ವಿಧಾನ ಸೌಧ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ವಿಗ್ರಹ ಸ್ಥಾಪನೆ
ಬೆಂಗಳೂರು, ಜುಲೈ 27: ವಿಧಾನ ಸೌಧದ ಪಶ್ಚಿಮ ದ್ವಾರದ ಬಲಭಾಗದಲ್ಲಿರುವ ರಾಕ್ ಗಾರ್ಡನ್ ನಲ್ಲಿ ಆದಿ ಮಹರ್ಷಿ ವಾಲ್ಮೀಕಿ ತಪೋವನ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.
"ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಈ ತಪೋವನ ಮತ್ತು ಪುಥ್ಥಳಿ ನಿರ್ಮಾಣವಾಗಲಿದೆ. ಇನ್ನು ಒಂದುವರೆ ತಿಂಗಳಲ್ಲಿ ವಿಗ್ರಹ ಅನಾವರಣ ಮಾಡಲಾಗುವುದು," ಎಂದು ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಸಮಿತಿ ಅಧ್ಯಕ್ಷ ವಿ.ಎಸ್ ಉಗ್ರಪ್ಪ ತಿಳಿಸಿದ್ದಾರೆ.

"ಪುಥ್ಥಳಿ ಸುತ್ತಲೂ ಉದ್ಯಾನ ಅಭಿವೃದ್ಧಿಗೆ ತೋಟಗಾರಿಕೆ ಇಲಾಖೆಯಿಂದ 30 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಸೀತೆ, ಲವ-ಕುಶ ಹಾಗೂ ಕೆಲವು ಪ್ರಾಣಿ-ಪಕ್ಷಿಗಳ ಪ್ರತಿಕೃತಿಯನ್ನು ಇಲ್ಲಿ ಅಳವಡಿಸುವಂತೆ ತೋಟಗಾರಿಕೆ ಇಲಾಖೆಗೆ ಸೂಚಿಸಲಾಗಿದೆ. ವಾಲ್ಮೀಕಿ ಜನಾಂಗದವರು 50 ಲಕ್ಷ ರೂ. ವೆಚ್ಚದಲ್ಲಿ 25 ಟನ್ ತೂಕದ 12 ಅಡಿ ಎತ್ತರದ ಕಪ್ಪು ಶಿಲೆ ವಿಗ್ರಹವನ್ನು ತಮಿಳುನಾಡಿನ ಮಹಾಬಲಿಪುರಂನಲ್ಲಿ ಕೆತ್ತಿಸಿದ್ದಾರೆ," ಎಂದು ಅವರು ಮಾಹಿತಿ ನೀಡಿದ್ದಾರೆ.
ಈಗಾಗಲೇ ವಾಲ್ಮೀಕಿ ಪುತ್ಥಳಿ ಬೆಂಗಳೂರಿಗೆ ಆಗಮಿಸಿದ್ದು, ಇನ್ನೇನು ಪೀಠದ ಮೇಲೆ ವಿಗ್ರಹ ಸ್ಥಾಪನೆ ಕೆಲಸ ಆರಂಭವಾಗಲಿದೆ. ಒಂದುವರೆ ತಿಂಗಳಲ್ಲಿ ವಿಗ್ರಹ ಅನಾವರಣ ಮಾಡುವ ಯೋಜನೆಯನ್ನು ಸರಕಾರ ಹಾಕಿಕೊಂಡಿದೆ.
ಮುಖ್ಯಮಂತ್ರಿಗಳೇ ಮಹರ್ಷಿ ವಾಲ್ಮೀಕಿ ಪುಥ್ಥಳಿಯನ್ನು ಅನಾವರಣ ಮಾಡಲಿದ್ದಾರೆ ಎಂದು ಉಗ್ರಪ್ಪ ಮಾಹಿತಿ ನೀಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications