'ಲಕ್ಷ ಅನಾಥ ಶವಗಳ ತ್ರಿವಿಕ್ರಮ' ಮಹದೇವ ವಿಧಿವಶ
ಬೆಂಗಳೂರು, ಜುಲೈ 17: ಅಪಘಾತ, ಆತ್ಮಹತ್ಯೆ ಮುಂತಾದ ಕಾರಣಗಳಿಂದ ಮೃತ ಪಡುವ ಅನಾಥ ಶವಗಳ ಅಂತ್ಯ ಸಂಸ್ಕಾರ ನಡೆಸುತ್ತಿದ್ದ ಎಂ. ಮಹದೇವ ಗುರುವಾರ (ಜುಲೈ 14) ಮೃತ ಪಟ್ಟಿದ್ದಾರೆ.
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮಹದೇವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತ ಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ತಮ್ಮ ಒಂಬತ್ತನೇ ವಯಸ್ಸಿನಲ್ಲೇ ಅನಾಥ ಶವಗಳ ಸಂಸ್ಕಾರ ನಡೆಸಲು ಆರಂಭಿಸಿದ್ದ ಮಹದೇವ ಅವರಿಗೆ ನಗರದ ವಿಕ್ಟೋರಿಯಾ ಆಸ್ಪತ್ರೆಯೇ ಮನೆಯಂತಾಗಿತ್ತು. ಅನಾಥ ಶವಗಳ ಮರಣೋತ್ತರ ಪರೀಕ್ಷೆಯ ನಂತರ ಇವರು ಶವ ಸಂಸ್ಕಾರ ನಡೆಸುತ್ತಿದ್ದರು.

ಪೊಲೀಸರು ಮತ್ತು ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ ಮಹದೇವ ಅವರು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಶವಗಳ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಸಂಬಂಧಿಕರ ಸ್ಥಾನದಲ್ಲಿ ನಿಂತು ಶವ ಸಂಸ್ಕಾರ ನಡೆಸುವ ಇವರನ್ನು 'ಅನಾಥ ಶವಗಳ ತ್ರಿವಿಕ್ರಮ'ಎಂದೇ ಪೊಲೀಸರು ಮತ್ತು ವಿಕ್ಟೋರಿಯಾ ಆಸ್ಪತ್ರೆಯವರು ಕರೆಯುತ್ತಿದ್ದರು.
ತಮ್ಮ ಆಟೋದ ಮೂಲಕ ಶವವನ್ನು ಸಾಗಿಸುತ್ತಿದ್ದ ಇವರಿಗೆ ಐಪಿಎಸ್ ಅಧಿಕಾರಿ ಮದನ್ ಗೋಪಾಲ್ ಮಾರುತಿ ಓಮ್ನಿ ಕಾರನ್ನು ಕೊಡಿಸಿದ್ದರು. ಈ ವಾಹನವನ್ನು ಮಹದೇವ ಶವ ಸಂಸ್ಕಾರಕ್ಕೆಂದೇ ಬಳಸುತ್ತಿದ್ದರು.
ರಾಜ್ಯೋತ್ಸವ, ಕೆಂಪೇಗೌಡ ಸೇರಿದಂದತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಮಹದೇವ ಅವರು ಸುಮಾರು ಒಂದು ತಿಂಗಳಿನಿಂದ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ಈ ದೇವರು ಮೆಚ್ಚುವ ಕೆಲಸವನ್ನು ಅವರ ಮಕ್ಕಳು ಈಗ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. (ಚಿತ್ರಕೃಪೆ: ಪ್ರಜಾವಾಣಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications