ಪೊಲೀಸ್ ಟಾರ್ಚರ್ ಗೆ ಬೆಂಗಳೂರಿನಲ್ಲಿ ಯುವಕ ಬಲಿ?
ಬೆಂಗಳೂರು, ಆಗಸ್ಟ್ 20 : ಪೊಲೀಸರ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಭಾರತೀ ನಗರದಲ್ಲಿ ನಡೆದಿದೆ.
ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಭಾರತೀನಗರ ಪೊಲೀಸರು ನೀಡಿದ ಕಿರುಕುಳದಿಂದ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಾರ್ತಿಕ್ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಚಿಕಿತ್ಸೆ ಫಲಕಾರಿಯಾಗದೆ ಆತ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಮೆಕಾನಿಕ್ ಕೆಲಸ ಮಾಡುತ್ತಿದ್ದ ಕಾರ್ತಿಕ್ 2 ವರ್ಷಗಳ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದ. ಪೊಲೀಸರು ಕಾರ್ತಿಕ್ನನ್ನು ವಿಚಾರಣೆಗೆ ಕರೆದೊಯ್ಯಲು ಆತನ ಕುಟುಂಬಸ್ಥರಿಗೆ ಕಿರುಕುಳ ನೀಡುತ್ತಿದ್ದರು.
ಕಾರ್ತಿಕ್ನ ಅಕ್ಕ ಮತ್ತು ಪತ್ನಿಯನ್ನು ಪೊಲೀಸರು ಠಾಣೆಗೆ ಕರೆದೊಯ್ದು ಕಿರುಕುಳ ನೀಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Comments
English summary
Man commits suicide By Consuming Poison alleged police torture in Bharthinagar, Bengaluru on August 20th.