ಕಸ ಕಿತ್ತಾಟ: ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ವಿಫಲ
ಬೆಂಗಳೂರು, ಜೂ.14: ಮಂಡೂರಿನ ಕಸದ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆ ಯಾವುದೇ ತೀರ್ಮಾನಕ್ಕೆ ಬಾರದೇ ವಿಫಲವಾಗಿದೆ.
ಕಸ ಹಾಕಲು ಇನ್ನೂ ಆರು ತಿಂಗಳು ಕಾಲಾವಕಾಶ ಕೊಡಬೇಕು ಎಂದು ಮುಖ್ಯಮಂತ್ರಿ ಅವರು ಕೇಳಿದರೆ, ಶನಿವಾರದಿಂದಲೇ ಕಸ ಸುರಿಯಬಾರದು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಈ ನಡುವೆ ಕೆಲ ಗ್ರಾಮಸ್ಥರು ಘಟಕ ಸ್ಥಗಿತಗೊಳಿಸುವುದಾಗಿ ಮುಚ್ಚಳಿಕೆ ನೀಡಿದರಷ್ಟೇ ಮೂರು ತಿಂಗಳ ಕಾಲಾವಕಾಶ ನೀಡುವುದಾಗಿ ಹೇಳಿದ್ದಾರೆ.
ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಬಿಬಿಎಂಪಿಯು ಈ ಹಿಂದೆ ಒಂದು ವರ್ಷ ಕಾಲಾವಕಾಶ ಕೋರಿತ್ತು. ಆ ಸಂದರ್ಭದಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದರೆ ಈ ಸಮಸ್ಯೆ ತಲೆದೋರುತ್ತಿರಲಿಲ್ಲ. ಈಗಾಗಲೇ ನಾಲ್ಕು ಕಡೆ ಕಸ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನಮ್ಮ ಸರ್ಕಾರ ಮಂಜೂರಾತಿ ನೀಡಿದೆ. ಘಟಕಗಳ ಸ್ಥಾಪನೆ ಪ್ರಕ್ರಿಯೆಯೂ ಆರಂಭವಾಗಿದೆ. ತ್ಯಾಜ್ಯ ಸಂಸ್ಕರಣೆ ಆರಂಭವಾಗಲು ಆರು ತಿಂಗಳ ಕಾಲಾವಕಾಶ ಅಗತ್ಯವಿದೆ ಎಂದರು.[ಮಂಡೂರು ಕಸ: ಅನಾರೋಗ್ಯಕ್ಕೆ ಮಹಿಳೆ ಬಲಿ]

ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಮುಖ್ಯಮಂತ್ರಿಗಳು ಸದ್ಯದಲ್ಲೇ ಮಂಡೂರಿಗೆ ಭೇಟಿ ನೀಡಲಿದ್ದಾರೆ. ನಾಲ್ಕು ಯೋಜನೆಗಳ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಲಾಗಿದ್ದು, ಜನವಸತಿಯಿಲ್ಲದ ಪ್ರದೇಶಗಳಲ್ಲಿ ಹೊಸ ಘಟಕಗಳನ್ನು ನಿರ್ಮಿಸುವಂತೆ ಸಿಎಂ ಸೂಚಿಸಿದ್ದಾರೆ. ಹೊಸ ಘಟಕ ಆರಂಭವಾಗುವವರೆಗೆ ಕಸ ಸಾಗಿಸಲು ಆರು ತಿಂಗಳ ಕಾಲಾವಕಾಶ ಕೋರಲಾಗಿದೆ. ಸಭೆಯಲ್ಲಿದ್ದ ಕೆಲವರು ಮೂರು ತಿಂಗಳು ಕಾಲಾವಕಾಶ ನೀಡಲು ಒಲವು ತೋರಿದ್ದಾರೆ ಎಂದು ಹೇಳಿದರು.
ಇನ್ನೊಂದು ಸಭೆ:
ಮೂರು ತಿಂಗಳ ಕಾಲಾವಕಾಶದ ಬಗ್ಗೆ ಮಂಡೂರಿನ ಕೆಲ ಜನರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ಗ್ರಾಮದ ಎಲ್ಲಾ ಜನರೊಂದಿಗೆ ಶನಿವಾರ ಸಭೆ ನಡೆಸಿ ನಮ್ಮ ಅಂತಿಮ ನಿರ್ಧಾರವನ್ನು ಪ್ರಕಟಿಸುವುದಾಗಿ ಗ್ರಾಮಸ್ಥರು ಹೇಳಿದ್ದಾರೆ. ಹೀಗಾಗಿ ಶನಿವಾರ ಅಥವಾ ಭಾನುವಾರ ಇನ್ನೊಂದು ಸಭೆ ನಡೆಯಲಿದ್ದು ಆ ಸಭೆಯಲ್ಲಿ ಸಮಸ್ಯೆ ನಿವಾರಣೆಯಾಗುವ ಸಾಧ್ಯತೆಯಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications