ಮಲ್ಲೇಶ್ವರಂ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಡೇನಿಯಲ್ ಬಂಧನ
ಬೆಂಗಳೂರು, ಜೂನ್ 13: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಬಳಿ ಸಂಭವಿಸಿದ್ದ ಬಾಂಬ್ ಸ್ಪೋಟದ ಪ್ರಮುಖ ಆರೋಪಿ ಡೇನಿಯಲ್ ಪ್ರಕಾಶ್ ನನ್ನು ಬೆಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಸೋಮವಾರ ಬಂಧಿಸಿದ್ದಾರೆ.
ಬೆಂಗಳೂರಿನ ಸಿಸಿಬಿ ವಿಶೇಷ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ತಿರುನಲ್ವೇಲಿಯಲ್ಲಿ ಅಡಗಿದ್ದ ಡೇನಿಯಲ್ ಪ್ರಕಾಶ್ ನನ್ನು ವಶಕ್ಕೆ ಪಡೆಯಲಾಯಿತು. ಈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಕಾಶ್ ಕೈವಾಡ ಇರುವುದು ಸ್ಪಷ್ಟವಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.[ಬಾಂಬ್ ಸ್ಫೋಟ ಹತ್ತಿರದಿಂದ ಕೇಳಿದವರ ಅನುಭವ]

ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇನಿಯಲ್ ಪ್ರಕಾಶ್ ಸೇರಿ ಇಲ್ಲಿ ತನಕ 15 ಜನ ಶಂಕಿತರನ್ನು ಬಂಧಿಸಲಾಗಿದೆ. ಏಪ್ರಿಲ್ 17, 2013 ರಂದು ಬಿಜೆಪಿ ಕಚೇರಿ ಬಳಿ ಸಂಭವಿಸಿದ ಈ ಬಾಂಬ್ ಸ್ಫೋಟದಲ್ಲಿಸಿಇಟಿ ಕೋಚಿಂಗ್ ಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಾದ ರಕ್ಷಿತಾ ಹಾಗೂ ಲೀಶಾ ಸೇರಿದಂತೆ 16 ಮಂದಿ ಗಾಯಗೊಂಡಿದ್ದರು.[ಉಗ್ರರ ಗುರ್ತಿಸಿದ ಆಟೋಚಾಲಕ ಬಹುಮಾನ ಬೇಡವೆಂದ]
ಬಾಂಬ್ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿತ್ತು. ತಮಿಳುನಾಡು ನೋಂದಣಿ ಸಂಖ್ಯೆಯಿರುವ ಮೋಟ ಬೈಕೊಂದನ್ನು ಕೂಡಾ ಬಳಸಲಾಗಿತ್ತು. ಬೈಕ್ ಮಾಲೀಕ ಕೂಡಾ ಪತ್ತೆಯಾಗಿದ್ದ. ಆದರೆ, ಆ ಬೈಕನ್ನು ದುಷ್ಕೃತ್ಯಕ್ಕೆ ಬಳಸುವ ಸಲುವಾಗಿ ಶಂಕಿತರು ಕದ್ದಿದ್ದರು.

2013ರ ಅಕ್ಟೋಬರ್ ನಲ್ಲಿ ಅನೇಕ ಮಂದಿ ಮೇಲೆ ಚಾರ್ಜ್ ಶೀಟ್ ಹಾಕಲಾಯಿತು. ಬಷೀರ್, ಕಿಚಾನ್ ಬುಹಾರಿ, ಸೇಟ್ ಅಜ್ಗರ್ ಅಲಿ, ರೆಹಮಥುಲ್ಲಾ, ವಲಯಿಲ್ ಹಕೀಮ್, ಸೈಯಲ್ ಸುಲೇಮಾನ್, ಸುಲೇಮಾನ್, ಝುಲ್ಫಿಕರ್ ಅಲಿ, ಮೊಹಮ್ಮದ್ ಸಲೀಂ, ಪೆನ್ನಾ ಇಸ್ಮಾಯಿಲ್, ಬಿಲಾಲ್ ಮಲೀಕ್, ಫಕ್ರುದ್ದೀನ್, ಪ್ರವೈ ಬಾಷಾ ಹಾಗೂ ಅಲಿ ಖಾನ್ ಕುಟ್ಟಿ ಅವರ ಮೇಲೆ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದೆ. ತಮಿಳುನಾಡು ಮೂಲದ ಅಲ್ ಉಮ್ಮಾ ಸಂಘಟನೆಯ ಕೃತ್ಯ ಎಂದು ಕೂಡಾ ಶಂಕಿಸಲಾಗಿದೆ. (ಒನ್ಇಂಡಿಯಾ ಸುದ್ದಿ)
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications