ಬಾಯಿ ದುರ್ನಾಥ ಎಂದು ತಾಯಿಯನ್ನೇ ಮನೆಯಿಂದ ಹೊರಗಟ್ಟಿದ ಮಗ
ಬೆಂಗಳೂರು, ಮೇ 31: ಪೋಷಕರನ್ನು ಮನೆಯಿಂದ ಹೊರಗಟ್ಟಲು ಮಕ್ಕಳು ಎಂತೆಂಥಾ ಕಾರಣಗಳನ್ನು ಹುಡುಕುತ್ತಾರೆ ನೋಡಿ, ಮಗನೊಬ್ಬ ತಾಯಿಯ ಬಾಯಿಂದ ದುರ್ವಾಸನೆ ಬರುತ್ತಿದೆ ಎಂದು ಮನಯಿಂದ ಹೊರಗಟ್ಟಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜನವರಿಯಲ್ಲಿ ಮಹಿಳೆಯೊಬ್ಬರು ಹಲ್ಲು ನೋವು ಎಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು ಅದಾದ ಬಳಿಕ ಹಲ್ಲನ್ನೇ ತೆಗೆಯಬೇಕು ಎಂದು ವೈದ್ಯರು ಹೇಳಿ ಹಲ್ಲನ್ನು ದವಡೆಯಿಂದ ಬೇರ್ಪಡಿಸಿದ್ದರು. ಕೆಲವೇ ದಿನಗಳಲ್ಲಿ ಸೋಂಕು ಇಡೀ ಬಾಯಿಯನ್ನೇ ಆವರಿಸಿಕೊಂಡು ವಸಡಿನಲ್ಲಿ ರಕ್ತಸ್ರಾವ ಹಾಗೂ ಕೀವು ಆಗಿತ್ತು.
ಅದಾದ ಬಳಿಕ ನಿಖಿಲ್ (ಹೆಸರು ಬದಲಿಸಲಾಗಿದೆ)ಹಾಗೂ ಆತನ ಪತ್ನಿ ಇಬ್ಬರು ಅತ್ತೆಯ ಜೊತೆ ಮಾತನಾಡುವುದನ್ನೇ ಕಡಿಮೆ ಮಾಡಿದರು. ಒಳ್ಳೆಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಬದಲು ಬಾಯಿಂದ ದುರ್ನಾಥ ಬರುತ್ತಿದೆ. ಮನೆಯಲ್ಲಿ ಇರಲು ಆಗುತ್ತಿಲ್ಲ, ನೀವು ತಕ್ಷಣವೇ ಮನೆಯಿಂದ ಹೊರಡಿ ಎಂದು ಹೇಳಿ ಮಹಿಳೆಯನ್ನು ಮಗ ಹಾಗೂ ಸೊಸೆ ಸೇರಿ ಮನೆಯಿಂದ ಹೊರಗಟ್ಟಿದ್ದಾರೆ.

ಬಳಿಕ ಮಹಿಳೆಯು ಬೆಂಗಳೂರು ಸಿಟಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ, ಪೊಲೀಸರು ನಿಖಿಲ್ ಹಾಗೂ ಆತನ ಪತ್ನಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ತಾಯಿಯನ್ನು ಮನೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವುದರಲ್ಲಿ ಯಾವುದೇ ಅಭ್ಯಂತರವಿಲ್ಲ ಆದರೆ ತಿಂಗಳ ಪೆನ್ಷನ್ ಹಣವನ್ನು ನಮಗೆ ನೀಡಬೇಕು ಎಂದು ಷರತ್ತು ಹಾಕಿದರು.
ಬಳಿಕ ಇದರಿಂದ ಬೇಸರಗೊಂಡ ಮಹಿಳೆ ವೃದ್ಧಾಶ್ರಮಕ್ಕೆ ತೆರಳಿದ್ದಾರೆ. ಅವರಿಗೆ ಯಾವ ರೀತಿಯ ಸಹಾಯ ಬೇಕೋ ನಾವು ಮಾಡುತ್ತೇವೆ ಎಂದು ಭಾರತಿನಗರ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications