ಆಗಸ್ಟ್ನಿಂದ ಮಾಗಡಿ ರಸ್ತೆ-ನಾಯಂಡಹಳ್ಳಿ ಮೆಟ್ರೋ ಸಂಚಾರ?
ಬೆಂಗಳೂರು, ಜುಲೈ 09 : ಮಾಗಡಿ ರಸ್ತೆ-ನಾಯಂಡಹಳ್ಳಿ ನಡುವೆ ನಮ್ಮ ಮೆಟ್ರೋ ರೈಲು ಸೇವೆ ಆರಂಭಿಸಲು ಅನುಮತಿ ನೀಡುವಂತೆ ಕೋರಿ ಬಿಎಂಆರ್ಸಿಎಲ್ ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಗೆ ಪತ್ರ ಬರೆಯಲು ಸಿದ್ಧತೆ ನಡೆಸುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ರೈಲು ಸಂಚಾರ ಆರಂಭವಾಗುವ ನಿರೀಕ್ಷೆ ಇದೆ.
2015ರ ಮಾರ್ಚ್ ಅಂತ್ಯದಿಂದ ಮಾಗಡಿ ರಸ್ತೆ-ನಾಯಂಡಹಳ್ಳಿ ನಡುವಿನ 6.4 ಕಿ.ಮೀ ಮಾರ್ಗದಲ್ಲಿ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರವನ್ನು ಬಿಎಂಆರ್ಸಿಎಲ್ ಆರಂಭಿಸಿದ್ದು, ಅದು ಯಶಸ್ವಿಯಾಗಿದೆ. ಮಾರ್ಗದಲ್ಲಿನ ನಿಲ್ದಾಣಗಳ ಸುರಕ್ಷತೆ ಕುರಿತು ಪ್ರಮಾಣ ಪತ್ರಗಳನ್ನು ಪಡೆಯಲಾಗಿದೆ. [ಮಾಗಡಿ ರಸ್ತೆಯಲ್ಲಿ ಪ್ರಾಯೋಗಿಕ ಸಂಚಾರ ಆರಂಭ]

ಮೆಟ್ರೋ ರೈಲು ಆರಂಭಿಸಲು ರೈಲು ಸುರಕ್ಷತಾ ಆಯುಕ್ತರ ಅನುಮತಿ ಪತ್ರ ಬೇಕಾಗಿದ್ದು, ಪ್ರಾಯೋಗಿಕ ಸಂಚಾರ ವೀಕ್ಷಿಸಿ ಪ್ರಮಾಣ ಪತ್ರ ನೀಡುವಂತೆ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆಯಲು ಬಿಎಂಆರ್ಸಿಎಲ್ ಮುಂದಾಗಿದೆ. ಇನ್ನೂ 2 ದಿನದಲ್ಲಿ ಪತ್ರ ಬರೆಯಲಾಗುತ್ತದೆ. [ಮೆಟ್ರೋ 2ನೇ ಹಂತದ ಕಾಮಗಾರಿ ವಿವರಗಳು]
ರೈಲ್ವೆ ಸುರಕ್ಷತಾ ಆಯುಕ್ತರು ಪ್ರಮಾಣ ಪತ್ರ ನೀಡಿದ ಬಳಿಕ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಆಗಸ್ಟ್ ಮೊದಲ ವಾರದಲ್ಲಿ ರೈಲು ಸಂಚಾರ ಆರಂಭವಾಗಬಹುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.
6 ನಿಲ್ದಾಣಗಳು : ಮಾಗಡಿ ರಸ್ತೆ-ನಾಯಂಡಹಳ್ಳಿ ನಡುವಿನ 6.4 ಕಿ.ಮೀ ಮಾರ್ಗದಲ್ಲಿ ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ, ಮೈಸೂರು ರಸ್ತೆ ನಿಲ್ದಾಣಗಳಿವೆ.

ಈ ಮಾರ್ಗ ನಮ್ಮ ಮೆಟ್ರೋ ಮೊದಲನೇ ಹಂತದ ಯೋಜನೆಗೆ ಸೇರಿದೆ. ಎಂ.ಜಿ.ರಸ್ತೆಯಿಂದ ಹೊರಟ ರೈಲು ಸುರಂಗ ಮಾರ್ಗದ ಮೂಲಕ ಮಾಗಡಿ ರಸ್ತೆ ತಲುಪಲಿದೆ. ಮಾಗಡಿ ರಸ್ತೆಯಿಂದ ನಾಯಂಡಹಳ್ಳಿ ತನಕ ಫ್ಲೈ ಓವರ್ ಮೇಲೆ ರೈಲು ಸಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications