯಾಷ್ ಆಯಿಲ್ ಮತ್ತು ನಾಲ್ಕು ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

Recommended Video
ಮೊದಲ ಆರೋಪಿ ಅನೀಸ್ ತನ್ನ ಸಂಪರ್ಕದಿಂದ ವಿಶಾಖಪಟ್ಟಣಂನಿಂದ ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿಗೆ ತಂದಿದ್ದರು. ಇದನ್ನು ಬೆಂಗಳೂರಿನಲ್ಲಿ ದುಬಾರಿಗೆ ಬೆಲೆಗೆ ಮಾರಾಟ ಮಾಡಲು ಗಿರಾಕಿಗಳನ್ನು ಹುಡುಕುತ್ತಿದ್ದರು. ಮಡಿವಾಳದ ಜೋಗಿಪಾಳ್ಯಕ್ಕೆ ಬಂದಿದ್ದರು ಎಂಬುದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications