ಕೊರೊನಾ: ಬೆಂಗಳೂರಿನ ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಸಾವು
ಬೆಂಗಳೂರು, ಏಪ್ರಿಲ್ 27: ನಗರದ ವಿಜಯನಗರದಲ್ಲಿ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇಂದೇ ಅವರ ಹುಟ್ಟಿದ ದಿನವೂ ಆಗಿದ್ದು, ಪೂರಿ ಮಾಡಿಕೊಡುವಂತೆ ಮನವಿ ಮಾಡಿದ್ದರು, ಹಾಗೆಯೇ ಸಂಜೆ ಕೇಕ್ ಕತ್ತರಿಸುವುದಾಗಿಯೂ ತಿಳಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
68 ವರ್ಷದ ವ್ಯಕ್ತಿ ಮೃತರು, ಅವರು ಗಾಯತ್ರಿನಗರದ ನಿವಾಸಿಗಳಾಗಿದ್ದು, ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿಜಯನಗರದಲ್ಲಿರುವ ಕ್ವಾರಂಟೈನ್ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಆ ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು 30-40 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರು ಮೃತಪಟ್ಟು 2 ಗಂಟೆಗಳಾದರೂ ಕ್ವಾರಂಟೈನ್ ಕೇಂದ್ರಕ್ಕೆ ಪೊಲೀಸ್, ಅಥವಾ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಮಹಡಿಯಿಂದ ಹಾರಿ 50 ವರ್ಷದ ಕೊರೊನಾ ಸೋಂಕಿತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.












Click it and Unblock the Notifications