ಕಸ ಕಿತ್ತಾಟ: ಕಸ ವಿಲೇವಾರಿ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ
ಬೆಂಗಳೂರು,ಜೂ.18:ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ ಸಿಕ್ಕಿದೆ. ಸರಕಾರದ ಸಂಧಾನಕ್ಕೆ ಮಂಡೂರಿನ ಗ್ರಾಮಸ್ಥರು ಸ್ಪಂದಿಸಿದ್ದರಿಂದ ಈ ಸಮಸ್ಯೆ ಸದ್ಯಕ್ಕೆ ಪರಿಹಾರವಾಗಿದೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡೂರಿನ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು. ಸಭೆ ಆರಂಭದಲ್ಲಿ ಗ್ರಾಮಸ್ಥರು ಸರ್ಕಾರದ ನಿಲುವಿಗೆ ಒಪ್ಪದಿದ್ದರೂ ಕೊನೆಗೆ ಸರ್ಕಾರದ ಭರವಸೆಯ ಮೇಲೆ ಮುಂದಿನ 5 ತಿಂಗಳ ಕಾಲ ಮಂಡೂರಿನಲ್ಲಿ ಕಸ ಸುರಿಯಲು ಅನುಮತಿ ನೀಡಿದರು.
ಮಂಡೂರು ಗ್ರಾಮಸ್ಥರ ಪರ ಪ್ರತಿಭಟನೆ ಕೈಗೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕ ಅರವಿಂದ ಲಿಂಬಾವಳಿ, ಮೇಯರ್ ಬಿ.ಎಸ್. ಸತ್ಯನಾರಾಯಣ, ಬಿಬಿಎಂಪಿ ಉನ್ನತಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
ಕಸ ವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಮಂಡೂರು ಜನತೆ ಮಾಡಿಕೊಂಡಿರುವ ಒಪ್ಪಂದದ ವಿವರಗಳನ್ನು ಮುಂದಿನ ಪುಟದಲ್ಲಿ ನೀಡಲಾಗಿದೆ.

ಡಿಸೆಂಬರ್ 1ರಿಂದ ಕಸ ಸುರಿಯುವಂತಿಲ್ಲ:
ನವೆಂಬರ್ 31ರವರಗೆ ಕಸ ಸುರಿಯಲು ಗ್ರಾಮಸ್ಥರು ಅನುಮತಿ ನೀಡಿದ್ದು ಡಿಸೆಂಬರ್ 1ರಿಂದ ಯಾವುದೇ ಕಾರಣಕ್ಕೂ ಕಸ ಸುರಿಯುವಂತಿಲ್ಲ. ಅಲ್ಲಿಯವರೆಗೆ ಹೊಸ ಸ್ಥಳ ಗುರುತಿಸಲು ಅಗತ್ಯ ಕ್ರಮ ಕೈಗೊಳ್ಳುವುದು.

ತಿಂಗಳಿಗೊಮ್ಮೆ ಪರಿಶೀಲನಾ ಸಭೆ:
ಮಂಡೂರಿನಲ್ಲಿ ಹಾಲಿ ಇರುವ ತ್ಯಾಜ್ಯದ ಮೇಲೆ ಮಣ್ಣಿನ ಹೊದಿಕೆ ಹಾಕಬೇಕು. ಜೊತೆಗೆ ತ್ಯಾಜ್ಯವನ್ನು ಜೈವಿಕ ವಿಧಾನದ ಮೂಲಕ ಸಂಸ್ಕರಿಸಿ ಗೊಬ್ಬರ ಮಾಡಬೇಕು. ಕಸ ವಿಲೇವಾರಿ ಪ್ರಗತಿಯ ಬಗ್ಗೆ ಬಿಬಿಎಂಪಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಬೇಕು. ತಿಂಗಳಿಗೊಮ್ಮೆ ಮಂಡೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು.

ಕಾಂಕ್ರೀಟ್ ಕಂದಕ ನಿರ್ಮಿಸಿ
ಕಸದಿಂದ ಹೊರಬರುವ ಹಾನಿಕಾರಕ ದ್ರವ್ಯ ಭೂಮಿಗೆ ಸೇರದಂತೆ ತಡೆಯಲು ಘಟಕದ ಸುತ್ತಲೂ ಕಾಂಕ್ರೀಟ್ ಕಂದಕ ವನ್ನು ನಿರ್ಮಿಸಬೇಕು. ಸೊಳ್ಳೆ ಮತ್ತು ನೊಣಗಳ ಕಾಟ ನಿವಾರಿಸಬೇಕು.

ಕಸದ ಲಾರಿಗಳಿಗೆ ಸಂಖ್ಯಾ ಫಲಕ
ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಮಾತ್ರ ಕಸ ಸಾಗಣೆ ಮಾಡಬೇಕು. ಕಸದ ಲಾರಿಗಳಿಗೆ ಸಂಖ್ಯಾ ಫಲಕ ಹಾಕಬೇಕು. ದೇವನಹಳ್ಳಿ ಹಾಗೂ ಹೊಸಕೋಟೆಯಿಂದ ಬರುವ ಕಸ ತುಂಬಿದ ಲಾರಿಗಳನ್ನು ನಿಷೇಧಿಸಬೇಕು.

ಗ್ರಾಮಸ್ಥರ ಬೇಡಿಕೆಗಳು:
ಕಸ ಸುರಿಯುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರೆ 144 ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಬಾರದು. ಗ್ರಾಮಸ್ಥರ ಮೇಲೆ ಈಗ ಹಾಕಿರುವ ಪ್ರಕರಣ ವಾಪಸ್ ಪಡೆಯಬೇಕು. ಜೊತೆಗೆ ಆರೋಗ್ಯ ತಪಾಸಣೆ ಉಸ್ತುವಾರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೋಡಿಕೊಳ್ಳಬೇಕು ಎಂದು ಗ್ರಾಮಸ್ಥರು ಬೇಡಿಕೆ ಇಟ್ಟಿದ್ದಾರೆ.

ಸಿಎಂ ಭೇಟಿ:
ಡಿಸೆಂಬರ್ ವರೆಗೆ ಪ್ರತಿ ವಾರವೂ ಮೇಯರ್ ಮಂಡೂರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸುತ್ತಾರೆ. ವಿಧಾನಮಂಡಲ ಅಧಿವೇಶನ ನಡೆಯುವಾಗ ಮುಖ್ಯಮಂತ್ರಿಯವರು ಮಂಡೂರಿಗೆ ಭೇಟಿ ನೀಡಲಿದ್ದಾರೆ. ಅಷ್ಟೇ ಅಲ್ಲದೇ ತಿಂಗಳಿಗೊಮ್ಮೆ ನಾನು ಮಂಡೂರಿಗೆ ತೆರಳಿ ಪರಿಶೀಲನೆ ನಡೆಸುತ್ತೇನೆ ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

ಕಂಪೆನಿಗಳನ್ನು ಓಡಿಸಿ
ಮಂಡೂರಿನಲ್ಲಿ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಸಮಸ್ಯೆಗೆ ಕಾರಣವಾದ ಗಾಯಿತ್ರಿ ಶ್ರೀನಿವಾಸ ಸಂಸ್ಥೆ ಹಾಗೂ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವುದಾಗಿ ಒಪ್ಪಂದ ಮಾಡಿಕೊಂಡಿರುವ ಆ್ಯರ್ಗಾನಿಕ್ ವೇಸ್ಟ್ ಕಂಪನಿಯನ್ನು ಮೊದಲು ಅಲ್ಲಿಂದ ಓಡಿಸಿ ಎಂದು ಶಾಸಕ ಅರವಿಂದ ಲಿಂಬಾವಳಿ ಆಕ್ರೋಶ ವ್ಯಕ್ತಪಡಿಸಿದರು. ಲಿಂಬಾವಳಿ ಹೇಳಿಕೆಗೆ ಗ್ರಾಮಸ್ಥರು ಧ್ವನಿಗೂಡಿಸಿದರು. ಅಂತಿಮವಾಗಿ ಸಭೆಯಲ್ಲಿ ಗಾಯಿತ್ರಿ ಶ್ರೀನಿವಾಸ್ ಕಂಪೆನಿಯ ಅವ್ಯವಹಾರ ತನಿಖೆ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications