ನ.16ರಂದು ಮಾಗಡಿ ರಸ್ತೆ-ಮೈಸೂರು ರಸ್ತೆ ಮೆಟ್ರೋ ಉದ್ಘಾಟನೆ
ಬೆಂಗಳೂರು, ನವೆಂಬರ್ 13 : ಉದ್ಯಾನ ನಗರಿ ಬೆಂಗಳೂರಿಗರಿಗೆ ಸಿಹಿ ಸುದ್ದಿ. ಮಾಗಡಿ ರಸ್ತೆ-ಮೈಸೂರು ರಸ್ತೆ ನಡುವೆ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 16ರಂದು ರೈಲು ಸಂಚಾರ ಔಪಚಾರಿಕವಾಗಿ ಉದ್ಘಾಟನೆಗೊಳ್ಳಲಿದೆ.
ಮಾಗಡಿ ರಸ್ತೆಯ ಕುಷ್ಠರೋಗ ಆಸ್ಪತ್ರೆ ಬಳಿಯಿಂದ ಮೈಸೂರು ರಸ್ತೆವರೆಗಿನ 6.4 ಕಿ.ಮೀ ಮಾರ್ಗದ ರೈಲು ಸಂಚಾರ ನವೆಂಬರ್ 16ರ ಸಂಜೆ 4 ಗಂಟೆಗೆ ಉದ್ಘಾಟನೆಯಾಗಲಿದೆ ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಕರೋಲಾ ಹೇಳಿದ್ದಾರೆ. [ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ವಿವರಗಳು]

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಸಚಿವ ಅನಂತಕುಮಾರ್ ಅವರು ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಉದ್ಘಾಟನೆಯಾದ ಒಂದೆರಡು ದಿನಗಳ ನಂತರ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ.[ಮೆಟ್ರೋದಲ್ಲಿ ಹಿಂದಿ : ಪ್ರತಿಭಟನೆಯ ದನಿಗೆ ಕಿವಿಯಾಗಬನ್ನಿ]
10 ನಿಮಿಷಕ್ಕೆ ಒಂದು ರೈಲು : 6.4 ಕಿ.ಮೀ ಮಾರ್ಗದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ರೈಲು ಸಂಚಾರ ನಡೆಸಲಿದೆ. ಎಂಜಿ.ರಸ್ತೆಯಿಂದ-ಬೈಯಪ್ಪನಹಳ್ಳಿ ತನಕದ ರೀಚ್ - 1 ಮಾರ್ಗದಲ್ಲಿ ಇರುವಂತೆಯೇ ಟಿಕೆಟ್ ದರವಿರುತ್ತದೆ. ನವೆಂಬರ್ 16ರಂದು ಮಾಗಡಿ ರಸ್ತೆ ನಿಲ್ದಾಣದಲ್ಲಿ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದ್ದು, ಮೈಸೂರು ರಸ್ತೆ ನಿಲ್ದಾಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.
6 ನಿಲ್ದಾಣಗಳು : ಮಾಗಡಿ ರಸ್ತೆ-ಮೈಸೂರು ರಸ್ತೆ ಮಾರ್ಗದಲ್ಲಿ ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ ಮತ್ತು ಮೈಸೂರು ರಸ್ತೆ ಸೇರಿ ಆರು ನಿಲ್ದಾಣಗಳಿವೆ.

ಈಗಾಗಲೇ ನಮ್ಮ ಮೆಟ್ರೋ ರೈಲು ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ಮತ್ತು ಸಂಪಿಗೆ ರಸ್ತೆ-ನಾಗಸಂದ್ರ ನಡುವೆ ಸಂಚಾರ ನಡೆಸುತ್ತಿದೆ. ಈ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾದರೆ ಮೆಟ್ರೋ ಯೋಜನೆಯ ಮೂರನೇ ಮಾರ್ಗ ಉದ್ಘಾಟನೆಯಾದಂತಾಗುತ್ತದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications