ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ; ಪಶುಸಂಗೋಪನಾ ಇಲಾಖೆ ಮಹತ್ವದ ಆದೇಶ
ಬೆಂಗಳೂರು, ಏಪ್ರಿಲ್ 2: ರಾಜ್ಯದಾದ್ಯಂತ ಭುಗಿಲೆದ್ದಿರುವ ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ನಡುವೆ ಪಶುಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಅದರಂತೆ, ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ.
ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯವಾಗಿದೆ ಎಂದು ಪಶುಸಂಗೋಪನಾ ಇಲಾಖೆಯಿಂದ ಮಹತ್ವದ ಆದೇಶ ನೀಡಲಾಗಿದೆ.
ಪ್ರಾಣಿ ವಧೆ ಮಾಡುವ ಮುನ್ನ ಸ್ಟನ್ನಿಂಗ್ ಮಾಡಿಸಲೇಬೇಕು ಎಂದು ಹೇಳಲಾಗಿದೆ. ಕೋಳಿ, ಕುರಿ ಅಂಗಡಿಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಿ ಪಶುಸಂಗೋಪನಾ ಇಲಾಖೆ ಆದೇಶ ಹೊರಡಿಸಿದೆ.

ಸ್ಟನ್ನಿಂಗ್ ಎಂದರೆ, ಪ್ರಾಣಿಗಳನ್ನು ವಧೆ ಮಾಡುವ ಮುನ್ನ ಪ್ರಜ್ಞೆ ತಪ್ಪಿಸುವ ವಿಧಾನ ಆಗಿದೆ. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗಳನ್ನು ಸಾಯಿಸುವಾಗ ಅವುಗಳಿಗೆ ನೋವು ತಿಳಿಯುವುದಿಲ್ಲ. ಯಾವುದೇ ಅಂಗಡಿಗಳಲ್ಲಿ ಇದನ್ನು ಪಾಲನೆ ಮಾಡದ ಹಿನ್ನೆಲೆ, ಅನೇಕ ದೂರುಗಳು ಪಶು ಸಂಗೋಪನಾ ಇಲಾಖೆಗೆ ಬಂದಿದ್ದವು. ಹೀಗಾಗಿ ಈ ಆದೇಶ ಹೊರಡಿಸಲಾಗಿದೆ.
ಆಹಾರಕ್ಕಾಗಿ ಪ್ರಾಣಿವಧೆ ಮಾಡುವಾಗ ಹಿಂಸೆ ನೀಡಬಾರದು, ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕು. ಬೆಂಗಳೂರು ವ್ಯಾಪ್ತಿಯಲ್ಲಿ 'ಸ್ಟನ್ನಿಂಗ್' ಮಾಡುವುದು ಕಡ್ಡಾಯ ಎಂದು ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಉಮಾಪತಿ ತಿಳಿಸಿದ್ದಾರೆ.
ಪ್ರಾಣಿಗಳಿಗೆ ಹಿಂಸೆ ನೀಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದೇಶ ಮೀರಿದರೆ 50 ಸಾವಿರದಿಂದ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಸ್ಟನ್ನಿಂಗ್ ಹೇಗೆ ಮಾಡಲಾಗುತ್ತದೆ?
ಸ್ಟನ್ನಿಂಗ್ ಮೆಥಡ್ನಿಂದ ಪ್ರಾಣಿಗಳು ನರಳಾಟದಿಂದ ಸಾಯುವುದಿಲ್ಲ. ಸ್ಟನ್ನಿಂಗ್ ವೇಳೆ ಪ್ರಾಣಿಗಳ ತಲೆಗೆ ಜೋರಾಗಿ ಹೊಡೆಯಲಾಗುತ್ತದೆ. ಆಗ ಪ್ರಾಣಿಗಳ ತಲೆಗೆ ಪೆಟ್ಟು ಬಿದ್ದು ಅವುಗಳ ಮೆದುಳು ನಿಷ್ಕ್ರಿಯಗೊಳ್ಳುತ್ತದೆ. ಆ ವೇಳೆ ಪ್ರಾಣಿಗಳನ್ನು ವಧೆ ಮಾಡಲಾಗುತ್ತದೆ. ಹೀಗೆ, ಇನ್ನು ಮುಂದೆ ಕೋಳಿ, ಕುರಿ ಅಂಗಡಿಗಳಿಗೆ ಲೈಸೆನ್ಸ್ ಕೊಡುವಾಗಲೂ ಸ್ಟನ್ನಿಂಗ್ ವ್ಯವಸ್ಥೆ ಕಡ್ಡಾಯ ಆಗಿ ಇರಲೇಬೇಕು.
ಸ್ಟನ್ನಿಂಗ್ ವ್ಯವಸ್ಥೆ ಇಲ್ಲದಿದ್ದರೆ ಪರವಾನಗಿ ನೀಡಬಾರದು. 2001ರ ಸೆಕ್ಷನ್ 6 ಮತ್ತು 4ರ ಅಡಿಯಲ್ಲಿ ಸ್ಟನ್ನಿಂಗ್ ನಿಯಮ ಇದೆ. ನಿಯಮ ಬ್ರೇಕ್ ಮಾಡುವವರಿಗೆ 1960 ಆಕ್ಟ್ ಪ್ರಕಾರ 5 ಸಾವಿರದಿಂದ 50 ಸಾವಿರದವರೆಗೂ ದಂಡ ವಿಧಿಸಲಾಗುವುದು ಎಂದು ಸೂಚನೆ ಕೊಡಲಾಗಿದೆ.
Recommended Video
ಆಕ್ಟ್ ಅಡಿಯಲ್ಲಿ ಪ್ರಾಣಿ ಹಿಂಸೆಯ ಪ್ರಕರಣ ದಾಖಲು ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಆಹಾರಕ್ಕಾಗಿ ಕೋಳಿ, ಕುರಿ ವಧೆ ಮಾಡುವವರು ಸ್ಟನ್ನಿಂಗ್ ನಿಯಮ ಅನುಸರಿಸಬೇಕಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications