ಸ್ಮಶಾನದಲ್ಲಿ ಶಿವರಾತ್ರಿ ಆಚರಿಸುತ್ತಿರುವ ಯುವಾ ಬ್ರಿಗೆಡ್
ಬೆಂಗಳೂರು, ಫೆಬ್ರವರಿ 13: ದೇಶದಾದ್ಯಂತ ಇಂದು(ಫೆ.13) ಮಹಾ ಶಿವರಾತ್ರಿಯ ಸಂಭ್ರಮ ಮನೆ ಮಾಡಿದೆ. ಮಸಣವಾಸಿಯಾದ ಶಿವನನ್ನು ಆರಾಧಿಸಲು ಯುವಾ ಬ್ರಿಗೇಡ್ ವಿನೂತನ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.
ಫೆ.13 ಮಂಗಳವಾರದಂದು ರಾಜಾಜಿನಗರದ ಹರಿಶ್ಚಂದ್ರ ಘಾಟ್ ಸ್ಮಶಾನದಲ್ಲಿ ಅಪರಾಹ್ನ 4 ಗಂಟೆಗೆ 'ವೀರಬಾಹು' ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಖರ ವಾಗ್ಮಿ, ಯುವಾ ಬ್ರಿಗೆಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಶಿವ ಸ್ಮಶಾನವಾಸಿ. ನಮ್ಮ ಬದುಕಿನ ಯಾತ್ರೆಯ ಆರಂಭಕ್ಕೆ ಅವನೇ ಕಾರಣ. ಹೀಗಾಗಿ ಅಂತ್ಯವು ಕೂಡ ಅವನೊಳಗೇ. ಹಾಗೆಂದೇ ಸ್ಮಶಾನ ಯಾತ್ರೆ ಅತ್ಯಂತ ಮಹತ್ವವಾದದ್ದು. ನಮ್ಮೊಳಗಿನ ಭಯವನ್ನು ತೆಗೆದುಹಾಕುವಂತದ್ದು. ಅದಕ್ಕೆಂದೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಯುವಾ ಬ್ರಿಗೇಡ್ ತಿಳಿಸಿದೆ.

ಕಾರ್ಯಕ್ರಮದಲ್ಲಿ ಏನೆಲ್ಲ ಇರಲಿದೆ...?
* ಅಂದು ಬೆಳಿಗ್ಗೆ ಶಿವನ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಶಿವನ ಆರಾಧಕರಾದ್ದರಿಂದ ಅವರು ಗೋಭಕ್ತರು ಆಗಿರುತ್ತಾರೆ ಆ ಮಂದಿರಗಳ ಹೊರಗೆ ನಿಂತು ಗೋವನ್ನ ಉಳಿಸುವ ಅಭಯಾಕ್ಷರ ಸಹಿಸಂಗ್ರಹಿಸಿ ಯಾವೊಬ್ಬ ಶಿವಭಕ್ತನೂ ಗೋರಕ್ಷಣೆಯ ಸಂಕಲ್ಪದಿಂದ ಹೊರಗಿಲ್ಲದಂತೆ ಮಾಡುವುದು.
* ಸಂಜೆ ಸುಮಾರು ನಾಲ್ಕು ಗಂಟೆಯ ವೇಳೆಗೆ ಆಯ್ಕೆಮಾಡಿದ ಸ್ಮಶಾನದಲ್ಲಿ ಸ್ವಚ್ಛತಾ ಕಾರ್ಯ.
* ಸ್ವಚ್ಛತಾ ಕಾರ್ಯ ನಂತರ ಶಿವ ಪಟವನ್ನಿಟ್ಟು ಪೂಜೆ, ಭಜನೆ, ಸಾಧ್ಯವಾದರೆ ರುದ್ರಪಠಣದಂತ ಕಾರ್ಯಕ್ರಮ, ಉಪನ್ಯಾಸ, ವೀರಬಅಹುವಿಗೆ ನೃತ್ಯ, ಪ್ರಸಾದ ವಿತರಣೆ. ಪೂಜೆ ಮುಗಿಸಿ ಭಕ್ತರು ಮನೆಗೆ ಹೊರಡಬಹುದು. ಅಥವಾ ಯಾವುದಾದರು ಮಂದಿರದ ಹೊರಗೆ ಅಭಯಾಕ್ಷರದ ಸಂಗ್ರಹಕ್ಕೆ ನಿಲ್ಲಬಹುದು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications