ಬೆಂಗಳೂರಲ್ಲಿ ಮಹಿಳೆಯರ ರಕ್ಷಣೆಗೆ ಮನೇಕಾ ಗಾಂಧಿ ಒತ್ತಾಯ
ಬೆಂಗಳೂರು, ಜು.13: ಬೆಂಗಳೂರಿನ ಎಚ್ಆರ್ ಲೇಔಟ್ನಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಜತೆ ಊಬರ್ ಕ್ಯಾಬ್ ಚಾಲಕ ಅನುಚಿತವಾಗಿ ವರ್ತಿಸಿರುವ ಘಟನೆ ಕುರಿತು ಕೇಂದ್ರ ಸಚಿವೆ ಮನೇಕಾ ಗಾಂಧಿ ಕಳವಳ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಕರ್ನಾಟಕ ಸರ್ಕಾರ ಮಹಿಳಾ ಸುರಕ್ಷತೆಯನ್ನು ಬೆಂಗಳೂರಿನಲ್ಲಿ ಕಡೆಗಣಿಸುತ್ತಿದೆ, ಸಿಎಂ ಕುಮಾರಸ್ವಾಮಿ ಅವರು ಕೂಡಲೇ ಈ ಕುರಿತು ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಓಮದು ತಿಂಗಳಲ್ಲಿ ಇಂತಹ ಮೂರು ಪ್ರಕರಣಗಳು ನಡೆದಿವೆ.
I am worried about how the #Karnataka government is totally ignoring women safety in the city. Shri H.D. Kumaraswamy, @CMofKarnataka, should pay attention to this critical issue. 2/2
— Maneka Gandhi (@Manekagandhibjp) July 12, 2018
ಬೆಂಗಳೂರು ನಗರ ಪೊಲೀಸ್ ಆಯುಕ್ತರು ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳ ಮೇಲೆ ಇಂಥಹ ಘಟನೆಗಳು ನಡೆದರೆ ಅಪರಾಧಿಕ ಉತ್ತರದಾಯಿತ್ವ ಹೊರಿಸಬೇಕು ಎಂದು ಸೂಚಿಸಿದ್ದಾರೆ.
ಘಟನೆ ಏನು?: ಮಹಿಳಾ ಟೆಕ್ಕಿಯ ಜೊತೆಗೆ ಊಬರ್ ಚಾಲಕ ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಬಳಿ ನಡೆದಿದೆ. ಮಹಿಳೆಯು ಬೆಳ್ಳಂದೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ, ಕಚೇರಿಗೆ ತೆರಳಲು ಊಬರ್ ಬುಕ್ ಮಾಡಿದ್ದಾರೆ.

ಎಚ್ಆರ್ಲೇಟ್ನಿಂದ ಕಂಪನಿಗೆ ಹೋಗುವ ವೇಳೆ ಚಾಲಕ ಮಾರ್ಗ ಬದಲಾಯಿಸಿದ್ದಾನೆ, ಯಾಕೆ ಮಾರ್ಗ ಬದಲಾಯಿಸಿದ್ದು ಎಂದು ಕೇಳಿದಾಕ್ಷಣ ಆಕೆಯ ಜತೆಗೆ ಅನುಚಿತವಾಗಿ ವರ್ತಿಸಿದ್ದಾನೆ.ಈಗಲೇ ಟ್ರಿಪ್ ಕ್ಯಾನ್ಸಲ್ ಮಾಡುತ್ತೇನೆ, ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ಚಾಲಕ ಹೇಳಿದ್ದಾನೆ, ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ಆಕೆಯನ್ನು ನಿಂತಿದಿಸಿದ್ದಾನೆ, ಟೆಕ್ಕಿಯನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋಗಿದ್ದಾನೆ.
ಮಹಿಳಾ ಟೆಕ್ಕಿ ಕ್ಯಾಬ್ ಕೆಎ 42, ಎ 4692 ಇಟಿಯೋಸ್ನಲ್ಲಿ ಕಂಪನಿಗೆ ತೆರಳುತ್ತಿದ್ದರು. ಟೆಕ್ಕಿ ಟ್ವಿಟ್ಟರ್ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಹಿಂದೆ ಜೀವನ್ ಭೀಮಾ ನಗರ, ಚಿಕ್ಕಜಾಲ, ಏರ್ಪೋರ್ಟ್ ರಸ್ತೆಯಲ್ಲಿ ಇಂಥದ್ದೇ ಪ್ರಕರಣಗಳು ನಡೆದಿತ್ತು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications