ಗಮನಿಸಿ: ಮಡಿವಾಳ ಸರಹದ್ದಿನಲ್ಲಿ ಸಂಚಾರ ಮಾರ್ಗಬದಲಾವಣೆ
ಬೆಂಗಳೂರು, ಸೆ. 29: ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಸಂಚಾರ ಮಾರ್ಗಬದಲಾವಣೆ ಮಾಡುತ್ತಿರುವ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಇಲ್ಲಿದೆ ಮಾಹಿತಿ....
ಮಡಿವಾಳ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಡಾ.ಮರೀಗೌಡ ರಸ್ತೆಯ ಚೆಕ್ಪೋಸ್ಟ್ ನಿಂದ ತಾವರೆಕೆರೆ ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ಬಿಬಿಎಂಪಿ ವತಿಯಿಂದ 400 ಎಂ.ಎಂ ಕೊಳವೆಯನ್ನು ಅಳವಡಿಸುವ ಸಂಬಂಧ ಕಾಮಗಾರಿಯನ್ನು ಪ್ರಾರಂಭಿಸುತ್ತಿದ್ದು, ಕಾಮಗಾರಿಯು ಪ್ರಾರಂಭವಾದ ದಿನದಿಂದ ರಸ್ತೆಯ ಒಂದು ಭಾಗವು ಸಂಪೂರ್ಣವಾಗಿ ಸಂಚಾರಕ್ಕೆ ಲಭ್ಯವಿರುವುದಿಲ್ಲ.
ಆದ್ದರಿಂದ ಮಡಿವಾಳ ಮುಖ್ಯರಸ್ತೆಯ ಕಡೆಯಿಂದ ಡಾ.ರೀಗೌಡ ರಸ್ತೆ ಮಾರ್ಗವಾಗಿ ಡೈರಿ ವೃತ್ತದ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನ ಸಂಚಾರವನ್ನು ಮಡಿವಾಳ ಚೆಕ್ಪೋಸ್ಟ್ ಬಳಿ ನಿಷೇಧಿಸಲಾಗಿದೆ. ಸದರಿ ಮಾರ್ಗದಲ್ಲಿ ಸಂಚರಿಸುವ ಲಘುವಾಹನಗಳನ್ನು ಮಡಿವಾಳ ಮುಖ್ಯರಸ್ತೆಯಲ್ಲಿ ಸರ್ಜಾಪುರ ಜಂಕ್ಷನ್ ಬಳಿ ಎಡ ತಿರುವು ಪಡೆದು ಸೆಂಟ್ಜಾನ್ ವುಡ್ ಸ್ಟ್ರೀಟ್ ಮುಖಾಂತರ ತಾವರೆಕೆರೆ ರಸ್ತೆ ತಲುಪಿ ಬಲ ತಿರುವು ಪಡೆದು ಡಾ:ಮರೀಗೌಡ ರಸ್ತೆಯನ್ನು ತಲುಪಿ ಡೈರಿ ವೃತ್ತದ ಕಡೆ ಸಂಚರಿಸಬಹುದು.

ಹಾಗೇಯೇ ಮಡಿವಾಳ ಮುಖ್ಯರಸ್ತೆಯಿಂದ ಡೈರಿ ವೃತ್ತದ ಕಡೆಗೆ ಸಂಚರಿಸುವ ಬಾರಿ ವಾಹನಗಳು (ಬಸ್ಸು, ಲಾರಿ, ಗೂಡ್ಸ್ ವಾಹನಗಳು ಮತ್ತು ಇತರೆ ವಾಹನ) ಚೆಕ್ಪೋಸ್ಟ್ ಜಂಕ್ಷನ್ ಬಳಿ ಹೊಸೂರು ಲಷ್ಕರ್ ರಸ್ತೆ ಮುಖಾಂತರ ನೇರವಾಗಿ ಚಲಿಸಿ ಆಡುಗೋಡಿ ಜಂಕ್ಷನ್ ಬಳಿ ಎಡತಿರುವ ಪಡೆದು ಡೈರಿ ವೃತ್ತದ ಕಡೆಗೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.
Recommended Video
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications