"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು
ಬೆಂಗಳೂರು: ಕರ್ನಾಟಕದ ರಾಜಧಾನಿ, ಅಪ್ಪಟ ಕನ್ನಡದ ನೆಲ ಬೆಂಗಳೂರನ್ನು 'ಭಾರತದ ಸ್ಟಾರ್ಟಪ್ ಹಬ್' ಎಂದು ಕರೆಯಲಾಗುತ್ತದೆ. ಆದರೆ, ಇಂದು ಅದೇ ಬೆಂಗಳೂರು ಪರಭಾಷಿಕರ ಅತಿಯಾದ ಹಾವಳಿಯಿಂದಾಗಿ ತನ್ನ ಮೂಲ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿದೆಯೇ ಎಂಬ ಆತಂಕ ಕನ್ನಡಿಗರಲ್ಲಿ ಮನೆಮಾಡಿದೆ. ಇತ್ತೀಚೆಗಷ್ಟೇ ಆಂಧ್ರದ ಯುವತಿಯೊಬ್ಬಳು ಮಾರತ್ತಹಳ್ಳಿಯನ್ನು "ಮಿನಿ ಆಂಧ್ರ" ಎಂದು ಕರೆದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಬೆನ್ನಲ್ಲೇ, ಈಗ ಕೇರಳಿಗರು ಬೆಂಗಳೂರನ್ನು "ಮಲಯಾಳಿಗಳ ಹಬ್" ಎಂದು ಕರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.
ವಲಸಿಗರ ಹಾವಳಿ ಬಗ್ಗೆ ಕನ್ನಡಿಗರ ಆಕ್ರೋಶ
ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಲಯಾಳಿಗಳು ಬೆಂಗಳೂರಿನ ಮಡಿವಾಳ ಪ್ರದೇಶವನ್ನು "ಮಲ್ಲುಗಳ ಹಬ್" ಎಂದು ಬಣ್ಣಿಸಿರುವುದು ಕನ್ನಡಿಗರನ್ನು ಕೆರಳಿಸಿದೆ. ಈ ಬಗ್ಗೆ ನೆಟ್ಟಿಗರು ಹರಿಹಾಯ್ದಿದ್ದು, "ಕೇರಳದಲ್ಲಿ 100 ಪರ್ಸೆಂಟ್ ಸಾಕ್ಷರತೆ ಇದೆ ಎಂದು ಹೇಳಿಕೊಳ್ಳುತ್ತಾರೆ, ಆದರೆ ಬದುಕು ಕಟ್ಟಿಕೊಳ್ಳಲು ಮಾತ್ರ ಸಾಲು ಸಾಲಾಗಿ ಬೆಂಗಳೂರಿಗೆ ಬರುತ್ತಾರೆ. ತಮ್ಮ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸಿಕೊಳ್ಳಲಾಗದವರು ಇಲ್ಲಿ ಬಂದು ನಮ್ಮ ನೆಲವನ್ನೇ ತಮ್ಮ ಹಬ್ ಎಂದು ಕರೆಯುವುದು ಎಷ್ಟು ಸರಿ?" ಎಂದು ಪ್ರಶ್ನಿಸಿದ್ದಾರೆ.

ಕೇರಳದಲ್ಲಿ ಸೌಲಭ್ಯಗಳಿಲ್ಲ
ಈ ವಿಡಿಯೋ ಹಂಚಿಕೊಂಡಿರುವ ಕನ್ನಡಿಗರು ತಮ್ಮ ನೋವು ಮತ್ತು ಕಳವಳವನ್ನು ವ್ಯಕ್ತಪಡಿಸಿದ್ದಾರೆ. "ಬೇರೆ ರಾಜ್ಯಗಳಿಂದ ಬಂದು ಇಲ್ಲಿ ನೆಲೆಸುವವರು ಇಲ್ಲಿನ ಭಾಷೆ, ಸಂಸ್ಕೃತಿಯನ್ನು ಗೌರವಿಸುವುದನ್ನು ಬಿಟ್ಟು, ಪ್ರದೇಶಗಳ ಹೆಸರನ್ನೇ ಬದಲಾಯಿಸಲು ಹೊರಟಿರುವುದು ಸಹಿಸಲು ಸಾಧ್ಯ." "ಕೇರಳದಲ್ಲಿ ಹೇಳಿಕೊಳ್ಳುವಂತಹ ಸೌಲಭ್ಯಗಳಿಲ್ಲ, ಡ್ರಗ್ಸ್ ಮಾಫಿಯಾದ ಹಾವಳಿ ಹೆಚ್ಚಾಗಿದೆ. ಗಲ್ಫ್ ರಾಷ್ಟ್ರಗಳ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿಂದ ಜನ ಬರುತ್ತಿದ್ದಾರೆ, ಆದರೆ ಇಲ್ಲಿ ಬಂದು ನಮ್ಮ ಊರನ್ನು ಅವರದ್ದೆಂದು ಕರೆಯುವುದು ಉದ್ಧಟತನ" ಎಂದು ಖಂಡಿಸಿದ್ದಾರೆ.
ಇಡೀ ಕೇರಳ ಮಲಯಾಳಿಗಳಿಗೆ ಗಬ್ಬು, ಬೇರೆಯೂರುಗಳೆಲ್ಲ ಹಬ್ಬು, ಅಲ್ಲಿ ಯಾವುದೇ ಸೌಲಭ್ಯಗಳಿಲ್ಲ, ಇರಾನಿ ಬಂಧುಗಳು, ಡ್ರಗ್ಸ್ ಇವೇ ನಿತ್ಯ ಜೀವನಕ್ಕೆ, ಅದಕ್ಕೆ ಅಲ್ಲಿoದ ಬಂದು ಸಾಯೋದು, ಗಲ್ಫ್ ರಾಜ್ಯಗಳ ಬಿಕ್ಕಟ್ಟಿನಿಂದ ಮತ್ತಷ್ಟು ವಲಸೆ ಖಂಡಿತ. pic.twitter.com/tiqkYqiU71
— ₘₒₜᵢᵥₐₜₑd!ₗᵢₗ!Dₑₘₒₙ (@AryakavyaA) March 7, 2026
"ಕರ್ನಾಟಕಕ್ಕಿಂತ ಹೆಚ್ಚಾಗಿ ಕೇರಳಕ್ಕೆ ಹೋಗುವ ವಂದೇ ಭಾರತ್ ರೈಲುಗಳೇ ಜಾಸ್ತಿ ಇವೆ. ಅಲ್ಲಿ ಅಷ್ಟು ಅಭಿವೃದ್ಧಿ ಇದ್ದರೆ ಎಲ್ಲರೂ ಇಲ್ಲೇಕೆ ಬರುತ್ತಾರೆ?" ಎಂದು ಅನೇಕರು ಕುಟುಕಿದ್ದಾರೆ. ಬೆಂಗಳೂರು ಎಲ್ಲರನ್ನೂ ಸಲಹುವ ತಾಯಿ ಅನ್ನೋದು ನಿಜ, ಆದರೆ ಅದು ಕನ್ನಡಿಗರ ಸ್ವಾಭಿಮಾನವನ್ನು ಬಲಿಗೊಟ್ಟು ಅಲ್ಲ ಎಂದು ಕನ್ನಡಿಗರು ಒಕ್ಕೊರಲ ಧ್ವನಿ ಎತ್ತಿದ್ದಾರೆ.
ಬೆಂಗಳೂರಿನಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗುತ್ತಿದ್ದಾರೆ ಎಂಬ ಭಯ ಸ್ಥಳೀಯರಲ್ಲಿ ಹೆಚ್ಚಾಗಿದೆ "ಸರ್ಕಾರ ಈ ಬಗ್ಗೆ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಾಣುತ್ತಿಲ್ಲ. ವಲಸಿಗರ ಹಾವಳಿಯನ್ನು ಹತ್ತಿಕ್ಕಲು ಮತ್ತು ಕನ್ನಡಿಗರ ಹಿತರಕ್ಷಣೆ ಮಾಡಲು ಕನ್ನಡ ಹೋರಾಟಗಾರರು ಈಗಲಾದರೂ ಎಚ್ಚೆತ್ತುಕೊಂಡು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡ ಹುಡುಕಬೇಕಾದ ಸ್ಥಿತಿ ಬರಬಹುದು" ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.
ದೇವನಹಳ್ಳಿಯಲ್ಲೂ ಕೇರಳ ವಿದ್ಯಾರ್ಥಿಗಳ ಪುಂಡಾಟ
ಕೇರಳದವರು ಬೆಂಗಳೂರು ನಗರ ಮಾತ್ರವಲ್ಲದೆ ಹೊರವಲಯಗಳಲ್ಲೂ ತುಂಬಿ ತುಳುಕಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ದೇವನಹಳ್ಳಿ ಬಳಿಯ ಖಾಸಗಿ ಕಾಲೇಜಿನಲ್ಲಿ ಬಹುತೇಕರು ಮಲೆಯಾಳಿ ವಿದ್ಯಾರ್ಥಿಗಳೇ ದಾಖಲಾಗಿದ್ದು, ಇಲ್ಲಿನ ಬಾಡಿಗೆ ನಿವಾಸಗಳು, ಪಿಜಿಗಳಲ್ಲಿ ತಂಗಿದ್ದಾರೆ. ಇತ್ತೀಚೆಗೆ ಗುಂಪು ಕಟ್ಟಿಕೊಂಡು ಪುಂಡಾಟಿಕೆ ನಡೆಸುವುದು ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಡರಾತ್ರಿವರೆಗೂ ಬೈಕ್ಗಳಲ್ಲಿ ಕರ್ಕಶ ಶಬ್ದ ಮಾಡುತ್ತಾ ನಿದ್ರೆಗೆ ಭಂಗ ಉಂಟು ಮಾಡುತ್ತಾರೆ. ಅಲ್ಲದೆ ಕಾಲೇಜಿನಲ್ಲಿ ಕಿರಿಕ್ ಮಾಡಿ, ಗ್ಯಾಂಗ್ ಮಾಡಿಕೊಂಡು ನಿವಾಸಗಳ ಬಳಿ ಬಂದು ರಾತ್ರಿ ವೇಳೆ ಗಲಾಟೆ ಮಾಡುತ್ತಾರೆ. ಪೊಲೀಸರಿಂದಲೂ ಇವರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ದೇವನಹಳ್ಳಿ ನಿವಾಸಿಗಳು ಆತಂಕ ಹೊರಹಾಕಿದ್ದು, ಮಲಯಾಳಿ ವಿದ್ಯಾರ್ಥಿಗಳು ಬಾಡಿಗೆ ಮನೆಗಳನ್ನೇ ಮಿನಿ ಬಾರ್ನಂತೆ ಮಾಡಿಕೊಂಡಿರುವ, ರಾಶಿ ರಾಶಿ ಮದ್ಯದ ಬಾಟಲಿಗಳನ್ನು ಜೋಡಿಸಿರುವ ವಿಡಿಯೋ ಕೂಡ ವೈರಲ್ ಆಗಿದೆ.
-
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026 -
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026 -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ? -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications