ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯ ಹತ್ಯೆ
ಬೆಂಗಳೂರು ನವೆಂಬರ್ 30: ದೇಶದಲ್ಲಿ ಇತ್ತೀಚೆಗೆ ಮಹಿಳೆಯರ ಹತ್ಯೆಯ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಬೆಂಗಳೂರಿನ ಹೊರಮಾವು ಎಂಬಲ್ಲಿ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಸಂಗಾತಿಯನ್ನು ಪ್ರಿಯಕರ ಕೊಂದ ಘಟನೆ ನಡೆದಿದೆ. ಮೃತರನ್ನು ಕೃಷ್ಣಕುಮಾರಿ ಎಂದು ಗುರುತಿಸಲಾಗಿದೆ. ಆಕೆಯ ಜೀವನ ಸಂಗಾತಿ ಸಂತೋಷ್ ಧಾಮಿ ಅವರು ಯಾವುದೋ ಕಾರಣಕ್ಕೆ ತೀವ್ರ ಜಗಳದ ನಂತರ ಗೋಡೆಗೆ ತಲೆ ಹೊಡೆದು ಕೊಂದಿದ್ದಾರೆ. ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಎಸ್ ಗುಳೇದ್ ಸ್ಪಷ್ಟಪಡಿಸಿದ್ದಾರೆ.
ರಾಮಮೂರ್ತಿನಗರದಲ್ಲಿ ಪ್ರಕರಣ ದಾಖಲಾಗಿದೆ. ವೃತಿಯಲ್ಲಿ ಬ್ಯೂಟಿಷಿಯನ್ ಆಗಿದ್ದ ಕೃಷ್ಣಕುಮಾರು ಕೇರಳ ಮೂಲದವರು. ಪಾಳ್ಯ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಹಾಗೂ ಕೃಷ್ಣಕುಮಾರಿಗೆ ಅದೇಹ ಪ್ರೇಮ ಹುಟ್ಟಿತ್ತು. ಅವರಿಬ್ಬರೂ ಒಟ್ಟಿಗೆ ಬಾಡಿಗೆ ಮನೆವೊಂದರಲ್ಲಿ ವಾಸಿಸಲು ಆರಂಭಿಸಿದ್ದರು.

ಆದರೆ ಇವರ ಇಬ್ಬರ ನಡುವೆ ಹಣದ ವಿಚಾರದಲ್ಲಿ ಆಗಾಗ ಮನಸ್ತಾಪಗಳು ನಡೆಯುತ್ತಿದ್ದವು. ಕಳೆದ ದಿನ ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿ ಸಂತೋಷ್ ಆಕೆಯ ತಲೆಯನ್ನು ಗೋಡೆಗೆ ಹೊಡೆದಿದ್ದಾನೆ. ಇದರಿಂದ ಕೃಷ್ಣಕುಮಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.












Click it and Unblock the Notifications