ಗೂಂಡಾ ಕಾಯ್ದೆಯಡಿ ರೌಡಿ ವಿನಯ್ ಅಲಿಯಾಸ್ ಮಿಂಡ ಬಂಧನ
ಬೆಂಗಳೂರು, ಸೆ. 3: ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕುಖ್ಯಾತ ರೌಡಿ ಆಸಾಮಿಯಾದ ವಿನಯ ಕುಮಾರ್ ಅಲಿಯಾಸ್ ಮಿಂಡ (30 ವರ್ಷ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Recommended Video
ಮಹಾಲಕ್ಷ್ಮೀಲೇಔಟ್ ವ್ಯಾಪ್ತಿಯ ಶ್ರೀರಾಮನಗರದ ನಿವಾಸಿಯಾದ ವಿನಯ್ ಕುಮಾರ್ ನನ್ನು ಗೂಂಡಾಕಾಯ್ದೆಯಲ್ಲಿ ಬಂಧಿಸಲಾಗಿದೆ. ಈತನು ಬೆಂಗಳೂರು ನಗರದ ನಂದಿನಿಲೇಔಟ್, ಮಹಾಲಕ್ಷ್ಮೀಲೇಔಟ್, ಪೀಣ್ಯ, ವಿಲ್ಸನ್ಗಾರ್ಡನ್, ವಯಾಲಿಕಾವಲ್ ಪೊಲೀಸ್ ಠಾಣೆಗಳಲ್ಲಿ ಸಕ್ರಿಯವಾಗಿ ರೌಡಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದು, ಈತನ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ಸುಲಿಗೆ, ದರೋಡೆಗೆ ಸಂಚು, ದರೋಡೆ, ಹಲ್ಲೆ ಹಾಗೂ ಇತರೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ ಎಂದು ಪೊಲೀಸರು ಹೇಳಿದರು.
ಈತನು 2010 ನೇ ಸಾಲಿನಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನೆ. 2015 ನೇ ಸಾಲಿನಲ್ಲಿ ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣೆಯಲ್ಲಿ ಗೂಂಡಾ ಕಾಯ್ದೆಯಡಿ ಬಂಧನವಾಗಿತ್ತು. ಆದರೆ 2016 ಜುಲೈ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ. ನಂತರ ವಿಲ್ಸನ್ಗಾ ರ್ಡನ್, ಮಹಾಲಕ್ಷ್ಮೀಲೇಔಟ್, ನಂದಿನಿ ಲೇಔಟ್ ಪೊಲೀಸ್ ಠಾಣೆಗಳಲ್ಲಿನ ಕೊಲೆ ಪ್ರಯತ್ನ, ದರೋಡೆಗೆ ಸಂಚು, ಹಲ್ಲೆ ಪ್ರಕರಣಗಳಲ್ಲಿ ತೊಡಗಿಕೊಂಡಿದ್ದ. ರೌಡಿ ಚಟುವಟಿಕೆ ಮತ್ತು ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದು ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುತ್ತಿರುವುದರಿಂದ ಈತನನ್ನು ಗೂಂಡಾಕಾಯ್ದೆಯಡಿಯಲ್ಲಿ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ವಿನಯ್ ಬಂಧಿಸಲು ಕಾಂತರಾಜ್ ಹೆಚ್.ಎಂ. , ಪೊಲೀಸ್ ಇನ್ಸ್ಪೆಕ್ಟರ್, ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣೆ ರವರು ವರದಿಯನ್ನು ಸಲ್ಲಿಸಿದ್ದು, ಸದರಿ ವರದಿಯನ್ನು ಪರಿಶೀಲಿಸಿದ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರು ಈತನನ್ನು ಗೂಂಡಾಕಾಯ್ದೆಯಡಿಯಲ್ಲಿ ಬಂಧಿಸಲು ಆದೇಶ ಮಾಡಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications