ಸಂಕ್ರಾಂತಿ ಸಂಭಮ: ಗವಿ ಗಂಗಾಧರೇಶ್ವರನ ಪಾದ ಸ್ಪರ್ಶಿಸಿದ ಸೂರ್ಯ ರಶ್ಮಿ
ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಇಂದು (ಜನವರಿ 15) ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯ ರಶ್ಮಿ ಸ್ಪರ್ಶಿಸಿತು. ಮಧ್ಯಾಹ್ನದಿಂದ ದೇವಾಲಯಕ್ಕೆ ಆಗಮಿಸಿದ್ದ ಅನೇಕ ಭಕ್ತಾಧಿಗಳು ಸಂಜೆ ಸೂರ್ಯ ರಶ್ಮಿಯನ್ನು ಕಣ್ತುಂಬಿಕೊಂಡರು. ಸೂರ್ಯ ರಶ್ಮಿ ಸ್ಪರ್ಶಿಸಿದ ವೇಳೆ ಪೂರ್ಣವಾಧ್ಯಗಳೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.
ಗುರುವಾರ ಮಕರ ಸಂಕ್ರಾಂತಿ ಹಾಗೂ ಸೂರ್ಯ ರಶ್ಮಿ ದೇಗುಲ ಪ್ರವೇಶ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ವಿವಿಧ ಪೂಜೆಗಳು, ಮಂಗಳಾರತಿಗಳು ನಡೆದವು. ಮಧ್ಯಾಹ್ನ ನಂತರ ನಾಗರಿಕರು ದೇಗುಲದ ಹತ್ತಿರ ಜಮಾಯಿಸಿದರು. ಸಂಜೆ 5.2ಕ್ಕೆ ಸೂರ್ಯ ರಶ್ಮಿ ಕಿರಣಗಳು ಗವಿ ಗಂಗಾಧರೇಶ್ವರನ ಪಾದ ಸ್ಪರ್ಶಿಸಿದವು. ಅವಧಿಗೂ ಕೊಂಚ ಮೊದಲು ಸೂರ್ಯ ಕಿರಣಗಳು ಸ್ಪರ್ಶವಾದವು. ಈ ವೇಳೆ ಈಶ್ವರನಿಗೆ ಕ್ಷೀರಾಭಿಷೇಕಗಳು ವಿಶೇಷ ಪೂಜೆಗಳು ನಡೆದವು.

ಮಕರ ಸಂಕ್ರಾಂತಿಯಂದು ಸೂರ್ಯ ದಕ್ಷಿಣ ಪಥದಿಂದ ಉತ್ತರಪಥ ಸಂಚಲನ ಮಾಡುತ್ತಾನೆ. ಈ ವೇಳೆ ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರನ ಗರ್ಭಗುಡಿ ಪ್ರವೇಶಿಸುತ್ತವೆ. ಸುಮಾರು ಎರಡು ಮೂರು ನಿಮಿಷಗಳ ಅಂತರದಲ್ಲಿ ಈ ಪ್ರಕ್ರಿಯೆ ಕಣ್ತುಂಬಿಕೊಳ್ಳಲು ಅಪಾರ ಭಕ್ತ ಗಣ ದೇವಾಲಯಕ್ಕೆ ಆಗಮಿಸಿದ್ದರು. ಇದು ಪ್ರತಿವರ್ಷ ಸಂಕ್ರಾಂತಿಯಂದು ನಡೆಯುವ ಸಂಭ್ರಮವಾಗಿದೆ.
ಈ ವರ್ಷವು ದೇವಾಲಯ ಮುಂದೆ ಪೆಂಡಾಲ್ ಹಾಕಿ, ದೊಡ್ಡ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ನಿರಂತರವಾಗಿ ದೇವಾಲಯಕ್ಕೆ ಬಂದ ಭಕ್ತರು ಆವರಣದಲ್ಲಿ ಕೂತು ಪೂಜೆಗಳನ್ನು, ಸಂಜೆ ಸೂರ್ಯರಶ್ಮಿ ಸ್ಪರ್ಶವನ್ನು ವೀಕ್ಷಿಸಿದರು. ಗುರುವಾರ ಜನ ಜಂಗುಳಿ ಕಂಡು ಬಂತು. ಎಲ್ಲಿ ನೋಡಿದರೂ ಸಾಂಪ್ರದಾಯಿಕ ಉಡುಗೆಯಲ್ಲಿ ಮಹಿಳೆಯರು, ಪುರುಷರು ಆಗಮಿಸಿದ್ದು ಕಂಡು ಬಂತು. ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದು ಸಾಮಾನ್ಯವಾಗಿತ್ತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications