Get Updates
Get notified of breaking news, exclusive insights, and must-see stories!

'ಮಾಗಡಿಯಲ್ಲಿ ಬಾಲಕೃಷ್ಣ ವಿರುದ್ಧ ಜೆಡಿಎಸ್ ನಿಂದ ಎ ಮಂಜು ಕಣಕ್ಕೆ'

ಬೆಂಗಳೂರು, ನವೆಂಬರ್ 10 : ಮಾಗಡಿ ಜಿಲ್ಲಾ ಪಂಚಾಯಿತಿ ಸದಸ್ಯ ಎ. ಮಂಜು (ಮಂಜುನಾಥ್‌) ಕಾಂಗ್ರೆಸ್ ತೊರೆದು ಅಧಿಕೃತವಾಗಿ ಶುಕ್ರವಾರ ಜೆಡಿಎಸ್ ಗೆ ಸೇರಿದರು.

ಬೆಂಗಳೂರಿನ ಶೇಷಾದ್ರಪುರಂನಲ್ಲಿರುವ ಜೆಡಿಎಸ್ ನ ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಎಚ್. ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಎ. ಮಂಜು ಜೆಡಿಎಸ್ ಗೆ ಸೇರ್ಪಡೆಯಾದರು.

Magadi Congress ZP member A Manju Joined JDS today at JP Bhavan Bengaluru

ಈ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, "ಜೆಡಿಎಸ್ ಅಮಾನತು ಶಾಸಕ ಮಾಗಡಿ ಬಾಲಕೃಷ್ಣ ವಿರುದ್ಧ ಜೆಡಿಎಸ್ ನಿಂದ ಈ ಬಾರಿ ಎ.ಮಂಜುನಾಥ್ (ಎ.ಮಂಜು) ಸ್ಪರ್ಧೆ ಮಾಡಲಿದ್ದಾರೆ" ಎಂದು ಘೋಷಿಸಿದರು.

ಮಂಜು ಕಾಂಗ್ರೆಸ್ ತೊರೆದು ಇಂದು ಜೆಡಿಎಸ್ ಸೇರಿದ್ದಾರೆ. ಮಾಗಡಿಯಲ್ಲಿ ಎ.ಮಂಜುನಾಥ್ ಬೃಹತ್ ಸಮಾವೇಶ ನಡೆಸಲಿದ್ದಾರೆ ಎಂದರು.

ಕೈ ಪಾಳಯಕ್ಕೆ ಜಿಗಿದಿರುವ ಜೆಡಿಎಸ್ ಭಿನ್ನಮತೀಯ ಶಾಸಕ ಬಾಲಕೃಷ್ಣ ಅವರಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ನ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಅವರನ್ನು ಜೆಡಿಎಸ್ ಸೆಳೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+