ಮಂಡೂರು ಜನತೆ ಜೊತೆ ಸಂಧಾನ ವಿಫಲ
ಬೆಂಗಳೂರು,ಜೂ.10: ಆರು ತಿಂಗಳ ಕಾಲ ಮಂಡೂರು ಘಟಕಕ್ಕೆ ಕಸ ಸಾಗಿಸಲು ಕಾಲಾವಕಾಶ ನೀಡುವಂತೆ ಮೇಯರ್ ಮತ್ತು ಆಯುಕ್ತರು ಮಾಡಿದ ಮನವಿಯನ್ನು ಮಂಡೂರು ಗ್ರಾಮಸ್ಥರು ತಿರಸ್ಕರಿಸಿದ್ದು ಕಸ ಸಾಗಾಣೆ ಕುರಿತ ಅನಿಶ್ಚಿತತೆ ಮುಂದವರಿದಿದೆ.
ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಸಂಜೆ 5ರಿಂದ ರಾತ್ರಿ 8-30ರವರೆಗೆ ಸುಮಾರು ಮೂರೂವರೆ ಗಂಟೆ ಕಾಲ ಸುದೀರ್ಘ ಸಭೆ ನಡೆದರೂ ಮಂಡೂರು ಗ್ರಾಮಸ್ಥರು ಯಾವುದೇ ಕಾರಣಕ್ಕೂ ಕಸ ಸುರಿಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಕಸ ಸಾಗಣೆ ಸಾಗಾಣೆ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ನಾವು ಅನುಭವಿಸುತ್ತಿರುವ ಕಷ್ಟವನ್ನು ತಡೆಗಟ್ಟಲು ಮನವಿ ಮಾಡಿದ್ದು ತಪ್ಪೇ ಎಂದು ಗ್ರಾಮಸ್ಥರು ಸಭೆಯಲ್ಲಿ ಪ್ರಶ್ನಿಸಿದ್ದಾರೆ.[ಬಿಬಿಎಂಪಿಯಲ್ಲಿ ಅಲಿಬಾಬಾ ಮತ್ತು 40 ಕಳ್ಳರು]
ಮಂಡೂರಿನ ಕಷ್ಟ ನಿಮಗೆ ಗೊತ್ತಗಾಬೇಕಾದರೆ ನಮ್ಮ ಪತ್ನಿ ಮಕ್ಕಳನ್ನು ಮಂಡೂರಿಗೆ ಕರೆ ತನ್ನಿ. ನಂತರ ಅವರ ಅಭಿಪ್ರಾಯವನ್ನು ಪಡೆದು ನೀವೇ ಕಸ ಸುರಿಯುವುದರ ಬಗ್ಗೆ ನಿರ್ಧಾರ ಕೈಗೊಳ್ಳಿ ಎಂದು ಗ್ರಾಮಸ್ಥರು ಸಭೆಯಲ್ಲಿ ಹೇಳಿದ್ದಾರೆ.

ಸಭೆ ಬಳಿಕ ಮೇಯರ್ ಬಿಎಸ್ ಸತ್ಯನಾರಯಣ ಮಾತನಾಡಿ ಮಂಡೂರು ಜನತೆ ಕಷ್ಟ ನಮಗೆಲ್ಲ ಅರಿವಾಗಿದೆ. ಮುಂದೆ ಎಂಟು ವಲಯಗಳ ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್ಗಳು ಸರದಿಯಂತೆ ಮಂಡೂರಿಗೆ ನಿತ್ಯ ಭೇಟಿ ನೀಡಲಿದ್ದಾರೆ. ಅಲ್ಲೇ ಪಾಲಿಕೆ ಕಚೇರಿ ತೆರೆದು ದಿನದ 24 ಗಂಟೆ ಕಾರ್ಯ ನಿರ್ವಹಿಸುವಂತೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು ಎಂದು ಮಂಡೂರು ಜನತೆಗೆ ಭರವಸೆ ನೀಡಿದರು.
ಆಯುಕ್ತ ಲಕ್ಷ್ಮೀನಾರಾಯಣ್ ಮಾತನಾಡಿ ಕಸವನ್ನು ಸಂಸ್ಕರಿಸಿ ಗೊಬ್ಬರವಾಗಿ ಪರಿವರ್ತಿಸಲು ಪಾಲಿಕೆ ಯೋಜನೆ ರೂಪಿಸಿದೆ. ಕಸದ ಪ್ರಮಾಣ ಕಡಿಮೆ ಮಾಡಿ ದುರ್ನಾತ ತಡೆಯಲು ಕ್ರಮ ಕೈಗೊಳ್ಳಲಾಗುವುದು. ನಮ್ಮ ಮೇಲೆ ನಂಬಿಕೆ ಇಡಿ ಎಂದು ಮಂಡೂರು ಗ್ರಾಮಸ್ಥರಲ್ಲಿ ವಿನಂತಿಸಿದರು.
ಮೇಯರ್ ಮತ್ತು ಆಯುಕ್ತರು ಈ ಹಿಂದಿನಿಂದಲೂ ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆ. ಅದರೆ ಅವರ ಭರವಸೆಗಳು ಕಾರ್ಯರೂಪಕ್ಕೆ ಬಂದಿಲ್ಲ. ಕಾನೂನಿಗೆ ಗೌರವ ನೀಡಿ ನಿಷೇಧಾಜ್ಞೆ ಇರುವುದರಿಂದ ಪ್ರತಿಭಟನೆ ನಡೆಸುವುದಿಲ್ಲ. ಆದರೆ ಯಾವುದೇ ಕಾರಣಕ್ಕೂ ಕಸ ಸುರಿಯಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications