ಕಸ ಗಲಾಟೆ: ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ
ಬೆಂಗಳೂರು, ಜೂ. 12: ನಿಷೇಧಾಜ್ಞೆ ಜಾರಿಗೊಳಿಸಿ ಬಿಬಿಎಂಪಿ ಕಸ ಸಾಗಿಸುತ್ತಿರುವುದು ಮಂಡೂರು ಜನತೆಯನ್ನು ಕೆರಳಿಸಿದ್ದು, ಜೂ.13 ಶುಕ್ರವಾರ ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಕುಮಾರಕೃಪ ರಸ್ತೆಯಲ್ಲಿರುವ ವಲ್ಲಭನಿಕೇತನ ಆಶ್ರಮದಲ್ಲಿ ಬುಧವಾರ ಸಂಜೆ ಮಂಡೂರಿನ ಸುಮಾರು 80 ಗ್ರಾಮಸ್ಥರು ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿಯವರ ಜೊತೆ ನಡೆಸಿದ ಸಭೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ.
ಮಂಡೂರು ನಿವಾಸಿ ಶ್ರೀನಿವಾಸ್ ಕನ್ನಡ ಒನ್ಇಂಡಿಯಾದೊಂದಿಗೆ ಮಾತನಾಡಿ " ಜೂನ್. 12 ಸಂಜೆ ಐದು ಗಂಟೆಗೆ ನಿಷೇಧಾಜ್ಞೆ ತೆರವಾಗಲಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಉಪವಾಸ ಸತ್ಯಗ್ರಹ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಊರಿನಲ್ಲಿ ಕಸ ಸುರಿಯಲು ಬಿಡುವುದಿಲ್ಲ" ಎಂದು ಹೇಳಿದರು[ಮಂಡೂರು ಜನತೆಯ ಕಷ್ಟದ ಕಥೆ ಇಲ್ಲಿದೆ]

ಮಂಡೂರಿನಲ್ಲಿ ಮೇಯರ್ ಗ್ರಾಮ ವಾಸ್ತವ್ಯ:
ಮಂಡೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡುವುದಾಗಿ ಮೇಯರ್ ಕಟ್ಟೆ ಸತ್ಯನಾರಾಯಣ ಹೇಳಿದ್ದಾರೆ. ಮಂಡೂರಿನಲ್ಲಿ ಕಸ ಹಾಕುತ್ತಿರುವುದರಿಂದ ಅಲ್ಲಿನ ಜನರ ಬದುಕು ದುಸ್ತರವಾಗಿದೆ. ಕಸದಿಂದ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಯೋಗ್ಯ ಪರಿಸ್ಥಿತಿ ನಿರ್ಮಿಸಲಾಗುತ್ತಿದೆ. ನಿಷೇಧಾಜ್ಞೆ ತೆರವಾದ ಬಳಿಕ ಅಲ್ಲಿನ ಜನತೆ ಬಯಸಿದ್ದಲ್ಲಿ ಮಂಡೂರಿನಲ್ಲಿ ವಾಸ್ತವ್ಯ ಹೂಡಲು ಸಿದ್ದ ಎಂದು ಸ್ಪಷ್ಟಪಡಿಸಿದ್ದಾರೆ.[ಕಸದ ಸಮಸ್ಯೆ ಬಗೆಹರಿಸಲು ಸ್ಯಾನ್ ಫ್ರಾನ್ಸಿಸ್ಕೋ ನೆರವು]
ವ್ಯಾಸ್ತವ್ಯ ಹೂಡುವುದರ ಜೊತೆಗೆ ಪ್ರತಿವಾರ ಮಂಡೂರಿಗೆ ನೀಡಿ ಭೇಟಿ ಪರಿಶೀಲಿಸಿ ಗ್ರಾಮಸ್ಥರ ಜೊತೆ ನಾಲ್ಕು ಗಂಟೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications