ಜ.17ರಂದು ಮಲೆನಾಡು ಮಿತ್ರವೃಂದದ ವಾರ್ಷಿಕ ಕ್ರೀಡಾಕೂಟ
ಬೆಂಗಳೂರು, ಜನವರಿ 16 : ಮಲೆನಾಡು ಮಿತ್ರವೃಂದ ವಾರ್ಷಿಕ ಕ್ರೀಡಾಕೂಟವನ್ನು ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದೆ. ಜಾಲಹಳ್ಳಿ ಬಳಿಯ ಎಚ್ಎಂಟಿ ಆಟದ ಮೈದಾನದಲ್ಲಿ ಜ.17ರ ಭಾನುವಾರ ಈ ಕ್ರೀಡಾಕೂಟ ನಡೆಯಲಿದೆ.
ಎಚ್ಎಂಟಿ ಆಟದ ಮೈದಾನದಲ್ಲಿ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧ ಕ್ರೀಡಾಕೂಟಗಳು ನಡೆಯಲಿವೆ ಎಂದು ಮಲೆನಾಡು ಮಿತ್ರವೃಂದದ ಅಧ್ಯಕ್ಷ ಅನಿಲ್ ಹೊಸಕೊಪ್ಪ ಹೇಳಿದ್ದಾರೆ. 5ರಿಂದ 35 ವರ್ಷದ ತನಕ ವಿವಿಧ ವಯೋಮಾನದವರು ಕ್ರೀಡಾಕೂಟದಲ್ಲಿ ಕುಟುಂಬದವರೊಂದಿಗೆ ಪಾಲ್ಗೊಳ್ಳಬಹುದಾಗಿದೆ.

ಈ ಕ್ರೀಡಾಕೂಟದಲ್ಲಿ ಮಲೆನಾಡು ಭಾಗದ ರಾಜಕಾರಣಿಗಳು ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಸಾವಿರಾರು ಮಲೆನಾಡಿಗರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ 'ಮಲೆನಾಡಿನ ಸ್ಮರಣಿಯರು' ಎಂಬ ತಲೆಬರಹದ2016ರ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುತ್ತದೆ.
ಆಟಗಳು : 50 ಮೀಟರ್ ಮತ್ತು 100 ಮೀಟರ್ ಓಟ, ಲೆಮನ್ ಇನ್ ದ ಸ್ಪೂನ್, ಮ್ಯೂಜಿಕಲ್ ಛೇರ್, ಥ್ರೋ ಬಾಲ್, ಮಡಕೆ ಒಡೆಯುವುದು, ಪಾಸಿಂಗ್ ದ ಬಾಲ್, ವಾಲಿಬಾಲ್, ಸ್ಲೋ ಬೈಕ್ ರೇಸ್ ಮುಂತಾದ ಆಟಗಳನ್ನು ಏರ್ಪಡಿಸಲಾಗಿದೆ.
ಬಿಎಂಟಿಸಿ ಬಸ್ಸಿನ ಮಾರ್ಗ : ಎಚ್ಎಂಟಿ ಆಟದ ಮೈದಾನಕ್ಕೆ ಹೋಗಲು ಮೆಜೆಸ್ಟಿಕ್ನಿಂದ 273, ಶಿವಾಜಿನಗರದಿಂದ 270 ಹಾಗೂ ಮಾರ್ಕೆಟ್ನಿಂದ 275ನೇ ಬಸ್ನಲ್ಲಿ ಬಂದು ಎಚ್ಎಂಟಿ ಆಡಿಟೋರಿಯಂ ನಿಲ್ದಾಣದಲ್ಲಿ ಇಳಿಯಬೇಕು. ಹೆಚ್ಚಿನ ವಿವರಗಳಿಗೆ ಅನಿಲ್ ಹೊಸಕೊಪ್ಪ 9448241148, ವನಮಾಲಯ್ಯ ಡಿ.ಟಿ.ಇಳಿಮನೆ 9243407146 ಅವರನ್ನು ಸಂಪರ್ಕಿಸಬಹುದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications