ಮಾಗಡಿ ರಸ್ತೆ-ಮೈಸೂರು ರಸ್ತೆ ಮೆಟ್ರೋ ಸಂಚಾರಕ್ಕೆ ಒಪ್ಪಿಗೆ ಸಿಕ್ಕಿತು
ಬೆಂಗಳೂರು, ನವೆಂಬರ್ 08 : ಮಾಗಡಿ ರಸ್ತೆ-ಮೈಸೂರು ರಸ್ತೆ (ನಾಯಂಡಹಳ್ಳಿ) ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾಗಲು ದಿನಗಣನೆ ಆರಂಭವಾಗಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಸಂಚಾರಕ್ಕೆ ಒಪ್ಪಿಗೆ ನೀಡಿದ್ದು, ಉದ್ಘಾಟನಾ ದಿನಾಂಕ ನಿಗದಿ ಮಾಡುವ ಕಾರ್ಯ ಮಾತ್ರ ಬಾಕಿ ಇದೆ.
ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಕರೋಲಾ ಅವರು ಈ ಕುರಿತು ಮಾಹಿತಿ ನೀಡಿದ್ದು, 'ಮಾಗಡಿ ರಸ್ತೆ-ನಾಯಂಡಹಳ್ಳಿ ನಡುವಿನ 6.4 ಕಿ.ಮೀ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸಲು ರೈಲು ಸುರಕ್ಷತಾ ಆಯುಕ್ತರು ಒಪ್ಪಿಗೆ ನೀಡಿದ್ದಾರೆ' ಎಂದು ತಿಳಿಸಿದ್ದಾರೆ. [ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ವಿವರಗಳು]

'ಈ ಮಾರ್ಗವು ರೈಲು ಓಡಾಟಕ್ಕೆ ಸಂಪೂರ್ಣವಾಗಿ ಸಿದ್ಧವಾಗಿದೆ. ದೀಪಾವಳಿಯ ಬಳಿಕ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೊತೆ ಚರ್ಚಿಸಿ ಉದ್ಘಾಟನೆಗೆ ಸೂಕ್ತ ದಿನಾಂಕ ನಿಗದಿಗೊಳಿಸಲಾಗುತ್ತದೆ' ಎಂದರು.[ನಮ್ಮ ಮೆಟ್ರೋ ಸುರಂಗ ಮಾರ್ಗದಲ್ಲಿ ಸಂಚರಿಸಲು ಸಿದ್ಧರಾಗಿ]
6 ನಿಲ್ದಾಣಗಳಿವೆ : ಮಾಗಡಿ ರಸ್ತೆ-ಮೈಸೂರು ರಸ್ತೆ ನಡುವಿನ 6.4 ಕಿ.ಮೀ ಮಾರ್ಗದಲ್ಲಿ ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ, ಮೈಸೂರು ರಸ್ತೆ ನಿಲ್ದಾಣಗಳಿವೆ.

ಈಗಾಗಲೇ ನಮ್ಮ ಮೆಟ್ರೋ ರೈಲು ಎಂ.ಜಿ.ರಸ್ತೆ ಬೈಯಪ್ಪನಹಳ್ಳಿ ಮತ್ತು ಸಂಪಿಗೆ ರಸ್ತೆ ನಾಗಸಂದ್ರ ನಡುವೆ ಸಂಚಾರ ನಡೆಸುತ್ತಿದೆ. ಈ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾದರೆ ಮೆಟ್ರೋ ಯೋಜನೆಯ ಮೂರನೇ ಮಾರ್ಗ ಉದ್ಘಾಟನೆಯಾದಂತಾಗುತ್ತದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್











Click it and Unblock the Notifications