ಬೆಂಗಳೂರು: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ
ಬೆಂಗಳೂರು, ಜೂ.16: ತನ್ನ 18 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಹಾಸನ ಮೂಲದ ವ್ಯಕ್ತಿಯೊಬ್ಬನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಮಹಾದೇವ ಶೆಟ್ಟಿ(44) ಬಂಧಿತ ಆರೋಪಿ. ಮೂಲತಃ ಹಾಸನ ಹೊಳೆ ನರಸೀಪುರದ ಮಹಾದೇವ ಶೆಟ್ಟಿ ಪತ್ನಿ ಮಗ, ಮಗಳ ಜೊತೆ ಗೋವಿಂದ ಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.
ಮಹಾದೇವ ಶೆಟ್ಟಿಯ ಪತ್ನಿ, ಮಗ, ಮಗಳು ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ಸಿದ್ದ ಉಡುಪು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ಹಾಗೂ ಮಗ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಂಟಿಯಾಗಿ ಇರುತ್ತಿದ್ದ ಮಗಳ ಮೇಲೆ ಆತ ಅತ್ಯಾಚಾರ ನಡೆಸುತ್ತಿದ್ದ. ಒಂದು ವೇಳೆ ಈ ವಿಚಾರವನ್ನು ಬೇರೆಯವರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಮಗಳಿಗೆ ಬೆದರಿಸಿದ್ದ. ಹೀಗಾಗಿ ಮಗಳು ಯಾರೊಂದಿಗೂ ತಿಳಿಸಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.[ಅಪಾರ್ಟ್ ಮೆಂಟಿನಲ್ಲಿ ಅಟ್ಟಾಡಿಸಿ ಎಚ್ಆರ್ ಹತ್ಯೆ]

ಕಳೆದ ಮೂರು ದಿನಗಳ ಹಿಂದೆ ಮಗಳು ತಾಯಿಯೊಂದಿಗೆ ವಿಚಾರ ತಿಳಿಸಿದ್ದಾಳೆ. ನಂತರ ಈ ವಿಚಾರವಾಗಿ ತಾಯಿ ಮತ್ತು ತಂದೆ ಜಗಳವಾಡಿದ್ದು ಶನಿವಾರ ಮಹಾದೇವ ಶೆಟ್ಟಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ.
ಇದರಿಂದ ಸಿಟ್ಟಾದ ಮಹಾದೇವ ಶೆಟ್ಟಿ ಶನಿವಾರ ಸಂಜೆ ಮಗಳು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ಅಡ್ಡಗಟ್ಟಿ ಸಾರ್ವಜನಿಕರ ಎದುರೇ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಯುವತಿ ರಕ್ಷಣೆಗೆ ಕೂಗಿದಾಗ ಸಾರ್ವಜನಿಕರು ಯುವತಿಯನ್ನು ರಕ್ಷಿಸಿ ಹಿಗ್ಗಾಮುಗ್ಗಾ ಥಳಿಸಿ ಠಾಣೆಗೆ ಸೇರಿಸಿದ್ದಾರೆ.
ಮದ್ಯವ್ಯಸನಿಯಾಗಿರುವ ತಂದೆ ಪಾನಮತ್ತರಾಗಿ ಮನೆಗೆ ಬಂದು ನನ್ನನ್ನು ತಬ್ಬಿಕೊಳ್ಳುತ್ತಿದ್ದರು. ಗುಪ್ತಾಂಗವನ್ನು ಮುಟ್ಟಿ ದೌರ್ಜನ್ಯ ನಡೆಸುತ್ತಿದ್ದರು. ಅಲ್ಲದೇ ನನ್ನನ್ನು ಮದುವೆಯಾಗು ಎಂದು ಒತ್ತಾಯಿಸುತ್ತಿದ್ದರು. ಮೂರು ತಿಂಗಳಿನಿಂದ ನನ್ನ ಮೇಲೆ ಅತ್ಯಾಚಾರ ನಡೆಸಿದ್ದರು. ಅಲ್ಲದೇ ಅತ್ಯಾಚಾರ ವಿಚಾರವನ್ನು ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಯುವತಿ ದೂರಿನ ಆಧಾರ ಹಿನ್ನಲೆಯಲ್ಲಿ ಅತ್ಯಾಚಾರ, ಅಪರಾಧ ಸಂಚು, ಹಲ್ಲೆ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಮಹಾದೇವ ಶೆಟ್ಟಿಯನ್ನು ಬಂಧಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications