ಗಾಂಧಿಯನ್ನು ನೆನಪಿಸಿಕೊಳ್ಳುವ ಅನಿವಾರ್ಯತೆ ಹೆಚ್ಚಿದೆ
ಬೆಂಗಳೂರು, ಅಕ್ಟೋಬರ್ 2: ಮೋಹನದಾಸ ಕರಮಚಂದ ಗಾಂಧಿ ಮಹಾತ್ಮಗಾಂಧಿಯಾದದ್ದು, ವಿಶ್ವದ ಸಾಧಕರ ಅಗ್ರಸಾಲಿನಲ್ಲಿ ನಿಂತದ್ದು ಭಾರತದ ಹೆಮ್ಮೆ. ಪ್ರಪಂಚದ ಎಲ್ಲರೂ ನಿಬ್ಬೆರಗಾಗುವಂತೆ ಬದುಕಿದ ಗಾಂಧಿ ಅವರು ನಮ್ಮಿಂದ ದೂರವಾಗುತ್ತಿದ್ದಾರೆಯೇ? ಎಂಬ ಅನುಮಾನಗಳು ಮೂಡುತ್ತಿರುವ ನಡುವೆ ಗಾಂಧಿಯನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಅನಿವಾರ್ಯತೆ ಹೆಚ್ಚಾಗಿದೆ ಎಂದು ಅಮರ ಬಾಪೂ ಚಿಂತನದ ಉಪಸಂಪಾದಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಅಭಿಪ್ರಾಯಪಟ್ಟರು.
ನಗರದ ಕೆಂಗೇರಿ ಉಪನಗರದ ಶೇಷಾದ್ರಿಪುರಂ ಅಕಾಡೆಮಿ ಆಫ್ ಬ್ಯುಸಿನೆಸ್ ಸ್ಟಡೀಸ್ನಲ್ಲಿ ಗಾಂಧಿ ಅಧ್ಯಯನ ಕೇಂದ್ರ ಬುಧವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ 150ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಗತ್ತು ಕ್ಷಿಪ್ರಗತಿಯಲ್ಲಿ ಬದಲಾಗುತ್ತಿದೆ. ತಂತ್ರಜ್ಞಾನ, ಯಾಂತ್ರಿಕ ಜೀವನಕ್ಕೆ ಇಷ್ಟಪಟ್ಟೋ, ಕಷ್ಟಪಟ್ಟೋ ನಾವು ಹೊಂದಿಕೊಳ್ಳುತ್ತಿದ್ದೇವೆ. ಹಿಂದಿನದ್ದೆಲ್ಲವನ್ನೂ ಕೈಬಿಟ್ಟು, ಮುಂದಿನದು ಏನೊಂದೂ ಕಾಣದಾದಾಗ, ಥಟ್ಟನೆ ನಮಗೆ ಗಾಂಧಿ ನೆನಪಾಗುತ್ತಾರೆ .ಏಕೆಂದರೆ ಗಾಂಧಿ ಕಾಲಾತೀತ ವ್ಯಕ್ತಿ . ಕಸ್ತೂರ ಬಾ ಮತ್ತು ಗಾಂಧೀಜಿಯವರ 150 ನೇ ವರ್ಷಾಚರಣೆಯ ಸಂದರ್ಭದಲ್ಲಿ ನಾವಿರುವುದೇ ನಮ್ಮ ಪುಣ್ಯ. ಭಾರತ ಮಾತ್ರವಲ್ಲದೇ ಜಗತ್ತಿನ ಬಹುತೇಕ ರಾಷ್ಟ್ರಗಳು ಗಾಂಧೀಜಿ ಅವರ ನಡೆ ನುಡಿಗಳಿಗೆ ಕಾರಣವಾದ ಸತ್ಯ ಮತ್ತು ಅಹಿಂಸೆಯ ಮಹತ್ವ ಹಾಗೂ ಅವಶ್ಯಕತೆಯನ್ನು ಮನಗಾಣಲು ಪ್ರಾರಂಭಿಸಿವೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಜಯರಾಮ ಮಾತನಾಡಿ, ಇಂದಿಗೆ 150 ವರ್ಷಗಳ ಹಿಂದೆ ಮೋಹನದಾಸ ಕರಮಚಂದ ಗಾಂಧಿ ಎಂಬ ಅಪರೂಪದ ಬೆಳಕು ಗುಜರಾತಿನಲ್ಲಿ ಜನಿಸಿತು. ನಂತರ ಮಹಾತ್ಮ ಗಾಂಧಿ ಎಂದು ಹೆಸರಾದ ಇವರ ಬಗ್ಗೆ ಭಾರತದ ಹೊಸ ಪೀಳಿಗೆಯ ಯುವಕರಿಗೆ ಹೆಚ್ಚು ಗೊತ್ತಿಲ್ಲ. ಆದರೆ ಜಗತ್ತು ಮಾತ್ರ ಗಾಂಧೀಜಿಯನ್ನು ಸದಾ ನೆನಪಿಸಿಕೊಳ್ಳುತ್ತಿದೆ. ಯುವ ಸಮುದಾಯ ಗಾಂದಿ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.
ಗಾಂಧಿ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಭಾಷಣ, ಗಾಯನ , ಸಮೂಹ ಚರ್ಚೆ, ರಸಪ್ರಶ್ನೆ, ಭಿತ್ತಿಪತ್ರ ವಿನ್ಯಾಸ, ಮುಂತಾದ ಸ್ಪರ್ಧೆಗಳ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಮಂಜುನಾಥ್ ಜಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications