ಬೆಂಗಳೂರಿನಲ್ಲಿ ರೈತರ ಪ್ರತಿಭಟನಾ ಪಾದಯಾತ್ರೆ: ಟ್ರಾಫಿಕ್ ಜಾಮ್
ಬೆಂಗಳೂರು, ಡಿಸೆಂಬರ್ 27 : ಮಹಾದಾಯಿ, ಕಳಸಾ-ಬಂಡೂರಿ ಇತ್ಯರ್ಥಕ್ಕಾಗಿ ಉತ್ತರ ಕರ್ನಾಟಕ ಹೊತ್ತಿ ಉರಿಯುತ್ತಿದೆ. ಇದರ ಕಾವು ಬೆಂಗಳೂರನ್ನೂ ತಾಕಿದೆ. ಬಿಜೆಪಿ ಕಚೇರಿಯಿಂದ ರಾಜಭವನದ ವರೆಗೆ ರೈತರು ಪಾದಯಾತ್ರೆ ಹೊರಟಿದ್ದಾರೆ. ಇದರಿಂದ ನಗರದ ವಿವಿಧ ಕಡೆ ಸಂಚಾರ ದಟ್ಟಣೆ ಉಂಟಾಗಿದೆ.
ನಗರದ ಮಲ್ಲೇಶ್ವಂ, ಮಂತ್ರಿ ಮಾಲ್, ಕ್ವೀನ್ಸ್ ರಸ್ತೆ, ವಿಧಾನಸೌಧ, ಚಾಲುಕ್ಯ ವೃತ್ತ, ಶಿವಾನಂದ ವೃತ್ತ, ಫ್ರೀಡಂ ಪಾರ್ಕ್, ಟೌನ್ ಹಾಲ್ ಬಳಿ, ಕಬ್ಬನ್ ಪಾರ್ಕ್ , ಶಿವಾಜಿನಗರ, ಮೇಕ್ರಿ ಸರ್ಕಲ್ ಬಳಿ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಹದಾಯಿ ರೈತರ ಜಾಥಾ ಮಲ್ಲೇಶ್ವರಂನಿಂದ ಚಾಲುಕ್ಯ ಸರ್ಕಲ್ ಮೂಲಕ ರಾಜಭವನಕ್ಕೆ ಹೊರಟಿದೆ.

ಜಾಥಾದಲ್ಲಿ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ. ಮಹದಾಯಿ ಹೋರಾಟ ಸಮಿತಿಯ ಅಧ್ಯಕ್ಷ ವೀರೇಶ್ ಸೊಬರದಮಠ ಅವರ ನೇತೃತ್ವದ ರೈತರು ಬಿಜೆಪಿ ಕಚೇರಿಯಿಂದ ರಾಜಭವನದತ್ತ ಪಾದಯಾತ್ರೆ ಹೊರಟಿದ್ದಾರೆ.
ಜಾತಾದಿಂದ ಟ್ರಾಫಿಕ್ ಸಮಸ್ಯೆ ಉಲ್ಬಣಿಸುತ್ತದೆ ಎಂದು ವಾಹನದ ಮೂಲಕ ತೆರಳುವಂತೆ ರೈತರಿಗೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದರು. ಆದರೆ, ಇದಕ್ಕೆ ಪ್ರತ್ಯುತ್ತರ ಎನ್ನದ ರೈತರು ಪಾದಯಾತ್ರೆ ಮೂಲಕ ರಾಜಭವನದತ್ತ ಹೆಜ್ಜೆ ಹಾಕಿದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications