ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡ ಅನುಮಾನಾಸ್ಪದ ವ್ಯಕ್ತಿ ಪತ್ತೆ
ಬೆಂಗಳೂರು, ಮೇ 11: ಮೆಟ್ರೋ ನಿಲ್ದಾಣದಲ್ಲಿ ಎರಡು ದಿನಗಳ ಹಿಂದೆ ಅನುಮಾಸ್ಪದವಾಗಿ ಕಾಣಿಸಿಕೊಂಡ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಎರಡು ದಿನಗಳ ಹಿಂದೆ ಗಡ್ಡಬಿಟ್ಟು, ತಲೆಗೆ ರುಮಾಲು ಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ, ಸಿಸಿಟಿವಿಯ ದೃಶ್ಯಗಳನ್ನು ಪರಿಶೀಲಿಸಿದಾಗ ಈತನ ಹಾವಭಾವದ ಮೇಲೆ ಅನುಮಾನ ಮೂಡಿದ್ದವು. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದರು.
ಈ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ಕರಪತ್ರಗಳನ್ನು ಸಹ ಹಂಚಿಕೆ ಮಾಡಿದ್ದರು, ಅಂತಿಮವಾಗಿ ನಿನ್ನೆ ರಾತ್ರಿ ವೇಳೆಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದು, ಆತ ಯಾವುದೇ ಉಗ್ರ ಸಂಘಟನೆಗೆ ಸೇರಿದವನಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಕಾಣಿಸಿಕೊಂಡ ವ್ಯಕ್ತಿಯ ಹೆಸರು ಸಾಜಿದ್ ಖಾನ್ ಎಂದಾಗಿದ್ದು, ಅವರುರಾಜಸ್ಥಾನ ಮೂಲದವರಾಗಿದ್ದಾರೆ. ಹಜ್ ಯಾತ್ರೆಗೆ ತೆರಳಿದ್ದ ಅವರು, ಆರ್ಟಿ ನಗರದ ಮಸೀದಿಯಲ್ಲಿ ಪ್ರವಚನ ನೀಡಲೆಂದು ಬೆಂಗಳೂರಿಗೆ ಆಗಮಿಸಿದ್ದರು.
ಸಾಜಿದ್ ಖಾನ್ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡ ದಿನವೇ ಮತ್ತೊಬ್ಬ ಮುಸ್ಲಿಂ ವ್ಯಕ್ತಿಯೂ ಸಹ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡು, ಆತನನ್ನು ಸಹ ಕೆಲವು ಮಾಧ್ಯಮಗಳು ಶಂಕಿತ ಉಗ್ರನೆಂದು ಬಿಂಬಿಸಿದ್ದವು, ಆದರೆ ಆತ ಮೆಜೆಸ್ಟಿಕ್ ಬಳಿ ವಾಚ್ ರಿಪೇರಿಯವ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications