ತಮಿಳು ಧಾರಾವಾಹಿ ಪೋಸ್ಟ್: ಕ್ಷಮೆ ಕೇಳಿದ ಮಾಳವಿಕಾ
ಬೆಂಗಳೂರು, ಸೆಪ್ಟೆಂಬರ್ 20: ಅಂತೂ ನಟಿ ಮಾಳವಿಕಾ ಅವಿನಾಶ್ ಅವರು ಕ್ಷಮೆ ಕೋರಿದ್ದಾರೆ. ಅವರು ಪೋಸ್ಟ್ ಮಾಡಿದ್ದ ತಮಿಳು ಧಾರಾವಾಹಿಯೊಂದರ ಬಗೆಗಿನ ನೆನಪಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಂದಹಾಗೆ ಅವರು ಮೊದಲು ಪೋಸ್ಟ್ ಮಾಡಿದ್ದು ಏನು ಗೊತ್ತಾ?

ನಾನು ಅಭಿನಯಿಸಿದ್ದ 'ಅಣ್ಣಿ' ಧಾರಾವಾಹಿ ಮತ್ತೆ ಜಯಾ ಟಿ.ವಿ.ಯಲ್ಲಿ ಮಧ್ಯಾಹ್ನ 1.30ಕ್ಕೆ ಪ್ರಸಾರವಾಗಲಿದೆ. ಆ ಧಾರಾವಾಹಿಯ ಒಂದು ಎಪಿಸೋಡ್ ಕೂಡ ಜಯಲಲಿತಾ ಅವರು ತಪ್ಪಿಸುತ್ತಿರಲಿಲ್ಲ...ಹೀಗೆ ತಮಿಳು ಧಾರಾವಾಹಿ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಆ ನಂತರ ಮಾಳವಿಕಾ ಅವಿನಾಶ್ ಅವರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಲಾಗಿತ್ತು.[ಬಿಜೆಪಿ ಬ್ಲೂ ಫಿಲಂ ಮುಗಿದ ಸರಕು: ಮಾಳವಿಕಾ]

ಅದಕ್ಕೆ ಆಕೆ, ನಾನು ಕನ್ನಡ ವಿರೋಧಿಯೂ ಅಲ್ಲ, ಕರ್ನಾಟಕ ವಿರೋಧಿಯೂ ಅಲ್ಲ. ಕಾವೇರಿ ವಿಚಾರವನ್ನು ಬಿಟ್ಟು ಹೇಳುವುದಾದರೆ ನಾನು ಹದಿನೈದು ವರ್ಷದ ಹಿಂದೆ ಕೆ.ಬಾಲಚಂದರ್ ಅವರ ಜೊತೆ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡಿದ್ದೇನೆ ಅಷ್ಟೇ. ಕೆ.ಬಾಲಚಂದರ್ ಅವರು ಹಲವು ಕನ್ನಡ ಸಿನಿಮಾಗಳನ್ನು ಮಾಡಿದ್ದಾರೆ. ನನ್ನ ಪೋಸ್ಟ್ ಡಿಲೀಟ್ ಮಾಡಿದ್ದೀನಿ. ಯಾರಿಗಾದರೂ ನೋವಾಗಿದ್ದರೆ ಕ್ಷಮೆಯೂ ಕೇಳ್ತೀನಿ ಎಂದಿದ್ದಾರೆ.[ಪ್ರಧಾನಿ ಮೋದಿ ಅವರಿಂದ ಕಾವೇರಿ ವಿವಾದ ಅಂತ್ಯ ಸಾಧ್ಯ : ದೇವೇಗೌಡ]

ಮುಂದುವರಿದು, ಕರ್ನಾಟಕದಲ್ಲಿ ಕಾವೇರಿ ಅಗತ್ಯದ ಬಗೆಗಿನ ಹಲವು ಪ್ರತಿಭಟನೆ ಹಾಗೂ ಚರ್ಚೆಯಲ್ಲಿ ಭಾಗವಹಿಸಿದ್ದೇನೆ. ಕನ್ನಡಿಗರಿಗೆ ನನ್ನ ಕನ್ನಡಾಭಿಮಾನದ ಬಗ್ಗೆ ಚೆನ್ನಾಗಿಯೇ ಗೊತ್ತಿದೆ. ಅವರು ನನ್ನನ್ನು ಕ್ಷಮಿಸುತ್ತಾರೆ. ಯಾರಿಗಾದರೂ ನೋವಾಗಿದ್ದರೆ ಮತ್ತೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications