60 ಕೆರೆಗಳನ್ನು ಬಿಬಿಎಂಪಿಗೆ ವರ್ಗಾಯಿಸಿದ ಬಿಡಿಎ
ಬೆಂಗಳೂರು, ನವೆಂಬರ್ 23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ( ಬಿಡಿಎ) ಅರವತ್ತು ಕೆರೆಗಳನ್ನು ಹಣದ ಕೊರತೆ ಹಿನ್ನೆಲೆ ಬಿಬಿಎಂಪಿಗೆ ವರ್ಗಾಯಿಸಿದೆ.
ಈ ವರ್ಗವಾದ ಕೆರೆಗಳಲ್ಲಿ ಬೆಳಂದೂರು ಮತ್ತು ವರ್ತೂರು ಕೆರೆಗಳೂ ಸೇರಿವೆ.ಬೆಂಗಳೂರು ವಲಯಕ್ಕೆ ಸೇರುವ ಒಟ್ಟು 91 ಕೆರೆಗಳ ಅಭಿವೃದ್ದಿಗಾಗಿ ರು 2000 ಕೋಟಿಗೂ ಅಧಿಕ ಹಣ ವ್ಯಯವಾಗುತ್ತದೆ ಎಂಬ ಕಾರಣವನ್ನು ಬಿಡಿಎ ಹೇಳಿದೆ.

ವರದಿಯ ಪ್ರಕಾರ ನಾಲ್ಕು ವರ್ಷಗಳ ಹಿಂದೆ ಬಿಡಿಎಗೆ ಸೇರಿದ 117 ಕೆರೆಗಳಲ್ಲಿ 26 ಕೆರೆಗಳನ್ನು ಬಿಬಿಎಂಪಿಗೆ ವರ್ಗಾಯಿಸಲಾಗಿತ್ತು. ಈಗ ಉಳಿದ 91 ಕೆರೆಗಳಲ್ಲಿ 60 ಕೆರೆಗಳನ್ನು ಬಿಬಿಎಂಪಿಗೆ ಬಿಡಿಎ ವರ್ಗಾಯಿಸಿದೆ.[1000 ಕೋಟಿ ಮೌಲ್ಯದ 189 ಎಕರೆ ಭೂಮಿ ಒತ್ತುವರಿ ತೆರವು]
ಉಕ್ಕಿನ ಸೇತುವೆಯಂತಹ ದೊಡ್ಡ ಯೋಜನೆಗಳಿಗೆ ಕೈ ಹಾಕುವ ಬಿಡಿಎ ಕೆರೆಗಳ ನಿರ್ವಹಣೆಯಲ್ಲಿ ಹಿಂದೆ ಬೀಳುತ್ತಿರುವುದು ಸಾಮಾನ್ಯರ ಹುಬ್ಬೇರಿಸುವಂತೆ ಮಾಡಿದೆ.
ಬಿಡಿಎ ಅಧಿಕಾರಿಗಳು ಹೇಳುವ ಪ್ರಕಾರ ಅಪಾರ್ಟ್ ಮೆಂಟ್ ಗಳು, ಲೇಔಟ್ ಗಳನ್ನು ನಿರ್ಮಾಣ ಮಾಡವ ಅಭಿವೃದ್ಧಿ ಕಾರ್ಯದಲ್ಲಿ ಬಿಡಿಎ ತೊಡಗಿಕೊಂಡಿದೆ. ಹಾಗೆಯೇ ಉಕ್ಕಿನ ಸೇತುವೆ ಸಹ ಅದರಲ್ಲಿದೆ. ಆದರೆ ಕೆರೆಗಳ ನಿರ್ವಹಣೆ ಮಾಡುವುದು ಹೆಚ್ಚಿನ ಹೊರೆ ಜೊತೆಗೆ ಹೆಚ್ಚು ಹಣವೂ ಬೇಕಾಗಿರುವುದರಿಂದ ಬಿಬಿಎಂಪಿಗೆ ವರ್ಗಾವಣೆ ಮಾಡಿದೆ ಎಂದಿದ್ದಾರೆ.
ಇನ್ನು ಬಿಬಿಎಂಪಿಗೆ ಸರ್ಕಾರ ಕೊಡವ ಅನುದಾನದಲ್ಲೇ ಕೆರೆ ನಿರ್ವಹಣೆ, ಕರೆಂಟ್, ಕುಡಿಯುವ ನೀರು ಒದಗಿಸುವ ಅನೇಕ ಕೆಲಸಗಳನ್ನು ಮಾಡಬೇಕಿದೆ.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು












Click it and Unblock the Notifications