ದಾರಿ ಮಧ್ಯದಲ್ಲಿ ಸಾವು ನೋಡುವ ಸಂದರ್ಭ ಬರುತ್ತಿರಲಿಲ್ಲ: ಮಲ್ಲಿಕಾರ್ಜುನ್ ಖರ್ಗೆ
ಬೆಂಗಳೂರು, ಏ. 14: ಕೊರೊನಾ ವೈರಸ್ ಹರಡದಂತೆ ತಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇ 3ರ ವರೆಗೆ ದೇಶಾದ್ಯಂತ ಲಾಕ್ಡೌನ್ ವಿಸ್ತರಣೆ ಮಾಡಿದ್ದಾರೆ. ಮೊದಲು ಲಾಕ್ಡೌನ್ ಹಾಗೂ ಲಾಕ್ಡೌನ್ ವಿಸ್ತರಣೆಯನ್ನು ವಿರೋಧ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. ಆದರೆ ಲಾಕ್ಡೌನ್ ಜಾರಿಗೆ ತಂದಿರುವ ರೀತಿಯನ್ನು ವಿರೋಧಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣಕ್ಕೆ ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಬೆಂಗಳೂರಿನಲ್ಲಿ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.
ದೇಶದ ಹಿತದೃಷ್ಟಿಯಿಂದ ಲಾಕಡೌನ್ಗೆ ನಮ್ಮ ಬೆಂಬಲವಿದೆ. ಪ್ರಧಾನಿ ನರೇಂದ್ರ ಮೋದಿ ಬಡವರು, ನಿರ್ಗತಿಕರಿಗೆ ಹಲವು ಕಾರ್ಯಕ್ರಮ ಜಾರಿ ಮಾಡುತ್ತಾರೆ. ಕಡುಬಡವರಿಗೆ ಏನಾದರೂ ಒಂದು ಉತ್ತಮ ಯೋಜನೆ ರೂಪಿಸುತ್ತಾರೆ ಎಂದು ಭಾವಿಸಿದ್ದೆವು. ಆದರೆ ಪ್ರಧಾನಿ ಮೋದಿ ಅವರು ಮಾಡಿದ ಭಾಷಣ ರಾಜಕೀಯದಿಂದ ಕೂಡಿತ್ತು. ಅವರ ಭಾಷಣ ನಿರಾಶೆ ಮೂಡಿಸಿತು ಎಂದು ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಮ್ಮ ದೇಶದಲ್ಲಿಯೂ ಸಿಂಗಪುರ್ನಂತೆ ವ್ಯವಸ್ಥಿತವಾಗಿ ಲಾಕಡೌನ್ ಮಾಡಬೇಕಿತ್ತು. ಒಂದು ವಾರ ಮೊದಲೇ ಜನರಿಗೆ ಲಾಕ್ಡೌನ್ ಕುರಿತು ಮಾಹಿತಿ ಕೊಟ್ಟಿದ್ದರೆ ಬಡ ಕೂಲಿ ಕಾರ್ಮಿಕರಿಗೆ ಅನುಕೂಲ ಆಗುತ್ತಿತ್ತು. ತಮ್ಮ ಊರಿಗೆ ಹೋಗಲು ಸಮಯಾವಕಾಶ ಕೊಟ್ಟಿದ್ದರೆ ಕೂಲಿ ಕಾರ್ಮಿಕರು ದಾರಿ ಮಧ್ಯದಲ್ಲಿ ಸಾಯುವ ಸ್ಥಿತಿ ನೋಡುವ ಸಂದರ್ಭ ಬರುತ್ತಿರಲಿಲ್ಲ ಎಂದಿದ್ದಾರೆ.

ಒಂದು ಪಕ್ಷಕ್ಕೆ ಸೇರಿದ ಕಾರ್ಯಕರ್ತರು ತಮ್ಮ ಪಕ್ಷದ ಚಿಹ್ನೆ ಶಾಸಕರ ಫೋಟೊ ಹಾಕಿಕೊಂಡು ಕಾರ್ಮಿಕ ಕಲ್ಯಾಣ ನಿಧಿಯ ಪಡಿತರ, ಆಹಾರ ವಸ್ತುಗಳನ್ನು ಹಂಚಿಕೆ ಮಾಡುತ್ತಿದ್ದಾರೆ ಎಂದು ಹೆಸರು ಹೇಳದೆ ಬಿಜೆಪಿ ಕಾರ್ಯಕರ್ತರ ಮೇಲೆ ಆರೋಪಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ರಾಜಕೀಯ ಮಾಡಬಾರದು. ಈ ಬಗ್ಗೆ ಸರ್ಕಾರ ಕಠಿಣ ಕ್ರಮಗಳನ್ನು ಜರಗಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಇನ್ನು ಬಿಡಿಎ ವ್ಯಾಪ್ತಿಯಲ್ಲಿ ಬರುವ ಕಾರ್ನರ್ ನಿವೇಶನಗಳನ್ನು ಮಾರಾಟ ಮಾಡಲು ನಿರ್ಧರಿಸಿರುವ ಸರ್ಕಾರದ ಕ್ರಮವನ್ನು ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದ್ದಾರೆ. ಬಿಡಿಎ ನಿವೇಶನವನ್ನು ಪ್ರಸಕ್ತ ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಮಾರಾಟ ಮಾಡಬಾರದು. ಜನರ ಬಳಿ ದುಡ್ಡು ಇಲ್ಲದೇ ಇದ್ದಾಗ ಹರಾಜಿಗೆ ಹೇಗೆ ಬರುತ್ತಾರೆ? ಎಂದು ಅವರು ಪ್ರಶ್ನಿಸಿದ್ದಾರೆ. ಸರ್ಕಾರದ ಆಸ್ತಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಕೆಲಸ ಮಾಡಬಾರದು. ಮೊದಲು ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಸಲಹೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications