ಮಲ್ಲೇಶ್ವರಂ ಸ್ಫೋಟ : 2 ಸಾವಿರ ರೂ.ಗೆ ಸ್ಫೋಟಕ ಮಾರಾಟ
ಬೆಂಗಳೂರು, ಜೂನ್ 14 : ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಡೆನಿಯಲ್ ಪ್ರಕಾಶ್ ಬಂಧನದಿಂದ ಚುರುಕಾಗಲಿದೆ. ಪ್ರಕಾಶ್ ಸ್ಫೋಟಕ್ಕೆ ಅಗತ್ಯವಿದ್ದ ಜಿಲೆಟಿನ್ ಕಡ್ಡಿಗಳನ್ನು 2 ಸಾವಿರ ರೂ.ಗಳಿಗೆ ಮಾರಾಟ ಮಾಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸಿಸಿಬಿ ಪೊಲೀಸರು ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಡೆನಿಯಲ್ ಪ್ರಕಾಶ್ನನ್ನು ಸೋಮವಾರ ಸಂಜೆ ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ತನ್ನ ಬಾಲ್ಯದ ಗೆಳೆಯ ಸೈಯದ್ ಅಲಿಗೆ ಜಿಲೆಟಿನ್ ಕಡ್ಡಿಗಳನ್ನು ಮಾರಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. [ಮಲ್ಲೇಶ್ವರಂ ಸ್ಫೋಟ : ಮುಖ್ಯ ಆರೋಪಿ ಡೇನಿಯಲ್ ಬಂಧನ]

2 ಸಾವಿರ ರೂ.ಗಳಿಗೆ ಜಿಲೆಟಿನ್ ಕಡ್ಡಿ ಮತ್ತು ಇತರ ಸ್ಫೋಟಕಗಳನ್ನು ಪ್ರಕಾಶ್ ಮಾರಾಟ ಮಾಡಿದ್ದ. ಆದರೆ, ಸೈಯದ್ ಅವುಗಳನ್ನು ಏಕೆ ಖರೀದಿ ಮಾಡಿದ್ದ? ಎಂಬುದು ಆತನಿಗೆ ತಿಳಿದಿರಲಿಲ್ಲ. ಜಿಲೆಟಿನ್ ಕಡ್ಡಿಗಳನ್ನು ಕದ್ದು, ಕಲ್ಲು ಕ್ವಾರಿಗಳಿಗೆ ಮಾರಾಟ ಮಾಡುವುದೇ ಪ್ರಕಾಶ್ ಕೆಲಸವಾಗಿತ್ತು. [ಬೆಂಗಳೂರು ಸ್ಫೋಟ : ಮದನಿ ವಿರುದ್ಧ ಉಲ್ಟಾ ಹೊಡೆದ ಸಾಕ್ಷಿಗಳು]
ಅಂದು ಏನಾಗಿತ್ತು? : 2013ರ ಏಪ್ರಿಲ್ 17ರಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ಫೋಟ ನಡೆದಿತ್ತು. ಹೈದರಾಬಾದ್ನಿಂದ ಕದ್ದು ತಂದಿದ್ದ ಬೈಕ್ನಲ್ಲಿ ಸ್ಫೋಟಕಗಳನ್ನು ಇಟ್ಟು, ಅದನ್ನು ಸ್ಫೋಟಿಸಲಾಗಿತ್ತು. ಈ ಸ್ಫೋಟದಲ್ಲಿ 16 ಜನರು ಗಾಯಗೊಂಡಿದ್ದರು. [ಬಾಂಬ್ ಸ್ಫೋಟ ರೂವಾರಿ ಬುಹಾರಿ ತಪ್ಪೊಪ್ಪಿಗೆ]
ತಮಿಳುನಾಡಿನ ಪುಡುಕೋಡಿ ಬಳಿ ನೀರಾವರಿ ಯೋಜನೆಯ ಕೆಲಸ ನಡೆಯುತ್ತಿತ್ತು. ಅಲ್ಲಿ ಬಳಕೆ ಮಾಡಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಅಲ್ಲಿಂದ ಕಡ್ಡಿಗಳನ್ನು ಕದ್ದಿದ್ದ ಪ್ರಕಾಶ್ ಸೈಯದ್ಗೆ ಮಾರಾಟ ಮಾಡಿದ್ದ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications