ಮಹಾಲಕ್ಷ್ಮೀ ಲೇಔಟ್ನಲ್ಲಿ ವಿಜಯಲಕ್ಷ್ಮೀ ಯಾರಿಗೆ?
ಬೆಂಗಳೂರು, ಡಿಸೆಂಬರ್ 5 : 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕುತೂಹಲ ಕೆರಳಿಸಿರುವ ಕ್ಷೇತ್ರ ಮಹಾಲಕ್ಷ್ಮೀ ಲೇಔಟ್. 2018ರಲ್ಲಿ ಜೆಡಿಎಸ್ ಈ ಕ್ಷೇತ್ರದಲ್ಲಿ ಜಯಗಳಿಸಿತ್ತು. 2019ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಕ್ಷೇತ್ರವನ್ನು ವಶಕ್ಕೆ ಪಡೆದುಕೊಳ್ಳಲು ಹೋರಾಟ ಮಾಡುತ್ತಿವೆ. ಜೆಡಿಎಸ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಷ್ಟಪಡುತ್ತಿದೆ.
ಬೆಂಗಳೂರು ನಗರದಲ್ಲಿ ಉಪ ಚುನಾವಣೆ ನಡೆಯುತ್ತಿರುವ ನಾಲ್ಕು ಕ್ಷೇತತ್ರದಲ್ಲಿ ಇದೂ ಒಂದು. ಕಳೆದ ಬಾರಿ ಜೆಡಿಎಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕೆ. ಗೋಪಾಲಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಅರ್ಹಗೊಂಡಿದ್ದರಿಂದ ಉಪ ಚುನಾವಣೆ ಎದುರಾಗಿದೆ. ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಫರ್ಧೆ ಇದೆ.
2018ರಲ್ಲಿ ಜೆಡಿಎಸ್ನಿಂದ ನಿಂತು ಗೆದ್ದಿದ್ದ ಕೆ. ಗೋಪಾಲಯ್ಯ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ. ಸ್ಥಳೀಯ ನಾಯಕರು ಗೋಪಾಲಯ್ಯ ಬಿಜೆಪಿ ಸೇರ್ಪಡೆಗೊಳ್ಳಲು ವಿರೋಧ ಮಾಡಿದ್ದರು. ಅಂತಿಮವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿ ಜೈಕಾರ ಕೂಗಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ಗೋಪಾಲಯ್ಯ, ಕಾಂಗ್ರೆಸ್ನಿಂದ ಎಂ. ಶಿವರಾಜು ಮತ್ತು ಜೆಡಿಎಸ್ನಿಂದ ಗಿರೀಶ್ ಕೆ. ನಾಶಿ ಪ್ರಮುಖರು. ಕರ್ನಾಟಕ ರಾಷ್ಟ್ರ ಸಮಿತಿಯಿಂದ ಗಿರೀಶ್ ಗೌಡ. ನಟ ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷದಿಂದ ವಿ. ಆಶಾರಾಣಿ ಅಭ್ಯರ್ಥಿಗಳು.
ಕ್ಷೇತ್ರದಲ್ಲಿ ಒಟ್ಟು 270 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಇವುಗಳಲ್ಲಿ ಸೂಕ್ಷ್ಮ ಮತಗಟ್ಟೆಗಳು 74. ಕ್ಷೇತ್ರದಲ್ಲಿ ಒಟ್ಟು 2,85,869 ಮತದಾರರು ಇದ್ದಾರೆ. ಇವರಲ್ಲಿ ಪುರಷರು 1,47,353, ಮಹಿಳೆಯರು 1,38,474. ಕಳೆದ ಬಾರಿ ಶೇ 53ರಷ್ಟು ಮತದಾನವಾಗಿತ್ತು.
ಜಾತಿವಾರು ಲೆಕ್ಕಚಾರ: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಒಕ್ಕಲಿಗರು ನಿರ್ಣಾಯಕರು. 85,500 ಮತದಾರರು ಇದ್ದಾರೆ. ಉಳಿದಂತೆ ಲಿಂಗಾಯತರು 24,000, ಕುರುಬರು 10,000, ಬ್ರಾಹ್ಮಣ 30,000, ಪ. ಜಾತಿ/ವರ್ಗ 55,000,
ಮುಸ್ಲಿಂ 14,000, ನೇಕಾರ 23,000 ಮತ್ತು ಇತರರು 42,000
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 7 ವಾರ್ಡ್ಗಳಿವೆ. ನಂದಿನಿ ಲೇಔಟ್ನಲ್ಲಿ ಮಾತ್ರ ಬಿಜೆಪಿಯ ಬಿಬಿಎಂಪಿ ಸದಸ್ಯರಿದ್ದಾರೆ. ವೃಷಭಾವತಿ ನಗರ ಮತ್ತು ಮಾರಪ್ಪನಪಾಳ್ಯದಲ್ಲಿ ಜೆಡಿಎಸ್ನಿಂದ ಆಯ್ಕೆಯಾದ ಸದಸ್ಯರಿದ್ದರೂ ಅವರು ಬಿಜೆಪಿಗೆ ಉಪ ಚುನಾವಣೆಯಲ್ಲಿ ಬೆಂಬಲ ಕೊಟ್ಟಿದ್ದು ಕುತೂಹಲಕ್ಕೆ ಕಾರಣವಾಗಿದೆ.
ವಾರ್ಡ್ಗಳ ಪಟ್ಟಿ
1) ನಂದಿನಿಲೇಔಟ್ - ಬಿಜೆಪಿ
2) ಶಂಕರಮಠ - ಕಾಂಗ್ರೆಸ್
3) ಮಹಾಲಕ್ಷ್ಮಿಪುರಂ - ಕಾಂಗ್ರೆಸ್
4) ನಾಗಪುರ - ಜೆಡಿಎಸ್
5) ವೃಷಭಾವತಿ ನಗರ - ಜೆಡಿಎಸ್ (ಬಿಜೆಪಿ ಸಪೋರ್ಟ್)
6) ಮಾರಪ್ಪನಪಾಳ್ಯ - ಜೆಡಿಎಸ್ (ಬಿಜೆಪಿ ಸಪೋರ್ಟ್)
7) ಶಕ್ತಿಗಣಪತಿ ನಗರ - ಜೆಡಿಎಸ್
2018ರ ಚುನಾವಣಾ ಫಲಿತಾಂಶ: 2018ರ ಚುನಾವಣೆಯಲ್ಲಿ ಕೆ. ಗೋಪಾಲಯ್ಯ (ಜೆಡಿಎಸ್) 88218 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ನೆ.ಲ ನರೇಂದ್ರಬಾಬು 47,118, ಕಾಂಗ್ರೆಸ್ನ ಮಂಜುನಾಥ್ 20,496 ಮತ ಪಡೆದಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications