ಮಹಾಲಕ್ಷ್ಮೀ ಲೇಔಟ್ನಲ್ಲಿ ವಿಜಯಲಕ್ಷ್ಮೀ ಯಾರಿಗೆ?
ಬೆಂಗಳೂರು, ಡಿಸೆಂಬರ್ 5 : 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕುತೂಹಲ ಕೆರಳಿಸಿರುವ ಕ್ಷೇತ್ರ ಮಹಾಲಕ್ಷ್ಮೀ ಲೇಔಟ್. 2018ರಲ್ಲಿ ಜೆಡಿಎಸ್ ಈ ಕ್ಷೇತ್ರದಲ್ಲಿ ಜಯಗಳಿಸಿತ್ತು. 2019ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಕ್ಷೇತ್ರವನ್ನು ವಶಕ್ಕೆ ಪಡೆದುಕೊಳ್ಳಲು ಹೋರಾಟ ಮಾಡುತ್ತಿವೆ. ಜೆಡಿಎಸ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಷ್ಟಪಡುತ್ತಿದೆ.
ಬೆಂಗಳೂರು ನಗರದಲ್ಲಿ ಉಪ ಚುನಾವಣೆ ನಡೆಯುತ್ತಿರುವ ನಾಲ್ಕು ಕ್ಷೇತತ್ರದಲ್ಲಿ ಇದೂ ಒಂದು. ಕಳೆದ ಬಾರಿ ಜೆಡಿಎಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕೆ. ಗೋಪಾಲಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಅರ್ಹಗೊಂಡಿದ್ದರಿಂದ ಉಪ ಚುನಾವಣೆ ಎದುರಾಗಿದೆ. ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಫರ್ಧೆ ಇದೆ.
2018ರಲ್ಲಿ ಜೆಡಿಎಸ್ನಿಂದ ನಿಂತು ಗೆದ್ದಿದ್ದ ಕೆ. ಗೋಪಾಲಯ್ಯ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ. ಸ್ಥಳೀಯ ನಾಯಕರು ಗೋಪಾಲಯ್ಯ ಬಿಜೆಪಿ ಸೇರ್ಪಡೆಗೊಳ್ಳಲು ವಿರೋಧ ಮಾಡಿದ್ದರು. ಅಂತಿಮವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿ ಜೈಕಾರ ಕೂಗಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ಗೋಪಾಲಯ್ಯ, ಕಾಂಗ್ರೆಸ್ನಿಂದ ಎಂ. ಶಿವರಾಜು ಮತ್ತು ಜೆಡಿಎಸ್ನಿಂದ ಗಿರೀಶ್ ಕೆ. ನಾಶಿ ಪ್ರಮುಖರು. ಕರ್ನಾಟಕ ರಾಷ್ಟ್ರ ಸಮಿತಿಯಿಂದ ಗಿರೀಶ್ ಗೌಡ. ನಟ ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷದಿಂದ ವಿ. ಆಶಾರಾಣಿ ಅಭ್ಯರ್ಥಿಗಳು.
ಕ್ಷೇತ್ರದಲ್ಲಿ ಒಟ್ಟು 270 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಇವುಗಳಲ್ಲಿ ಸೂಕ್ಷ್ಮ ಮತಗಟ್ಟೆಗಳು 74. ಕ್ಷೇತ್ರದಲ್ಲಿ ಒಟ್ಟು 2,85,869 ಮತದಾರರು ಇದ್ದಾರೆ. ಇವರಲ್ಲಿ ಪುರಷರು 1,47,353, ಮಹಿಳೆಯರು 1,38,474. ಕಳೆದ ಬಾರಿ ಶೇ 53ರಷ್ಟು ಮತದಾನವಾಗಿತ್ತು.
ಜಾತಿವಾರು ಲೆಕ್ಕಚಾರ: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಒಕ್ಕಲಿಗರು ನಿರ್ಣಾಯಕರು. 85,500 ಮತದಾರರು ಇದ್ದಾರೆ. ಉಳಿದಂತೆ ಲಿಂಗಾಯತರು 24,000, ಕುರುಬರು 10,000, ಬ್ರಾಹ್ಮಣ 30,000, ಪ. ಜಾತಿ/ವರ್ಗ 55,000,
ಮುಸ್ಲಿಂ 14,000, ನೇಕಾರ 23,000 ಮತ್ತು ಇತರರು 42,000
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 7 ವಾರ್ಡ್ಗಳಿವೆ. ನಂದಿನಿ ಲೇಔಟ್ನಲ್ಲಿ ಮಾತ್ರ ಬಿಜೆಪಿಯ ಬಿಬಿಎಂಪಿ ಸದಸ್ಯರಿದ್ದಾರೆ. ವೃಷಭಾವತಿ ನಗರ ಮತ್ತು ಮಾರಪ್ಪನಪಾಳ್ಯದಲ್ಲಿ ಜೆಡಿಎಸ್ನಿಂದ ಆಯ್ಕೆಯಾದ ಸದಸ್ಯರಿದ್ದರೂ ಅವರು ಬಿಜೆಪಿಗೆ ಉಪ ಚುನಾವಣೆಯಲ್ಲಿ ಬೆಂಬಲ ಕೊಟ್ಟಿದ್ದು ಕುತೂಹಲಕ್ಕೆ ಕಾರಣವಾಗಿದೆ.
ವಾರ್ಡ್ಗಳ ಪಟ್ಟಿ
1) ನಂದಿನಿಲೇಔಟ್ - ಬಿಜೆಪಿ
2) ಶಂಕರಮಠ - ಕಾಂಗ್ರೆಸ್
3) ಮಹಾಲಕ್ಷ್ಮಿಪುರಂ - ಕಾಂಗ್ರೆಸ್
4) ನಾಗಪುರ - ಜೆಡಿಎಸ್
5) ವೃಷಭಾವತಿ ನಗರ - ಜೆಡಿಎಸ್ (ಬಿಜೆಪಿ ಸಪೋರ್ಟ್)
6) ಮಾರಪ್ಪನಪಾಳ್ಯ - ಜೆಡಿಎಸ್ (ಬಿಜೆಪಿ ಸಪೋರ್ಟ್)
7) ಶಕ್ತಿಗಣಪತಿ ನಗರ - ಜೆಡಿಎಸ್
2018ರ ಚುನಾವಣಾ ಫಲಿತಾಂಶ: 2018ರ ಚುನಾವಣೆಯಲ್ಲಿ ಕೆ. ಗೋಪಾಲಯ್ಯ (ಜೆಡಿಎಸ್) 88218 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ನೆ.ಲ ನರೇಂದ್ರಬಾಬು 47,118, ಕಾಂಗ್ರೆಸ್ನ ಮಂಜುನಾಥ್ 20,496 ಮತ ಪಡೆದಿದ್ದರು.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications