ಮಂಗಳೂರು ಗೋಲಿಬಾರ್: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ
Recommended Video
ಬೆಂಗಳೂರು, ಡಿಸೆಂಬರ್ 23: ಮಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಗಲಭೆಯಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಸಿಎಂ, ಮಂಗಳೂರು ಗೋಲಿಬಾರ್ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಅದರ ಜೊತೆಗೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರಿಗೂ ಕಠಿಣ ಶಿಕ್ಷೆಯಾಗಬೇಕು ಎಂದರು.
ಸಿಐಡಿ ತನಿಖೆ ಬೇರೆ, ಮಾಜಿಸ್ಟ್ರೇಟ್ ತನಿಖೆ ಬೇರೆ, ಮಂಗಳೂರು ಇನ್ನಾದರೂ ಶಾಂತವಾಗಿರುತ್ತೆ ಎಂದು ಭಾವಿಸಿರುತ್ತೇನೆ. ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ. ಯಾವುದೇ ಗಲಭೆಗೆ ಪ್ರೋತ್ಸಾಹ ಕೊಡುವವರನ್ನು ಸಹಿಸುವುದಿಲ್ಲ ಎಂದು ತಿಳಿಸಿದರು.

ಈ ಪೌರತ್ವ ಕಾಯ್ದೆಯಿಂದ ಯಾವುದೇ ಅಲ್ಪಸಂಖ್ಯಾತರಿಗೆ ತೊಂದರೆಯಾಗುವುದಿಲ್ಲ, ಇದಕ್ಕೆ ಸಂಬಂಧಿಸಿದಂತೆ ಖುದ್ದು ಪ್ರಧಾನಿ ನರೇಂದ್ರ ಮೋದಿಯೇ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಇಷ್ಟಾದರೂ ಕಾಂಗ್ರೆಸ್ ಪಕ್ಷ ಉದ್ದೇಶಪೂರ್ವಕವಾಗಿ ಪಿತೂರಿ ಮಾಡುತ್ತಿದೆ. ಈ ಬಗ್ಗೆ ಜನರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಿಎಂ, ದೆಹಲಿ ಪ್ರವಾಸವನ್ನು ಮತ್ತೆ ಒಂದು ವಾರ ಮುಂದೂಡಲಾಗಿದೆ. ಒಂದು ವಾರ ಬಿಟ್ಟು ದೆಹಲಿಗೆ ತೆರಳುವುದಾಗಿ ತಿಳಿಸಿದರು. ಇದರಿಂದ ಸಚಿವ ಸ್ಥಾನಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ದೆಹಲಿ ಭೇಟಿಯವರೆಗೂ ಕಾಯಲೇಬೇಕು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications