ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಣ್ಣಿನ ಗಣಪತಿ ಉಚಿತವಾಗಿ ಪಡೆಯಿರಿ
Recommended Video
ಬೆಂಗಳೂರು, ಆಗಸ್ಟ್ 27: ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ಬಳಕೆ ಹೆಚ್ಚಿಸಲು ಈ ಬಾರಿ ಕೂಡಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿದೆ. ಇದಕ್ಕೆ ವಿದ್ಯಾರಣ್ಯ ಯುವಕ ಸಂಘ ಕೂಡಾ ಕೈಜೋಡಿಸಿದೆ.
ಗಣಪತಿ ತಯಾರಿಸಲು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಬಳಸುವುದನ್ನು ತಡೆಗಟ್ಟಲು ಅಗತ್ಯ ಕ್ರಮ ತೆಗೆದುಕೊಂಡರೂ ಹಾನಿಕಾರಕ ಬಣ್ಣಗಳ ಬಳಕೆ ಮಾಡುವುದು ಸಂಪೂರ್ಣವಾಗಿ ನಿಂತಿಲ್ಲ. ಇದಕ್ಕೆ ಪ್ರತಿಯಾಗಿ ಪರಿಸರ ಸ್ನೇಹಿ ಗಣಪನನ್ನು ತಯಾತರಿಸಿ, ಉಚಿತವಾಗಿ ನೀಡುವ ಮೂಲಕ ಜನ ಜಾಗೃತಿಯನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಣ್ಣಿನ ಗಣಪತಿ ಮೂರ್ತಿಯನ್ನು ತಯಾರಿಸಲಾಗುತ್ತದೆ. ಒಂದೇ ಸ್ಥಳದಲಿ ಅತಿ ಹೆಚ್ಚು ಮಣ್ಣಿನ ಗಣೇಶ ತಯಾರಿಸಿದ ದಾಖಲೆ ನಿರ್ಮಿಸಲು ಈ ಬಾರಿ ಯತ್ನಿಸಲಾಗುತ್ತಿದೆ.

ದಿನಾಂಕ: ಆಗಸ್ಟ್ 27ರಿಂದ ಆಗಸ್ಟ್ 30, 2019ರ ಅವಧಿ
ಸಮಯ: ಸಂಜೆ 6.30 ರಿಂದ 8 ಗಂಟೆವರೆಗೆ
ಸ್ಥಳ: ನ್ಯಾಷನಲ್ ಕಾಲೇಜು ಆಟದ ಮೈದಾನ, ಬಸವನಗುಡಿ, ಬೆಂಗಳೂರು
ಜೇಡಿಮಣ್ಣಿನಿಂದ ಗಣೇಶ ಮೂರ್ತಿಯನ್ನು ಏಕಕಾಲಕ್ಕೆ 3,000 ಮಂದಿ ತಯಾರಿಸುವ ಕಾರ್ಯಕ್ರಮ ಇದಾಗಿದ್ದು, ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಣ್ಣಿನ ಗಣಪನನ್ನು ಸಿದ್ಧಪಡಿಸಿರುವ ಈ ಕಾರ್ಯಕ್ರಮಕ್ಕೆ ವಿವಿಧ ರಂಗದ ಗಣ್ಯರು, ಕಲಾವಿದರು ಕೈಜೋಡಿಸಲಿದ್ದಾರೆ.

ಮಣ್ಣಿನಿಂದ ರೂಪು ತಾಳಿದ್ದು ಮತ್ತೆ ಮಣ್ಣನ್ನೇ ಸೇರಬೇಕು ಎಂಬ ನೀತಿಯೂ ಇದರಲ್ಲಿದೆ. ನಿರಾಕಾರವನ್ನು ಪೂಜಿಸಲು ಸಾಧ್ಯವಾಗದವರು ಸಾಕಾರ ದೇವರನ್ನಾಗಿ ಮೂರ್ತಿಯನ್ನು ಪೂಜಿಸುತ್ತಾರೆ. ಆದ್ದರಿಂದಲೇ ವಿವಿಧ ರೀತಿಯ ಮೂರ್ತಿಗಳನ್ನು ಮಾಡಿ ಅದರಲ್ಲಿ ದೇವರನ್ನು ಕಾಣುತ್ತೇವೆ. ಆದರೆ ಮಣ್ಣಿನಿಂದ ಮಾಡಿದ ಯಾವುದೇ ಮೂರ್ತಿಯನ್ನೇ ಆದರೂ ನೀರಿನಲ್ಲಿ ಮುಳುಗಿಸುವ ಮೂಲಕ ಅದು ಮತ್ತೆ ಮಣ್ಣು ಸೇರುವಂತೆ ಮಾಡುವಂತೆ ಪುರಾಣಗಳು ಹೇಳುತ್ತವೆ. ಇದು ಪರಿಸರ ಸ್ನೇಹಿ ಕೂಡಾ ಎಂದು ಆಯೋಜಕರು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications