Bengaluru; ಪ್ರೇಯಸಿಯನ್ನು ಕೊಂದು ಒಂದು ದಿನ ಶವದ ಜೊತೆ ಇದ್ದ ಪ್ರಿಯತಮ
ಬೆಂಗಳೂರು ನಗರದಲ್ಲಿ ಜನತೆ ಬೆಚ್ಚಿ ಬೀಳುವಂತ ಘಟನೆ ನಡೆದಿದೆ. ಅಸ್ಸಾಂ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದು ಇದೀಗ ಕೊಲೆಯ ಪ್ರಮುಖ ಆರೋಪಿ ಆಕೆಯ ಪ್ರಿಯತಮ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ಬಳಿಕ ಪ್ರಿಯತಮ ಒಂದು ದಿನ ಪ್ರೇಯಸಿಯ ಶವದ ಜೊತೆಯೇ ಕಾಲ ಕಳೆದಿದ್ದ ಎನ್ನುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಅಸ್ಸಾಂ ಮೂಲಕ ಯುವತಿ ಮಾಯಾ ಗೊಗೊಯ್ ಶನಿವಾರ ಗೆಳೆಯನ ಜೊತೆ ಇಂದಿರಾನಗರದ ಸರ್ವಿಸ್ ಅಪಾರ್ಟ್ಮೆಂಟ್ನ ಲಾಬಿಗೆ ಪ್ರವೇಶಿಸಿರುವ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿದೆ. ಅವರು ಅಪಾರ್ಟ್ಮೆಂಟ್ಗೆ ಪ್ರವೇಶಿಸುವಾಗ ನಗುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಮೂರು ದಿನಗಳ ಬಳಿಕ ಪೊಲೀಸರು ಆಕೆಯ ಶವವನ್ನು ಅಪಾರ್ಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಗೆಳೆಯನೇ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ನವೆಂಬರ್ 23ರಂದು ತನ್ನ ಗೆಳೆಯ ಗೆಳೆಯ ಆರವ್ ಹರ್ನಿಯೊಂದಿಗೆ ಮಾಯಾ ಗೊಗೊಯ್ ಬುಕ್ ಮಾಡಿದ್ದ ಸರ್ವೀಸ್ ಅಪಾರ್ಟ್ಮೆಂಟ್ ಬುಕ್ ಮಾಡಿದ್ದರು. ಅದೇ ಅಪಾರ್ಟ್ಮೆಂಟ್ನಲ್ಲಿ ಕೊಳೆತ ದೇಹ ಪತ್ತೆಯಾಗಿದೆ.
ಅಪಾರ್ಟ್ಮೆಂಟ್ನಲ್ಲೇ ಕೊಲೆ
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರವ್ ಹರ್ನಿ ಸೋಮವಾರ ಗೊಗೊಯ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಮಂಗಳವಾರ ಮನೆಯಿಂದ ಹೊರಬಂದಿದ್ದಾರೆ. ಒಂದು ಇಡೀ ದಿನ ಅವರು ಗೆಳತಿಯ ಶವದ ಜೊತೆ ಕಾಲ ಕಳೆದಿದ್ದಾರೆ. ಫೋಟೋಗಳಲ್ಲಿ ಕೋಣೆಯಲ್ಲಿ ಕಂಬಳಿ ಮತ್ತು ದಿಂಬುಗಳ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದೆ. ನವೆಂಬರ್ 23 ಮತ್ತು 26 ರ ನಡುವೆ ಯಾವುದೇ ವ್ಯಕ್ತಿ ಸರ್ವೀಸ್ ಅಪಾರ್ಟ್ಮೆಂಟ್ಗೆ ಪ್ರವೇಶಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿಲ್ಲ.
Assam Woman Brutally Killed by Boyfriend in Indiranagar
— Karnataka Portfolio (@karnatakaportf) November 26, 2024
A 25-year-old woman was found brutally murdered in her apartment in Bengaluru’s Indiranagar. Maya Gogoi, a native of Assam , who worked at a private company, was allegedly stabbed multiple times with a knife. The incident… pic.twitter.com/hWoyaO8Gkx
ಆರವ್ ಹರ್ನಿ ಬಾಡಿಗೆ ಕೊಠಡಿಯಿಂದ ಹೊರಬಂದ ಬಳಿಕ ಶವ ಪತ್ತೆಯಾಗಿದೆ. ಕೂಡಲೇ ಪೊಲೀಸರು ಶ್ವಾನದಳ ಹಾಗೂ ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಮಾಯಾ ಗೊಗೊಯ್ ನಗರದ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಎಚ್ಎಸ್ಆರ್ ಲೇಔಟ್ನಲ್ಲಿ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು ಎಂದು ಐಎಎನ್ಎಸ್ ವರದಿ ತಿಳಿಸಿದೆ.
ಆರವ್ ಹರ್ನಿ ಶವದೊಂದಿಗೆ ಒಂದು ದಿನ ಉಳಿದುಕೊಂಡಿದ್ದರಿಂದ, ಆರವ್ ಹರ್ನಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಬೇರೆಡೆ ಎಸೆಯಲು ಯೋಜಿಸಿದ್ದನಾ ಎನ್ನುವ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications