ನಟರಾಜ್ ಚಿತ್ರ ಮಂದಿರ ಬಳಿ 5 ಅಂತಸ್ತಿನ ಕಟ್ಟಡದಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು, ಮಾರ್ಚ್ 21: ಐದು ಅಂತಸ್ತಿನ ಕಟ್ಟಡದಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೇಷಾದ್ರಿಪುರಂ ಬಳಿ ನಡೆದಿದೆ.
ಶೇಷಾದ್ರಿಪುರಂನ ನಟರಾಜ್ ಚಿತ್ರ ಮಂದಿರದ ಬಳಿ ಈ ಘಟನೆ ನಡೆದಿದೆ. ಪ್ರವೀಣ್(40) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು ಕಳೆದ ಮೂರು ವರ್ಷಗಳಿಂದ ಆನಂದ್ ರಾವ್ ಸರ್ಕಲ್ ನಲ್ಲಿರುವ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಆರು ತಿಂಗಳ ಹಿಂದೆ ಕೆಲಸ ಬಿಟ್ಟು ಹೋಗಿ ವಾರದ ಹಿಂದಷ್ಟೇ ಬಂದು ಕೆಲಸಕ್ಕೆ ಸೇರಿದ್ದ. ಎರಡು ಮೂರು ದಿನ ಕೆಲಸಕ್ಕೆ ಹೋಗಿ ಎರಡು ದಿನದಿಂದ ಕುಡಿದು ರೂಮಿನಲ್ಲೇ ಇದ್ದ, ಬಳಿಕ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಬಹು ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications