ಮಳವಳ್ಳಿ ಅತ್ಯಾಚಾರ: ಪ್ರಕರಣ ಮಕ್ಕಳ ಆಯೋಗಕ್ಕೆ ಎಎಪಿ ದೂರು, ಸಿಬಿಐ ವಹಿಸಿ
ಬೆಂಗಳೂರು, ಅಕ್ಟೋಬರ್ 14: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಸಿಬಿಐ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್ ಆದ್ಮಿ ಪಕ್ಷ ಮಹಿಳಾ ಘಟಕ ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿತು.
ಶುಕ್ರವಾರ ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಎಎಪಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಅವರು, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅಕ್ಟೋಬರ್ 11ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಗೈದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್ ಒಳಗೆ ಎಸೆಯಲಾಗಿರುತ್ತದೆ. ಘಟನೆಗೆ ಸಂಬಂಧಿಸಿ ಕಾಂತರಾಜು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ದುಷ್ಕೃತ್ಯ ಎಸೆದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದರು.
ಈ ಬಂಧಿತ ಆರೋಪಿಯು ಈ ಹಿಂದೆಯೂ ಇಂತಹ ದುಷ್ಕೃತ್ಯ ಎಸಗಿದ್ದರೂ ಆತನ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿರುವುದಿಲ್ಲ. ಪರಿಣಾಮವಾಗಿಯೇ ಇದೀಗ ಮಳವಳ್ಳಿಯ ಅಮಾಯಕ ಬಾಲಕಿ ಇದೇ ಆಸಾಮಿಯಿಂದ ಬಲಿಯಾಗಿದ್ದಾಳೆ ಎಂದು ಅವರು ಕಿಡಿ ಕಾರಿದರು.

ಪೊಲೀಸ್ ಇಲಾಖೆ ವೈಫಲ್ಯ
ಇದೊಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸ್ ಇಲಾಖೆಯ ವೈಫಲ್ಯವು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು. ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಕಾರಣರಾದ ಎಲ್ಲ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸುವುದು ಕಡಿಮೆಯಾಗುತ್ತದೆ ಎಂದು ಕುಶಲಸ್ವಾಮಿ ತಿಳಿಸಿದರು.

ಮಾಧ್ಯಮಗಳಲ್ಲಿ ವರದಿಯಾದ ಪ್ರಕರಣಗಳಷ್ಟೇ ಪರಿಗಣನೆ
ಪೊಲೀಸರು ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದರಲ್ಲಿ ರಾಜ್ಯ ಗೃಹ ಇಲಾಖೆ ವಿಫಲವಾಗಿದೆ. ಇದರಿಂದಾಗಿ ಕಾಮುಕರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಮಾಧ್ಯಮಗಳಲ್ಲಿ ದೊಡ್ಡದಾಗಿ ವರದಿಯಾಗುವ ಪ್ರಕರಣಗಳನ್ನಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರವಾದಾಗ, ಸಂತ್ರಸ್ತೆಯು ಆ ವೇಳೆ ಅಲ್ಲಿಗೆ ಬಂದಿದ್ದೇ ತಪ್ಪೆಂಬಂತೆ ಗೃಹ ಸಚಿವರ ಮಾತಾನಾಡಿದ್ದರು. ಗೃಹ ಸಚಿವರ ಇಂತಹ ಮನಸ್ಥಿತಿಯಿಂದಾಗಿ ಕಾಮುಕರಿಗೆ ಹೆದರಿಕೆ ಇಲ್ಲದಂತಾಗಿದೆ ಎಂದು ಆರಗ ಜ್ಞಾನೇಂದ್ರ ವಿರುದ್ಧ ಕುಶಲಸ್ವಾಮಿ ಆಕ್ರೋಶ ಹೊರಹಾಕಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications